ಮುಂಗಾರು ಮಳೆ:ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ


Team Udayavani, May 29, 2018, 6:55 AM IST

z-dc-meeting-1.jpg

ಮಡಿಕೇರಿ: ಮಳೆಗಾಲದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೆಗೊಳ್ಳುವ ಕುರಿತು ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  
      
ನಾಲ್ಕು ದಿನಗಳಿಂದ ಕೊಡಗು ಜಿಲ್ಲೆ ಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್‌ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಅವರು ಹೇಳಿದ‌ರು.
 
ಮಳೆ  ಹೆಚ್ಚಾದ ಸಂದರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶ ನೀಡಿದರು. 
  
ಭಾಗಮಂಡಲ, ಅಯ್ಯಂಗೇರಿ, ನಾಪೋಕ್ಲು, ಬಲಮುರಿ, ವಿರಾಜಪೇಟೆ ತಾಲ್ಲೂಕಿನ ಕರಡಿ ಗೋಡು, ದುಬಾರೆ ಮತ್ತು ಲಕ್ಷ್ಮಣತೀರ್ಥ ಹಾಗೂ ಸೋಮವಾರಪೇಟೆ ತಾಲೂಕಿನ ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆ ರಸ್ತೆ, ಭೂ ಪ್ರದೇಶ ಪ್ರವಾಹ ಸಂದರ್ಭದಲ್ಲಿ ಜಲಾವೃತವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಅನಾಹುತಗಳಾಗದಂತೆ ಕ್ರಮಕೈಗೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಶೀಲ್ದಾರರು ಮತ್ತು ಸ್ಥಳೀಯ ಗ್ರಾ.ಪಂ.ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. 

ಭೂ ಕುಸಿತ ಹಾಗೂ ರಸ್ತೆಯ ಮೇಲೆ ಮರ ಬಿದ್ದು, ಸಾರಿಗೆ ಸಂಪರ್ಕ ಕಡಿದು ಹೋಗುವ ಸಂದರ್ಭದಲ್ಲಿ ಲೋಕೋಪಯೋಗಿ, ಅರಣ್ಯ, ಗ್ರಾಮೀàಣ ಅಭಿವೃದ್ಧಿ ಎಂಜಿನಿಯರಿಂಗ್‌ ವಿಭಾಗ, ಸೆಸ್ಕ್ ಇಲಾಖೆಗಳು ಹಾಗೂ ಪೋಲೀಸ್‌ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.    
  
ಕಾವೇರಿ ನದಿ ಪಾತ್ರದ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ಗಂಜಿ ಕೇಂದ್ರ ತೆರೆಯುವುದು, ನಿರಾಶ್ರಿತರನ್ನು ಸ್ಥಳಾಂತರ ಮಾಡುವುದು ಮತ್ತಿತರ ಕಾರ್ಯಗಳನ್ನು ಚುರುಕಿನಿಂದ ನಿರ್ವ”ಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.   

ವಿದ್ಯುತ್‌ ಕಂಬಗಳು, ಮರಗಳು ರಸ್ತೆಗೆ ಬಿದ್ದು, ಓಡಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಜನ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದು. ಅಗ್ನಿಶಾಮಕ ಇಲಾಖಾ ಅಧಿಕಾರಿಗಳು ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವ:ಇಸುವುದು. ಹೋಂ ಗಾರ್ಡ್‌ ಗಳನ್ನು ನಿಯೋಜಿಸುವುದು, ನುರಿತ ತಜ್ಞ ಈಜುಗಾರರನ್ನು ಕಾುªರಿಸಿಕೊಳ್ಳುವುದು ಮತ್ತಿತರ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಡಿವೈಎಸ್‌ಪಿ ಸುಂದರರಾಜ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್‌, ಗƒಹ ರಕ್ಷಕದಳದ ಅಧಿಕಾರಿ ಚಂದನ್‌, ಸೆಸ್ಕ್ ಇಇ ಸೋಮಶೇಖರ, ಲೋಕೋಪಯೋಗಿ ಇಲಾಖೆ ಇಇ ವಿನಯಕುಮಾರ್‌, ಪೌರಾಯುಕ್ತೆ ಬಿ.ಶುಭಾ, ತಹಶೀಲ್ದಾರರಾದ ಶಾರದಾಂಬ, ಗೋವಿಂದರಾಜು, ಬಾಡ್ಕರ್‌, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್‌, ಎಇಇ ಗಳಾದ ಇಬ್ರಾಹಿಂ, ಸ್ವಾಮಿ,  ಸುರೇಶ್‌, ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್‌, ತಾ.ಪಂ.ಇಒಗಳಾದ ಜೀವನ್‌ ಕುಮಾರ್‌, ಮತ್ತಿತರರು ಮಾಹಿತಿ ನೀಡಿದರು.  

ಸಹಾಯವಾಣಿ
ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಸಹಾಯವಾಣಿ ತೆರೆಯಲಾಗಿದ್ದು, ಯಾವುದೇ ಅಧಿಕಾರಿ, ಸಿಬಂದಿ, ಸಾರ್ವ ಜನಿಕರು ಅತಿವೃಷ್ಟಿ ಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣಿ ಸಂಖ್ಯೆ 08272-221077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು. 
 
ವಿದ್ಯುತ್‌ ವ್ಯತ್ಯಯ, ಕಂಬ ಬಿದ್ದಿರು ವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯ ವಾಣಿ 1912 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.ಮಳೆಗಾಲದ ಅವಧಿಯಲ್ಲಿ ಎಲ್ಲ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರಜೆ ಬೇಕಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಕೇಂದ್ರ ಕಚೇರಿಯ ಸಭೆ-ಸಮಾರಂಭಗಳು ಇದ್ದಲ್ಲಿ ಗಮನಕ್ಕೆ ತಂದು ತೆರಳಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.  

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.