ಸಾಲಮನ್ನಾ ವಿಚಾರ; ರೈತರ ಜತೆ ಎಚ್ ಡಿಕೆ ಸಭೆ; ಖಜಾನೆ ಭದ್ರವಾಗಿರುತ್ತೆ
Team Udayavani, May 30, 2018, 12:54 PM IST
ಬೆಂಗಳೂರು:ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ 30 ಜಿಲ್ಲೆಗಳಿಂದ ಆಗಮಿಸಿದ್ದ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಾರಂಭವಾದ ಸಭೆಯಲ್ಲಿ ಮೊದಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾತನಾಡಿ, ನಾನು ರೈತರ ಸಾಲಮನ್ನಾ ಮಾಡುವ ವಿಚಾರದಿಂದ ಹಿಂದೆ ಸರಿಯೋದಿಲ್ಲ. ಈ ಸರ್ಕಾರ 5 ವರ್ಷಗಳ ಕಾಲ ಇರುತ್ತೆ, ರೈತರ ಸಾಲವನ್ನೂ ಮನ್ನಾ ಮಾಡುತ್ತೇವೆ, ಖಜಾನೆಯನ್ನೂ ಭದ್ರವಾಗಿಡುತ್ತೇವೆ ಎಂದು ಹೇಳಿದರು.
ಈಗಾಗಲೇ ಕೆಲವು ರಾಜ್ಯಗಳು ಸಾಲ ಮನ್ನಾ ಮಾಡಿದ್ದು, ಆ ಬಗ್ಗೆಯೂ ಮಾಹಿತಿ ತೆಗೆದುಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ರೈತರು ಸಲಹೆ ನೀಡಬೇಕು, ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ತಿಳಿಸಿದರು.
ರಾಜ್ಯದ 30 ಜಿಲ್ಲೆಗಳಿಂದ ರೈತ ಮುಖಂಡರು, ರೈತರು ಆಗಮಿಸಿದ್ದರು. ಒಂದು ಜಿಲ್ಲೆಗೆ ಆದ್ಯತೆಯಂತೆ ಒಬ್ಬೊಬ್ಬರು ರೈತರು ಮಾತನಾಡಿ ಸಲಹೆ, ಸೂಚನೆ ನೀಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!