ದಿಲ್ಲಿ ಮಾಳವೀಯ ನಗರ ಅಗ್ನಿ ದುರಂತ: ವಾಯುಪಡೆ ಹೆಲಿಕಾಪ್ಟರ್ ಬಳಕೆ
Team Udayavani, May 30, 2018, 10:57 AM IST
ಹೊಸದಿಲ್ಲಿ : ಇಲ್ಲಿನ ಮಾಳವೀಯ ನಗರದ ರಬ್ಬರ್ ಫ್ಯಾಕ್ಟರಿ ಗೋದಾಮಿನಲ್ಲಿ ನಿನ್ನೆ ಸಂಜೆ ಉಂಟಾಗಿದ್ದ ಭಾರೀ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ವಾಯು ಪಡೆಯ ಹೆಲಿಕಾಪ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. 12 ತಾಸುಗಳು ಕಳೆದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಹಾಗಿದ್ದರೂ ಈ ತನಕ ಯಾವುದೇ ಸಾವು ನೋವು ಉಂಟಾದ ವರದಿಗಳು ಬಂದಿಲ್ಲ.
ಮಾಳವೀಯ ನಗರದ ರಬ್ಬರ್ ಫ್ಯಾಕ್ಟರಿಯಲ್ಲಿ ನಿನ್ನೆ ಮಂಗಳವಾರ ಸಂಜೆ 5 ಗಂಟೆಗೆ ಬೆಂಕಿ ಅವಘಡ ಸಂಭವಿಸಿತ್ತು. ಕೂಡಲೇ ಐದು ಅಗ್ನಿ ಶಾಮಕಗಳು ಸ್ಥಳಕ್ಕೆ ಧಾವಿಸಿ ಬಂದು ಕಾರ್ಯಾಚರಣೆಗೆ ಇಳಿದವು; ಆದರೆ ಬೆಂಕಿ ನಿಯಂತ್ರಣಕ್ಕೆ ಬಾರದ ಪ್ರಯುಕ್ತ ಇನ್ನೂ ಹತ್ತು ಅಗ್ನಿ ಶಾಮಕಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಯಿತು. ಈಗ ಒಟ್ಟು 15 ಅಗ್ನಿ ಶಾಮಕಗಳು ಸ್ಥಳದಲ್ಲಿವೆ. ಇವುಗಳಿಗೆ ನೆರವಾಗಲು ವಾಯು ಪಡೆಯ ಎಂಐ 17 ಹೆಲಿಕಾಪ್ಟರ್ ಬಳಸಿಕೊಳ್ಳಲಾಗುತ್ತಿದೆ.
ಬೆಂಕಿಯನ್ನು ಪೂರ್ತಿಯಾಗಿ ನಂದಿಸಲು ಇನ್ನೂ ನಾಲ್ಕು ಐದು ತಾಸುಗಳು ಬೇಕಾಗಬಹುದೆಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಸಂಜೆ ಬೆಂಕಿ ಅನಾಹುತ ಸಂಭವಿಸಿದಾಕ್ಷಣ ಈ ಪ್ರದೇಶದಲ್ಲಿನ ಪೊಲೀಸರ ಆಟೋ ಪಾಂಡ್ನಲ್ಲಿದ್ದ ಅನೇಕ ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್