ಬಡಗನ್ನೂರು ಶಾಲೆಗೆ ಹೊಸ ಕೊಠಡಿ, ಟಿಜಿಟಿ ಶಿಕ್ಷಕರನ್ನು ಒದಗಿಸಿ


Team Udayavani, May 30, 2018, 12:59 PM IST

30-may-11.jpg

ಬಡಗನ್ನೂರು : ಈ ಭಾಗದಲ್ಲಿ ಅತಿ ಹೆಚ್ಚು ಮಕ್ಕಳು ಓದುವ ಸರಕಾರಿ ಶಾಲೆ ಎಂದರೆ, ಬಡಗನ್ನೂರಿನ ದ.ಕ.ಜಿ.ಪಂ. ಉ.ಹಿ.ಪ್ರಾ. ಶಾಲೆ. ಈ ಬಾರಿಯೂ ಈ ಶಾಲೆಯಲ್ಲಿ 106 ವಿದ್ಯಾರ್ಥಿಗಳಿದ್ದಾರೆ.

ಇಲ್ಲಿ ಮೂಲಸೌಕರ್ಯಗಳಿಗೆ ಕೊರತೆ ಇಲ್ಲ. ಈ ಶಾಲೆ 1948ರಲ್ಲಿ ಒಂದೇ ಕೊಠಡಿಯಿಂದ ಆರಂಭವಾಗಿದೆ. ಇದೇ ಕೋಣೆಯಲ್ಲಿ ಈಗಲೂ ಒಂದರಿಂದ ಮೂರನೇ ತರಗತಿ ಮಕ್ಕಳಿಗೆ ಪಾಠ ಮಾಡುತ್ತಾರೆ. ಶಾಲೆಯ ವಿಶೇಷ ದಿನಗಳಲ್ಲಿ ಸಭೆ-ಸಮಾರಂಭ ಆಯೋಜಿಸುತ್ತಾರೆ. ಈ ಕಟ್ಟಡ ಮೇಲ್ಛಾವಣಿ ಮುರಿದು ನಿಂತಿದ್ದು, ಗೋಡೆಗಳು ಒಡೆದಿವೆ. ಎರಡು ವರ್ಷಗಳಿಂದ ಮರದ ಕಂಬವೊಂದರ ಆಧಾರ ನೀಡಿ, ಛಾವಣಿಯನ್ನು ನಿಲ್ಲಿಸಲಾಗಿದೆ. ಇದರ ಚಿತ್ರಗಳೊಂದಿಗೆ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಕಳೆದ ಮಳೆಗಾಲದ ಸಂದರ್ಭದಲ್ಲಿ ಬೇರೆ ಕೊಠಡಿಗೆ ಮಕ್ಕಳನ್ನು ವರ್ಗಾಯಿಸಿಕೊಂಡು ತರಗತಿ ಮುಂದುವರಿಸಲಾಗಿತ್ತು. ಮುರಿದು ಬೀಳುವ ಮುನ್ನ ಕೊಠಡಿಯನ್ನು ತ್ವರಿತವಾಗಿ ದುರಸ್ತಿ ಮಾಡಬೇಕು ಇಲ್ಲವೇ ಹೊಸ ಕೊಠಡಿ ನಿರ್ಮಾಣಕ್ಕೆ ಅನುದಾನ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಿ.ಜಿ.ಟಿ. ಶಿಕ್ಷಕರು ಬೇಕು ಇಲ್ಲಿ ಎಂಟನೇ ತರಗತಿ ವರೆಗೆ ಇರುವುದರಿಂದ ಟಿ.ಜಿ.ಟಿ. ಶಿಕ್ಷಕರ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಇದು ಮುಖ್ಯವೆನಿಸಿದೆ. ಒಂದು ವರ್ಷದಿಂದ ಈ ಹುದ್ದೆ ಖಾಲಿ ಇದ್ದು, ತತ್‌ಕ್ಷಣ ಭರ್ತಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ಸ್ಪಂದಿಸಿದರೆ ಉತ್ತಮ
ಕಳೆದ ಸಾಲಿನಲ್ಲಿ ಮಳೆಗಾಲದ ಸಂದರ್ಭದಲ್ಲಿ ಮಕ್ಕಳನ್ನು ಬೇರೆ ಕೊಠಡಿಗೆ ವರ್ಗಾಯಿಸಿಕೊಂಡು ತರಗತಿಗಳನ್ನು ಮುಂದುವರಿಸಲಾಗಿದೆ. ಈ ಭಾರಿ ಮಳೆಗೆ ಕೊಠಡಿಯ ಛಾವಣಿ ಮುರಿದು ಬೀಳುವ ಅಪಾಯವಿದೆ. ಗೋಡೆಗಳೂ ಶಿಥಿಲವಾಗಿವೆ. ಇಲಾಖೆ ಹಾಗೂ ಜನಪ್ರತಿನಿಧಿಗಳು ತತ್‌ ಕ್ಷಣವೇ ಸ್ಪಂದಿಸಿದರೆ ಉತ್ತಮ.
– ತ್ಯಾಂಪಣ್ಣ ಸಿ.ಎಚ್‌.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ

ಮನವಿ ಮಾಡಿದ್ದೇವೆ
ಎಂಟನೇ ತರಗತಿಯ ವರೆಗೆ ಇರುವುದರಿಂದ ಟಿ.ಜಿ.ಟಿ. ಶಿಕ್ಷಕರ ಅಗತ್ಯ ಇದೆ. ಈ ಬಗ್ಗೆ ಇಲಾಖೆಗೆ ಮನವಿ ಮಾಡಲಾಗಿದೆ. ಟಿ.ಜಿ.ಟಿ. ಶಿಕ್ಷಕರನ್ನು ಒದಗಿಸುವ ಭರವಸೆ ನೀಡಿದ್ದಾರೆ. ಅದಷ್ಟು ಬೇಗ ನೇಮಕಾತಿಯಾದರೆ ಮಕ್ಕಳ ಕಲಿಕೆಗೆ ಸಹಕಾರಿ. 70 ವರ್ಷ ಹಳೆಯ ಕೊಠಡಿಯ ಛಾವಣಿ ಹಾಗೂ ಗೋಡೆ ಶಿಥಿಲವಾಗಿದ್ದು, ಮಳೆಗಾಲದಲ್ಲಿ ಇಲ್ಲಿ ತರಗತಿ ನಡೆಸುವುದು ಕ್ಷೇಮಕರವಲ್ಲ. ಇಲಾಖೆಗೆ, ಶಾಸಕರಿಗೆ ಮನವಿ ನೀಡಿಯೂ ಪ್ರಯೋಜನವಾಗಿಲ್ಲ. ಈ ಎರಡು ಸಮಸ್ಯೆಗಳಿಗೆ ಇಲಾಖೆ ಕೂಡಲೇ ಸ್ಪಂದಿಸಬೇಕು. 
– ಹರಿಣಾಕ್ಷಿ ಎ.,
ಮುಖ್ಯ ಶಿಕ್ಷಕಿ

ದಿನೇಶ್‌ ಬಡಗನ್ನೂರು

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.