ಕಾಯಕಲ್ಪಕ್ಕೆ ಕಾಯುತ್ತಿದೆ ಬೆಳ್ಳಾರೆ ಅಂಬೇಡ್ಕರ್‌ ಭವನ


Team Udayavani, May 29, 2018, 4:30 AM IST

ambedkar-bhavan-28-5.jpg

ಬೆಳ್ಳಾರೆ: ಬೆಳ್ಳಾರೆ ಅಂಬೇಡ್ಕರ್‌ ಭವನ ಹಲವು ವರ್ಷಗಳಿಂದ ಕಾಯಕಲ್ಪಕ್ಕಾಗಿ ಕಾಯುತ್ತಿದ್ದು, ದುರಸ್ತಿ ಭಾಗ್ಯ ಇನ್ನೂ ಕೂಡಿಬಂದಿಲ್ಲ. ಹಲವು ವರ್ಷಗಳ ಹಿಂದೆ ಬೆಳ್ಳಾರೆ – ಸುಳ್ಯ ರಸ್ತೆ ಬದಿಯಲ್ಲಿ ಅಂಬೇಡ್ಕರ್‌ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಈಗ ಅದು ತುಂಬ ಶೋಚನೀಯ ಸ್ಥಿತಿಯಲ್ಲಿದೆ. ಮೇಲ್ಛಾವಣಿ ಕುಸಿದು ನಿಂತಿದ್ದು, ಅಲ್ಲಲ್ಲಿ ಸೋರುತ್ತಿದೆ. ರೀಪು, ಪಕ್ಕಾಸು, ಕಿಟಕಿ-ಬಾಗಿಲು ಎಲ್ಲವೂ ಗೆದ್ದಲು ಹಿಡಿದು ಇಂದೋ ನಾಳೆಯೋ ಬೀಳುವ ಸ್ಥಿತಿಯಲ್ಲಿವೆ.

ಬೇಡಿಕೆಯ ಅಂಬೇಡ್ಕರ್‌ ಭವನ
ಅಂಬೇಡ್ಕರ್‌ ಭವನವನ್ನು ಬೆಳ್ಳಾರೆ ಗ್ರಾಮ ಪಂಚಾಯತ್‌ ನಿರ್ವಹಣೆ ಮಾಡುತ್ತಿದ್ದು, ಇದು ಸಾರ್ವಜನಿಕ ಕಾರ್ಯಕ್ರಮಗಳು ನಡೆಯುವ ಸ್ಥಳವೂ ಆಗಿದೆ. ಇದಕ್ಕೆ ಸಾಕಷ್ಟು ಬೇಡಿಕೆಯಿದೆ. ಗ್ರಾಮಸಭೆ ಸಹಿತ ಸಾರ್ವಜನಿಕ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತವೆ. ಈ ಕಟ್ಟಡ ಕುಸಿದರೆ, ಸಾರ್ವಜನಿಕ ಕಾರ್ಯಕ್ರಮ ನಡೆಸಲು ಸಮೀಪದಲ್ಲೆಲ್ಲೂ ಸರಕಾರಿ ಕಟ್ಟಡವಿಲ್ಲ. ಸಾವಿರಾರು ರೂ. ಬಾಡಿಗೆ ನೀಡಿ, ಖಾಸಗಿ ಹಾಲ್‌ಗ‌ಳಲ್ಲಿ ಕಾರ್ಯಕ್ರಮ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುವ ಸಾಧ್ಯತೆ ಇದೆ.


ನಿರ್ವಹಣೆ ಇಲ್ಲ

ಅನೇಕ ವರ್ಷಗಳಿಂದ ಅಂಬೇಡ್ಕರ್‌ ಭವನ ನಿರ್ವಹಣೆ ಇಲ್ಲದೆ ಕುಸಿಯುವ ಹಂತವನ್ನು ತಲುಪಿರುವುದು ಸಾರ್ವಜನಿಕರಲ್ಲಿ ನೋವುಂಟು ಮಾಡಿದೆ. ಭವನ ಬೀಳುವ ಸ್ಥಿತಿಯಲ್ಲಿದೆ, ದುರಸ್ತಿಗೆ ಅನುದಾನ ಕೊಡಿ, ತತ್‌ಕ್ಷಣ ದುರಸ್ತಿ ಮಾಡಿಸಿ ಎಂದು ಗ್ರಾಮಸ್ಥರು ಗ್ರಾಮಸಭೆಗಳಲ್ಲಿ ಹಲವು ಬಾರಿ ಒತ್ತಾಯಿಸಿದ್ದರು. ಆದರೆ, ಬೇಡಿಕೆ ಈಡೇರದಿರುವುದು ಅವರು ಆಕ್ರೋಶಕ್ಕೆ ಕಾರಣವಾಗಿದೆ. ಬೆಳ್ಳಾರೆ ಅಂಬೇಡ್ಕರ್‌ ಭವನ ಸುಮಾರು 35 ವರ್ಷಗಳಷ್ಟು ಹಳೆಯ ಕಟ್ಟಡವಾಗಿದ್ದು, ಇದನ್ನು ಅತಿ ಶೀಘ್ರವಾಗಿ ದುರಸ್ತಿ ಮಾಡಬೇಕು. ಅಥವಾ ಬೇರೊಂದು ಭವನವನ್ನು ನಿರ್ಮಾಣ ಮಾಡಬೇಕೆಂದು ಇಲ್ಲಿಯ ಜನರು ಒತ್ತಾಯಿಸಿದ್ದಾರೆ.

ಅನುದಾನ ಬಿಡುಗಡೆಗೆ ಒತ್ತಾಯ
ಅಂಬೇಡ್ಕರ್‌ ಭವನ ದುರಸ್ತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು. ಆಗ ಸ್ಥಳೀಯ ಕೆಲವು ಮಂದಿ ಅಂಬೇಡ್ಕರ್‌ ಭವನವನ್ನು ದುರಸ್ತಿ ಮಾಡುವುದು ಬೇಡ. ಸ್ಲ್ಯಾಬ್‌ ಅಳವಡಿಸಬೇಕು. ಇಲ್ಲವೇ ನೂತನ ಭವನ ನಿರ್ಮಾಣ ಮಾಡಬೇಕೆಂದು ಹೇಳಿದ್ದರು. ಇದರಿಂದ ದುರಸ್ತಿ ಕಾರ್ಯ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಬೆಳ್ಳಾರೆ ಅಂಬೇಡ್ಕರ್‌ ಭವನಕ್ಕೆ ಅನುದಾನ ಒದಗಿಸಿಕೊಡಬೇಕೆಂದು ಸುಳ್ಯ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಸಮಾಜ ಕಲ್ಯಾಣ ಇಲಾಖೆಗೆ ಬರೆಯಲಾಗಿದೆ.

ದುರಸ್ತಿ ಆಗುತ್ತದೆ
ಈ ಹಿಂದೆ ಅನುದಾನ ಬಿಡುಗಡೆಯಾಗಿತ್ತು. ಸ್ಥಳೀಯರು ದುರಸ್ತಿ ಬೇಡ, ನೂತನ ಭವನ ನಿರ್ಮಾಣ ಮಾಡಬೇಕೆಂದು ಹೇಳಿದ ಕಾರಣ ಅಂಬೇಡ್ಕರ್‌ ಭವನ ಅಭಿವೃದ್ಧಿ ಆಗಿಲ್ಲ. ಈ ಬಾರಿ ಅಂಬೇಡ್ಕರ್‌ ಭವನ ದುರಸ್ತಿ ಆಗುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ.
– ಶಕುಂತಳಾ ನಾಗರಾಜ್‌, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷರು

ಇಲಾಖೆಗೆ ಪತ್ರ
ಬೆಳ್ಳಾರೆ ಅಂಬೇಡ್ಕರ್‌ ಭವನಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆಯಲಾಗಿದೆ.
– ಚಂದ್ರಶೇಖರ್‌ ಪೇರಾಲ್‌, ಪ್ರಭಾರ ಸಮಾಜ ಕಲ್ಯಾಣ ಅಧಿಕಾರಿ, ಸುಳ್ಯ

— ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.