ಪೌರ ಕಾರ್ಮಿಕರಿಗೆ 7 ತಿಂಗಳಿಂದ ಕೂಲಿ ಇಲ್ಲ


Team Udayavani, May 28, 2018, 4:17 PM IST

closed wine stores 1.jpg

ನಂಜನಗೂಡು: ನಗರಸಭೆಯಲ್ಲಿ ಪ್ರತಿನಿತ್ಯ ದುಡಿಯುತ್ತಿರುವ ಸುಮಾರು 52 ಸಿಬ್ಬಂದಿಗಳಿಗೆ 7 ತಿಂಗಳಿಂದ ಸಂಬಳವೇ ನೀಡಿಲ್ಲ. ಹೀಗಾಗಿ ಆ ಕಾರ್ಮಿಕರು ತಾವು ಮಾಡಿದ ಕೆಲಸಕ್ಕೆ ಕೂಲಿ ನೀಡಿ ಎಂದು ನಂಜನಗೂಡು ನಗರಸಭೆಯ ಆವರಣದಲ್ಲಿ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಶುಕ್ರವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ ಪೌರ ಕಾರ್ಮಿಕರು ಭಾನುವಾರ ಬೆಳಗ್ಗೆ ಬಂದು ನೋಡಿದಾಗ ಶಾಮಿಯಾನ ನೆಲಕಚ್ಚಿದ್ದು ಕಂಡುಬಂದಿತು. ಹಾಗಾಗಿ ಶಾಮಿಯಾನವಿಲ್ಲದೇ ಪ್ರತಿಭಟನೆ ಮುಂದುವರಿಸಿದ್ದು, ನಗರಸಭಾದಾ ದ್ಯಂತ ಕಸ ಎತ್ತುವವರಿಲ್ಲದೆ ನಂಜನಗೂಡು ನಗರಸಭೆ ಕಸದ ತೊಟ್ಟಿಯಾಗಲಾರಂಭಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾ ಕಾರರು, ಪೌರಕಾರ್ಮಿಕರ ನ್ಯಾಯವಾದ ಬೇಡಿಕೆ ಈಡೇರಿಸುವ ಬದಲು ಅಧಿಕಾರಿಗಳು ಕೆಲವು ಕಾರ್ಮಿಕರನ್ನು ಹೆದರಿಸಿ, ಕೆಲಸದಿಂದ ವಜಾ ಮಾಡುವುದಾಗಿ,ಬೆದರಿಸುತ್ತ ಪ್ರತಿಭಟನೆ ಯನ್ನು ಹತ್ತಿಕ್ಕುವ ಕುತಂತ್ರ ಆರಂಭಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಕೂಸು ಹುಟ್ಟುವ ಮೊದಲೇ ಕುಲಾವಿ: ಸ್ವತ್ಛ ಭಾರತದ ಕಲ್ಪನೆಯಡಿ ನಗರಸಭೆ ಚಾಲಕರನ್ನು ನೇಮಿಸಿಕೊಳ್ಳದೆಯೇ ವಾಹನಗಳನ್ನು ಖರೀದಿಸಿ ನಂತರ ಆ ವಾಹನಗಳಲ್ಲಿ ಕಸ ತುಂಬಿ ಸಾಗಾಣಿಕೆ ಮಾಡಲು ಹೊರಗುತ್ತಿಗೆ ಕಾರ್ಮಿಕರ ಮೊರೆ ಹೋಗಿ ಈಗ ಅವರಿಗೂ ಸಂಬಳ ನೀಡಲಾಗದೆ ಪರದಾಟ ನಡೆಸಿದೆ. ಕಸ ತೆಗೆಯಲು 38 ಸಿಬ್ಬಂದಿ ಹಾಗೂ ಅದರ ಸಾಕಾಣಿಕೆಗಾಗಿ 14 ಮಂದಿ ಒಟ್ಟೂ 52 ಕಾರ್ಮಿಕರಿಂದ ದುಡಿಸಿಕೊಂಡ ನಗರಸಭೆ ಈಗ ಅವರಿಗೆ ಸಂಬಳ ಎಂದಾಗ ರಾಜ್ಯ ಸರ್ಕಾರದತ್ತ ಮುಖ ಮಾಡಿ ಮೌನವಾಗಿದೆ.

ಕಳೆದ ನವೆಂಬರ್‌ ತಿಂಗಳನಲ್ಲೇ ಹೊರಗುತ್ತಿಗೆ ಯನ್ನು ರಾಜ್ಯಾದ್ಯಂತ ರದ್ದುಗೊಳಿಸಿದ ಸರ್ಕಾರ ಅದಕ್ಕೆ ಪರ್ಯಾಯ ಮಾರ್ಗವನ್ನೂ ರೂಪಿಸದೆ ಇರುವದರಿಂದಾಗಿ ರಾಜ್ಯಾದ್ಯಂತ ಬಡ ಕಾರ್ಮಿಕರು ದುಡಿದ ಕೆಲಸಕ್ಕೆ ಕೂಲಿ ನೀಡಿ ಎಂದು ಗೋಗರೆಯುವಂತಾಗಿದೆ.

ನಮ್ಮ ಶ್ರಮಕ್ಕೆ ಕೂಲಿ ನೀಡಿ ಎಂದು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವವನ್ನು ಹೊರಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಚಲುವರಾಜು, ಹೇಮಂತ್‌, ಕಮಲೇಶ್‌ ವಹಿಸಿದ್ದಾರೆ. ನಾಗಪ್ಪ, ರಂಗನಾಥ್‌, ರವಿ, ಮಣಿ, ಆರ್ಮುಗಮ್‌ ಸೇರಿದಂತೆ 56ಕ್ಕೂ ಹೆಚ್ಚು ಕಾರ್ಮಿಕರು ಸಾಥ್‌ ನೀಡುತ್ತಿದ್ದಾರೆ. 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.