2 ಹಂತಗಳಲ್ಲಿ ಸಾಲ ಮನ್ನಾ; ಅನುಷ್ಠಾನಕ್ಕೆ 15 ದಿನಗಳ ಸಮಯ ಕೇಳಿದ ಸಿಎಂ


Team Udayavani, May 30, 2018, 3:05 PM IST

hd-kumarswamy.jpg

ಬೆಂಗಳೂರು: ಕೃಷಿ ಸಾಲ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಅವರು ರೈತ ಮುಖಂಡರೊಂದಿಗೆ ಬುಧವಾರ ಸುಧೀರ್ಘ‌ ಚರ್ಚೆ ನಡೆಸಿ 2 ಹಂತಗಳಲ್ಲಿ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ.  ಸಾಲ ಮನ್ನಾ  ಅನುಷ್ಠಾನ ಪ್ರಕ್ರಿಯೆ ಆರಂಭಿಸಲು 15 ದಿನಗಳ ಕಾಲಾವಕಾಶವನ್ನೂ  ಕೋರಿದ್ದಾರೆ. 

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್‌ಡಿಕೆ ”ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿದೇಶದಿಂದ ಬಂದ ಬಳಿಕ ಅವರೊಂದಿಗೆ ಚರ್ಚೆ ಮಾಡಿ, ಸಾಲ ಮನ್ನಾ ಕುರಿತು ತಾಲೀಮು ನಡೆಸಿ 15 ದಿನಗಳಲ್ಲಿ ಸರ್ಕಾರ ರೂಪುರೇಷೆಗಳನ್ನು ಪ್ರಕಟಿಸಲಿದೆ. ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸಬೇಕಾಗಿದೆ” ಎಂದರು. 

ರೈತರನ್ನು  ಸಂಪೂರ್ಣ ಋಣ ಮುಕ್ತರನ್ನಾಗಿ ಮಾಡಿ ಪತ್ರವನ್ನು ಮನೆ ಬಾಗಿಲಿಗೆ ಕಳುಹಿಸುತ್ತೇನೆ ಇದು ನನ್ನ ಬದ್ಧತೆಯಾಗಿದೆ ಎಂದು ಸಿಎಂ ಸಭೆಯಲ್ಲಿ ಘೋಷಿಸಿದ್ದಾರೆ.

‘ಮೊದಲ ಸ್ಕೀಂನಲ್ಲಿ  ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡುವ ಭರವಸೆ ನೀಡುತ್ತೇನೆ. ಆರ್ಥಿಕ ಶಿಸ್ತಿನ ವ್ಯಾಪ್ತಿಯಲ್ಲೇ ಸಾಲಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ’ ಎಂದು ತಿಳಿಸಿದರು.  

ವಾಣಿಜ್ಯ ಬ್ಯಾಂಕ್‌ ಅಧಿಕಾರಿಗಳು, ಸಹಕಾರಿ ಬ್ಯಾಂಕ್‌ನ ಅಧಿಕಾರಿಗಳು, ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರುವುದಾಗಿ ಸಿಎಂ ತಿಳಿಸಿದರು. 

 ಮೊದಲ ಅವಧಿಯಲ್ಲಿ 1-04-2009 ರಿಂದ 31-12-2017 ರ ವರೆಗಿನ ರೈತರ ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಿದರು. 

ಉಳಿದ ಸಾಲವನ್ನು ಆದ್ಯತೆಯ ಮೇರೆಗೆ ಚರ್ಚೆ ನಡೆಸಿ ಈ ಬಗ್ಗೆ ತೀರ್ಮಾನಕ್ಕೆ ಬರುವುದಾಗಿ ಹೇಳಿದರು. 

ಮೊದಲ ಹಂತದಲ್ಲಿ  ಈ ಸಾಲ ಮನ್ನಾ ಇಲ್ಲ 
1 ಚುನಾಯಿತ ಸದಸ್ಯರ ಸಾಲ ಮನ್ನಾ ಇಲ್ಲ 
2.ಕೃಷಿ ಸಾಲ ಪಡೆದು ಉದ್ಯಮಕ್ಕೆ ಬಳಸಿದವರ ಸಾಲ ಮನ್ನಾ ಇಲ್ಲ

3.ಸತತ 3 ವರ್ಷ  4 ಲಕ್ಷ ರೂಪಾಯಿ ಆದಾಯ ತೆರಿಗೆ ಕಟ್ಟಿದ ರೈತರ ಸಾಲ ಮನ್ನಾ ಇಲ್ಲ .
4.ಸಹಕಾರ ಬ್ಯಾಂಕ್‌ ಪದಾಧಿಕಾರಿಗಳಾಗಿ 3 ಲಕ್ಷ ರೂಪಾಯಿ ಆದಾಯ ಇರುವವರ ಸಾಲ ಮನ್ನಾ ಇಲ್ಲ. 
5.ನಗರ ಪಾಲಿಕೆ  ವ್ಯಾಪ್ತಿಯ ವಾಣಿಜ್ಯ ಬ್ಯಾಂಕ್‌ಗಳಲ್ಲಿ ಸಾಲ ಪಡೆದವರ ಸಾಲ ಮನ್ನಾ ಇಲ್ಲ. 

ಕಾಂಗ್ರೆಸ್‌ ವಿರೋಧ ಇಲ್ಲ
ರೈತರ ಸಾಲ ಮನ್ನಾ ವಿಚಾರದಲ್ಲಿ  ಕಾಂಗ್ರೆಸ್‌ ವಿರೋಧ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು. ಸಾಲ ಮನ್ನಾ ಕುರಿತು ತಜ್ಞರ ಸಮಿತಿ ರಚಿಸುವ ಅನಿವಾರ್ಯತೆ  ಇದೆ’ ಎಂದರು. 

ರೈತರ ಮುಖಂಡರ ಪ್ರಶ್ನೆಗಳ ಮಳೆ 
ಸಭೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಹಲವು ಪ್ರಶ್ನೆಗಳನ್ನು ಕೇಳಿ ರೈತರ ಎಲ್ಲಾ ರೀತಿಯಲ್ಲಿ ಋಣ ಮುಕ್ತರನ್ನಾಗಿಸಬೇಕು ಎಂದು ಮನವಿ ಮಾಡಿದರು. 

ಬಿಜೆಪಿಯಿಂದ ಶಾಸಕ ಗೋವಿಂದ ಕಾರಜೋಳ ಅವರು ಪ್ರತಿನಿಧಿಯಾಗಿ ಭಾಗವಹಿಸಿದ್ದರು. ರೈತ ಮುಖಂಡರೋರ್ವರು ಕೇಂದ್ರ ಸರ್ಕಾರದ ವಿಚಾರ ಪ್ರಸ್ತಾವಿಸಿದಾಗ ವಿಷಯಾಂತರವಾಗುವುದು ಬೇಡ ಎಂದು ಕಾರಜೋಳ ಕಿಡಿ ಕಾರಿದರು. ಈ ವೇಳೆ ರೈತರು ಮತ್ತು ಕಾರಜೋಳ ಅವರ ನಡುವೆ ವಾಗ್ವಾದ ನಡೆಯಿತು. 

ಬಿಎಸ್‌ವೈ ಕಿಡಿ

ಕುಮಾರಸ್ವಾಮಿ ಅವರು ಬಜೆಟ್‌ನಲ್ಲಿ ಘೋಷಿಸಿರುವಂತೆ 53 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಬೇಕು. ಕೊಟ್ಟ ಮಾತು ತಪ್ಪಿದಲ್ಲಿ ಹೋರಾಟ ನಡೆಸಲು ರೂಪು ರೇಷೆ ಸಿದ್ದಪಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಗುಡುಗಿದ್ದಾರೆ. 

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.