ಕನ್ನಡಿಗರ ಮನ ಗೆಲ್ಲುತ್ತಿರುವ ನೃತ್ಯ ಸಾಧಕಿ ಜ್ಞಾನಾ ಐತಾಳ್‌


Team Udayavani, May 29, 2018, 4:30 AM IST

aithal-28-5.jpg

ವಿಶೇಷ ವರದಿ

ಮಹಾನಗರ: ನೃತ್ಯ ಕ್ಷೇತ್ರದಲ್ಲಿ ಆಕೆಯದ್ದು ಅಮೋಘ ಸಾಧನೆ, ಭರತನಾಟ್ಯದಲ್ಲಿ ರ್‍ಯಾಂಕ್‌, ಹಲವಾರು ರಿಯಾಲಿಟಿ ಶೋಗಳಲ್ಲಿ ಬಹುಮಾನಗಳು, ರಾಜ್ಯ-ರಾಷ್ಟ್ರ ಮಟ್ಟದಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡಿದ ಪ್ರತಿಭೆ, ಕಲಿಕೆಯಲ್ಲೂ ಅತ್ಯುತ್ತಮ ಸಾಧನೆ, ಸಿನಿಮಾ ಕ್ಷೇತ್ರದಿಂದಲೂ ಹತ್ತಾರು ಆಫರ್‌ ಗಳು ! ಇದು ಮಂಗಳೂರಿನ ನೃತ್ಯಪಟು, ನಗರದ ಕೆನರಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜ್ಞಾನಾ ಐತಾಳ್‌ ಅವರ ಸಾಧನೆಯ ನೋಟಗಳು. ಬಾಲ್ಯದಿಂದಲೇ ನೃತ್ಯ ಕ್ಷೇತ್ರದ ಕುರಿತು ವಿಶೇಷ ಆಸಕ್ತಿ ಹೊಂದಿದ್ದ ಜ್ಞಾನ ಐತಾಳ್‌ ಇದೀಗ ಖಾಸಗಿ ವಾಹಿನಿಯೊಂದರ ರಿಯಾಲಿಟಿ ಶೋನಲ್ಲಿ ಫೈನಲ್‌ ಹಂತಕ್ಕೆ ತಲುಪಿದ್ದು, ಕರಾವಳಿ ಭಾಗದ ಈ ಪ್ರತಿಭೆ ಕನ್ನಡಿಗರ ಮನಗೆಲ್ಲು ವಿಶ್ವಾಸದಲ್ಲಿದ್ದಾರೆ. ಈ ಶೋನಲ್ಲಿ ಜ್ಞಾನ ಅವರು ಮಾಸ್ಟರ್‌ ಆಗಿ ಸ್ಪರ್ಧಿಸುತ್ತಿದ್ದು, ಸುರತ್ಕಲ್‌ ನ ರಕ್ಷಾ ಅವರು ಡ್ಯಾನ್ಸರ್‌ ಆಗಿ ಸಾಥ್‌ ನೀಡುತ್ತಿದ್ದಾರೆ. ಕೊರಿಯೋಗ್ರಾಫರ್‌ ತಾರಕ್‌ ಇವರನ್ನು ತರಬೇತುಗೊಳಿಸುತ್ತಿದ್ದಾರೆ. 

ಭರತನಾಟ್ಯದಲ್ಲಿ ರ್‍ಯಾಂಕ್‌
ನೃತ್ಯಗುರು ಬಾಲಕೃಷ್ಣ ಮಂಜೇಶ್ವರ ಅವರಿಂದ ನೃತ್ಯ ಅಭ್ಯಾಸ ಮಾಡಿರುವ ಜ್ಞಾನ ಐತಾಳ್‌ ಅವರು ಭರತನಾಟ್ಯ ಜೂನಿಯರ್‌ ವಿಭಾಗದಲ್ಲಿ ಶೇ. 98 ಅಂಕ ಪಡೆದು ಪ್ರಥಮ ರ್‍ಯಾಂಕ್‌ ಹಾಗೂ ಸೀನಿಯರ್‌ ವಿಭಾಗದಲ್ಲಿ ಶೇ. 93 ಅಂಕ ಪಡೆದು ಮಂಗಳೂರಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರಮಟ್ಟದ ಭರತನಾಟ್ಯದಲ್ಲಿ 2 ವರ್ಷ ವಿನ್ನರ್‌ ಆಗಿ ಮೂಡಿದ್ದಾರೆ. ಕಲಿಕೆಯಲ್ಲೂ ಇವರು ಮುಂದಿನ ಎಸೆಸೆಲ್ಸಿಯಲ್ಲಿ ಉತ್ತಮ ಅಂಕದ ಸಾಧನೆಗಾಗಿ ಕೆನರಾ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣವನ್ನು ಉಚಿತವಾಗಿ ಪಡೆಯುತ್ತಿದ್ದಾರೆ.

ಕುಣಿಯೋಣ ಬಾರಾ ವಿನ್ನರ್‌
ವಿವಿಧ ಖಾಸಗಿ ಚಾನೆಲ್‌ಗ‌ಳಲ್ಲಿ ಪ್ರಸಾರವಾದ ಹಲವಾರು ರಿಯಾಲಿಟಿ ಶೋನಲ್ಲಿ ಏಳು ವರ್ಷದ ಜ್ಞಾನಾ ಅವರು ವಿನ್ನರ್‌, ರನ್ನರ್‌ಅಪ್‌, ಟಾಪ್‌ 20ಯಲ್ಲಿ ಸ್ಥಾನ ಪಡೆದಿದ್ದರು. ತನ್ನದೇ ಆದ ಹೆಜ್ಜೆನಾದ ಎಂಬ ನೃತ್ಯ ತಂಡವನ್ನು ಕಟ್ಟಿಕೊಂಡು ಈಗಾಗಲೇ 500ಕ್ಕೂ ಅಧಿಕ ಪ್ರದರ್ಶನಗಳನ್ನು ನೀಡಿದ್ದಾರೆ. 250ಕ್ಕೂ ಅಧಿಕ ನೃತ್ಯಗಳಿಗೆ ಕೊರಿಯೋಗ್ರಾಫಿಯನ್ನೂ ಮಾಡಿದ್ದಾರೆ.

ಸಾಮಾಜಿಕ ಕಳಕಳಿ!
ತನ್ನ ನೃತ್ಯ ತಂಡದ ಒಂದು ವರ್ಷದ ಗಳಿಕೆಯಲ್ಲಿ  ಹಣ ಉಳಿಸಿಕೊಂಡು ಪ್ರತಿವರ್ಷ ಕ್ಯಾನ್ಸ್‌ರ್‌ ಪೀಡಿತ ಮಗುವಿನ ಚಿಕಿತ್ಸೆಗಾಗಿ ಒಂದಷ್ಟು ಮೊತ್ತವನ್ನು ನೀಡುತ್ತಾರೆ. ನಗರದ KMCಯ ಮಕ್ಕಳ ಕ್ಯಾನ್ಸರ್‌ ತಜ್ಞ ಡಾ| ಹರ್ಷಪ್ರಸಾದ್‌ ಅವರ ಮಾರ್ಗದರ್ಶನದಂತೆ ಅವರು ಸೂಚಿಸಿದ ಮಗುವಿನ ಔಷಧ ವೆಚ್ಚವನ್ನು ಭರಿಸುತ್ತಾರೆ.

ಗೆಲ್ಲುವ ವಿಶ್ವಾಸ ನಮಗಿದೆ
ಜ್ಞಾನಾ ಅವರಿಗೆ ಈಗಾಗಲೇ ಹಲವು ಚಿತ್ರಗಳಲ್ಲಿ ನಟಿಸುವಂತೆ ಆಫರ್‌ ಗಳು ಬಂದರೂ ನಾವು ಅದನ್ನು ನಿರಾಕರಿಸಿದ್ದೇವೆ. ಏಕೆಂದರೆ ಸದ್ಯ ಆಕೆಯ ಕಲಿಕೆಯ ಕಡೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಅದು ಪೂರ್ಣಗೊಂಡ ಬಳಿಕವಷ್ಟೇ ಸಿನೆಮಾ ಆಫರ್‌ ಗಳನ್ನು ಸ್ವೀಕರಿಸುವ ಬಗ್ಗೆ ಯೋಚಿಸುತ್ತೇವೆ. ಈಗ ಆಕೆ ರಿಯಾಲಿಟಿ ಶೋ ಒಂದರ ಅಂತಿಮ ಹಂತಕ್ಕೆ ಬಂದಿದ್ದು, ತೀರ್ಪುಗಾರರಿಂದಲೂ ಆಕೆಯ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ವೋಟ್‌ ಮಾಡುವ ಮೂಲಕ ನಮ್ಮೂರಿನ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಾರೆ ಎಂಬ ವಿಶ್ವಾಸ ನಮಗಿದೆ.
– ನಾಗೇಂದ್ರ ಐತಾಳ್‌, ಜ್ಞಾನಾ ಅವರ ತಂದೆ

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.