ಹೆಚ್ಚಾಯ್ತು ತುಂಗಭದ್ರಾ ಒಳಹರಿವು


Team Udayavani, May 28, 2018, 4:36 PM IST

dvg-1.jpg

ಬಳ್ಳಾರಿ: ಅಂತಾರಾಜ್ಯ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ದಿನೇದಿನೆ ಹೆಚ್ಚಾಗುತ್ತಿದ್ದು, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದು ಒಳಹರಿವು ಹೆಚ್ಚಳಕ್ಕೆ ಕಾರಣವಾಗಿದ್ದು, ಮೂರು ಜಿಲ್ಲೆಗಳ ಜನರನ್ನು ಕಾಡುತ್ತಿದ್ದ ಕುಡಿವ ನೀರಿನ ಸಮಸ್ಯೆಯನ್ನೂ ದೂರಮಾಡಿದೆ. 133 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯವುಳ್ಳ ತುಂಗಭದ್ರಾ ಜಲಾಶಯ ಕಳೆದ ಹಲವು ವರ್ಷಗಳಿಂದ ಸಮರ್ಪಕ ಮಳೆ ಕೊರತೆಯಿಂದಾಗಿ ಭರ್ತಿಯಾಗಿರಲಿಲ್ಲ. ಆದರೆ, ಪ್ರಸಕ್ತ ವರ್ಷ ಮೇ ತಿಂಗಳಲ್ಲೇ ಒಳಹರಿವು ಆರಂಭವಾಗಿದೆ. 

ಭಾನುವಾರ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ 3083 ಕ್ಯೂಸೆಕ್‌ ದಾಖಲಾಗಿದೆ. ಇದರಿಂದ ಜಲಾಶಯದಲ್ಲಿ ಸಂಗ್ರಹವಿದ್ದ 2.417 ಟಿಎಂಸಿ ಅಡಿ ಡೆಡ್‌ಸ್ಟೋರೇಜ್‌ ನೀರಿನೊಂದಿಗೆ ಕಳೆದ ಮೂರು ದಿನಗಳಿಂದ ಜಲಾಶಯದಲ್ಲಿ 1.289 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಸದ್ಯ ಒಟ್ಟು 3706 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ನೀರಿನ ಮಟ್ಟ 1578.90 ಅಡಿಯಿದ್ದು, 1356 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯಲ್ಲಿ ಕೇವಲ 1.005 ಟಿಎಂಸಿ ನೀರಿನ ಸಂಗ್ರಹವಿದ್ದು, 510 ಕ್ಯೂಸೆಕ್‌ ಒಳಹರಿವಿತ್ತು. ಪರಿಣಾಮ ಕಳೆದ ವರ್ಷ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ವಿವಿಧೆಡೆ ಕುಡಿವ ನೀರಿನ ಸಮಸ್ಯೆ ತಲೆದೋರಿತ್ತು.
 
ಈ ಬಾರಿ ಮುಂಗಾರು ಮಳೆ ಶೀಘ್ರವಾಗಿ ಆರಂಭಗೊಂಡಿದ್ದು, ಜಲಾನಯನ ಪ್ರದೇಶಗಳಾದ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ದಾವಣಗೆರೆ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಪರಿಣಾಮ ಪ್ರತಿದಿನ ಸರಾಸರಿ 3 ಸಾವಿರ ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಇದು ಮೂರು ಜಿಲ್ಲೆಗಳ ರೈತರಲ್ಲಿ ಸಂತಸ ಮೂಡಿಸಿದೆ. ಇನ್ನೊಂದು ತಿಂಗಳು ಮೂರು ಜಿಲ್ಲೆಗಳಲ್ಲಿ ಕುಡಿವ ನೀರಿಗೆ ಯಾವುದೇ ಸಮಸ್ಯೆ ಆಗಲಾರದು ಎನ್ನುತ್ತವೆ ತುಂಗಭದ್ರಾ ಆಡಳಿತ ಮಂಡಳಿಯ ಅಧಿಕಾರಿಗಳು.

ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ಇದೇ ರೀತಿ ಮುಂದುವರಿದಲ್ಲಿ ಪ್ರಸಕ್ತ ವರ್ಷ ಡೆಡ್‌ಸ್ಟೋರೇಜ್‌ ನೀರನ್ನು ಬಳಸುವ ಪ್ರಶ್ನೆಯೇ ಉದ್ಭವಿಸಲ್ಲ. ಕುಡಿವ ನೀರಿಗೂ ಜನರ ಪರದಾಟ ತಪ್ಪಲಿದೆ. ಆದರೆ, ಪ್ರಕೃತಿಯಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ, ಪ್ರಸಕ್ತ ವರ್ಷ ಮುಂಗಾರು ಮಳೆ ಒಳ್ಳೆಯ ಮುನ್ಸೂಚನೆ ನೀಡಿದ್ದು, ಕಳೆದ ನಾಲ್ಕು ವರ್ಷಗಳಿಂದ ಭರ್ತಿಯಾಗದ ತುಂಗಭದ್ರಾ ಜಲಾಶಯ ಈ ಬಾರಿಯಾದರೂ
ಭರ್ತಿಯಾಗಿ ಎರಡು ಬೆಳೆಗಳಿಗೆ ನೀರು ದೊರೆಯುವಂತಾಗಲಿ ಎಂಬುದು ಜಿಲ್ಲೆಯ ರೈತರ ಒತ್ತಾಸೆಯಾಗಿದೆ.

ಕುಡಿಯಲು ಎಲ್‌ಎಲ್‌ಸಿಗೆ ನೀರು: ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳು ಮತ್ತು ನೆರೆಯ ಆಂಧ್ರ ಪ್ರದೇಶದ ಕರ್ನೂಲ್‌
ಜಿಲ್ಲೆಯ ಎಮ್ಮಿಗನೂರು, ಇತರೆ ಗ್ರಾಮಗಳಿಗೆ ಕುಡಿವ ನೀರು ಪೂರೈಸುವಂತೆ ಆಗ್ರಹಿಸಿ, ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಗಿತ್ತು. ಜಲಾಶಯದಲ್ಲಿ ಬಳಕೆ ಮಾಡಬಾರದಾಗಿದ್ದ ಡೆಡ್‌ಸ್ಟೋರೇಜ್‌ ನೀರನ್ನು ಬಳಸುವುದು ಅಧಿಕಾರಿಗಳಿಗೆ ಅನಿವಾರ್ಯವಾಗಿತ್ತು.

ಮೂರು ದಿನಗಳಿಂದ ಜಲಾಶಯಕ್ಕೆ ನೀರು ಹರಿದು ಬಂದಿರುವುದರಿಂದ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದು, ಕುಡಿಯುವ ಸಲುವಾಗಿ ಎಲ್‌ಎಲ್‌ಸಿ ಕಾಲುವೆಗೆ ಮೊದಲು 500 ಕ್ಯೂಸೆಕ್‌ ನೀರನ್ನು ಬಿಟ್ಟಿದ್ದ ಮಂಡಳಿಯ ಅಧಿಕಾರಿಗಳು ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ ಪುನಃ 700 ಕ್ಯೂಸೆಕ್‌ ಹೆಚ್ಚಿಸಿ, ಒಟ್ಟು 1200 ಕ್ಯೂಸೆಕ್‌ ನೀರನ್ನು ಹೊರಬಿಡಲಾಗಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.