ಕರ್ನಾಟಕ ಬಂದ್‌ ಬಿಸಿ ತಟ್ಟಲೇ ಇಲ್ಲ..


Team Udayavani, May 29, 2018, 12:10 PM IST

bell-1.jpg

ಬಳ್ಳಾರಿ: ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯಾವುದೇ ಅಹಿತಕರ ಘಟನೆ, ಕಲ್ಲು ತೂರಾಟಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ.

ಬಂದ್‌ ಹಿನ್ನೆಲೆಯಲ್ಲಿ ನಗರದಲ್ಲಿ ಬೆಳಗ್ಗೆಯಿಂದ ಚಿತ್ರಮಂದಿರ ಹೊರತುಪಡಿಸಿ, ಪೆಟ್ರೋಲ್‌ಬಂಕ್‌, ಸಾರಿಗೆ ಬಸ್‌ಗಳು, ವಿವಿಧ ವಾಣಿಜ್ಯ ಮಳಿಗೆಗಳು ಎಂದಿನಂತೆ ಚಾಲನೆ ಪಡೆದುಕೊಂಡಿದ್ದವು. ನಂತರ ಬೆಳಗ್ಗೆ 9 ಗಂಟೆ ಸುಮಾರಿಗೆ ಬಂದ್‌ ನಡೆಸಲು ಹಸಿರುಶಾಲು ಹಾಕಿಕೊಂಡು ರಸ್ತೆಗಿಳಿಸಿದ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಮತ್ತು ಬಿಜೆಪಿ ಕಾರ್ಯಕರ್ತರು, ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಬಳಿಕ ಕಾಲ್ನಡಿಗೆ ಮೂಲಕ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ನಗರದ ಬೆಂಗಳೂರು ರಸ್ತೆ, ಎಪಿಎಂಸಿ, ಹೊಸ ಬಸ್‌ನಿಲ್ದಾಣ, ಗಡಗಿಚನ್ನಪ್ಪ ವೃತ್ತ, ಎಸ್‌ಪಿ ವೃತ್ತದಲ್ಲಿನ ವಾಣಿಜ್ಯ ಮಳಿಗೆಗಳನ್ನು ಒತ್ತಾಯವಾಗಿ ಮುಚ್ಚಿಸುವ ಮೂಲಕ ಬಂದ್‌ಗೆ ಸಹಕರಿಸುವಂತೆ ಕೋರಿದರು.

ತಾತ್ಕಾಲಿಕವಾಗಿ ಮುಚ್ಚಿಕೊಂಡ ಮಳಿಗೆಗಳ ಮಾಲೀಕರು, ಪ್ರತಿಭಟನಾಕಾರರು ಸ್ವಲ್ಪ ಮುಂದಕ್ಕೆ ತೆರಳುತ್ತಿದ್ದಂತೆ ಪುನಃ ತಮ್ಮ ಮಳಿಗೆಗಳನ್ನು ತೆರೆದರು. ಇನ್ನು ಪ್ರತಿಭಟನಾಕಾರರು ಆಗಮಿಸುವ ಮುನ್ಸೂಚನೆ ಅರಿತ ಹೊಸ ಬಸ್‌ ನಿಲ್ದಾಣದ ಅಧಿಕಾರಿಗಳು, ಕೆಲಹೊತ್ತು ಯಾವುದೇ ಬಸ್‌ ಗಳನ್ನು ರಸ್ತೆಗಳಿಗಿಯದಂತೆ ತಡೆ ಹಿಡಿದರು. ಇದರಿಂದ ಕೆಲಹೊತ್ತು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

ಬಂದ್‌ಗೆ ತುಂಗಭದ್ರಾ ರೈತ ಸಂಘ ಬೆಂಬಲ ಸೂಚಿಸಿದ್ದು, ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಗಡಗಿ ಚನ್ನಪ್ಪ ವೃತ್ತದಲ್ಲಿ ಆಗಮಿಸಿದ್ದ ಆಂಧ್ರ ಪ್ರದೇಶದ ಬಸ್‌ ವೊಂದನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಎಚ್‌.ಆರ್‌.ಗವಿಯಪ್ಪ ವೃತ್ತದಲ್ಲಿನ ಬಸವೇಶ್ವರ ಪುತ್ಥಳಿ ಬಳಿ ಕೆಲಹೊತ್ತು ಧರಣಿ ನಡೆಸಿದರು.

ಶಾಸಕ ಜಿ.ಸೋಮಶೇಖರ್‌ರೆಡ್ಡಿ, ಮಾಜಿ ಸಂಸದರಾದ ಜೆ.ಶಾಂತ, ಸಣ್ಣ ಫಕ್ಕೀರಪ್ಪ, ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ, ಬಿಜೆಪಿ ರೈತ ಘಟಕದ ಎಸ್‌.ಗುರುಲಿಂಗನಗೌಡ, ಪಾಲಿಕೆ ಮಾಜಿ
ಸದಸ್ಯೆ ಶಶಿಕಲಾ, ಜಿಪಂ ಮಾಜಿ ಸದಸ್ಯ ಕೆ.ಎ.ರಾಮಲಿಂಗಪ್ಪ, ಎಚ್‌.ಹನುಮಂತಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಜಿ.ವಿರೂಪಾಕ್ಷಗೌಡ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಲವಂತವಾಗಿ ಮುಚ್ಚಿದ ವಾಣಿಜ್ಯ ಮಳಿಗೆ
ಬಿಜೆಪಿ ಬಂದ್‌ ಹಿನ್ನೆಲೆ ನಗರದಲ್ಲಿ ರಸ್ತೆಗಿಳಿದ ಬಿಜೆಪಿ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ
ಮುಚ್ಚಿಸಿದರು. ನಗರದಲ್ಲಿನ ಪ್ರಮುಖ ರಸ್ತೆಗಳಲ್ಲಿ ಶಾಸಕ ಸೋಮಶೇಖರ್‌ರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ಕಾಲ್ನಡಿಗೆ ಮೂಲಕ ಮೆರವಣಿಗೆ ತೆರಳಿ ಬೆಳಗ್ಗೆ ಅಲ್ಲಲ್ಲಿ ತೆರೆದಿದ್ದ ಖಾಸಗಿ ಬ್ಯಾಂಕ್‌, ವ್ಯಾಪಾರ ಮಳಿಗೆಗಳನ್ನು ಬಲವಂತವಾಗಿ ಮುಚ್ಚಿಸುವ ಮೂಲಕ ಬಂದ್‌ ಆಚರಿಸಿದರು. ಇನ್ನೂ ಎಂದಿನಂತೆ ಸಂಚರಿಸುತ್ತಿದ್ದ ಸರ್ಕಾರಿ ಬಸ್‌ಗಳನ್ನು ಮಧ್ಯಾಹ್ನದವರೆಗೆ ರಸ್ತೆಗೆ ಇಳಿಯದಂತೆ ತಡೆಯಲಾಯಿತು.

ಇದರಿಂದ ದೂರದೂರಿಗೆ ತೆರಳುವ, ಗ್ರಾಮೀಣ ಭಾಗದಿಂದ ಆಗಮಿಸಿದ ಪ್ರಯಾಣಿಕರು, ವಿದ್ಯಾರ್ಥಿಗಳು ಪರದಾಡುವಂತಾಯಿತು. ಇನ್ನು ಆಟೋ ಸೇರಿ ಇತರೆ ಪ್ರಯಾಣಿಕ ವಾಹನಗಳು ಎಂದಿನಂತೆ ಚಾಲನೆ ಪಡೆದುಕೊಂಡಿದ್ದವು.

ಎಂದಿನಂತೆ ವ್ಯಾಪಾರ ವಹಿವಾಟು
ನಗರದಲ್ಲಿ ಬಿಜೆಪಿಯಿಂದ ಕರೆ ನೀಡಿದ ಬಂದ್‌ ವ್ಯಾಪಾರ ವಹಿವಾಟಿನ ಮೇಲೆ ಅಷ್ಟೇನು ಪ್ರಭಾವ ಬೀರಲಿಲ್ಲ. ಬೆಳಗ್ಗೆ ಎಂದಿನಂತೆ ಅಂಗಡಿ, ಮುಂಗಟ್ಟುಗಳನ್ನು ತೆರೆದು ವ್ಯಾಪಾರ ನಡೆಸಲಾಯಿತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭಿಸುತ್ತಿದ್ದಂತೆ ಕೆಲವೆಡೆ ವ್ಯಾಪಾರ ಮಳಿಗೆಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಯಿತು. ಬಳಿಕ ಮಧ್ಯಾಹ್ನದ ವೇಳೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಿಸಲಾಯಿತು.

ಟ್ರಾಫಿಕ್‌ ಜಾಮ್‌…
ಬಂದ್‌ ಹಿನ್ನೆಲೆಯಲ್ಲಿ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಂತೆ ಹಳೆಯ ಬಸ್‌ ನಿಲ್ದಾಣದ ಎದುರಿನ ರಸ್ತೆಯಲ್ಲಿ ವಾಹನದಟ್ಟಣೆ ಹೆಚ್ಚಾಯಿತು. ಇದರಿಂದ ವಾಹನ ಸವಾರರು ಟ್ರಾಫಿಕ್‌ ಜಾಮ್‌ನಿಂದ ಹೊರ ಬರಲು ಹರಸಾಹಸ ಪಡಬೇಕಾಯಿತು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.