ನಾಲ್ಕನೇ ಹಣಕಾಸು ಆಯೋಗದ ವರದಿ ಸಲ್ಲಿಕೆ
Team Udayavani, May 31, 2018, 6:55 AM IST
ಬೆಂಗಳೂರು: ರಾಜ್ಯ ನಾಲ್ಕನೇ ಹಣಕಾಸು ಆಯೋಗ ಬುಧವಾರ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆಯೋಗದ ಸದಸ್ಯ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ.ಎಚ್.ಶಶಿಧರ್ ಅವರು ವರದಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಿದರು.
ರಾಜ್ಯಪಾಲರು 2015ರ ಡಿಸೆಂಬರ್ 21ರಂದು ನಾಲ್ಕನೇ ಹಣಕಾಸು ಆಯೋಗ ರಚಿಸಿದ್ದು,ಅದರಂತೆ ಆಯೋಗವು ವರದಿ ಸಿದ್ಧಪಡಿಸಿ ರಾಜ್ಯಪಾಲರಿಗೆ ಸಲ್ಲಿಸಿತ್ತು. ಅದರ ಒಂದು ಪ್ರತಿಯನ್ನು ಸರ್ಕಾರಕ್ಕೂ ಸಲ್ಲಿಸಲಾಗಿದೆ. ಆಯೋಗ ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ ಬಳಿಕ ರಾಜ್ಯಪಾಲರು ತಮ್ಮ ಶಿಫಾರಸುಗಳೊಂದಿಗೆ ಅದನ್ನು ಸರ್ಕಾರಕ್ಕೆ
ಕಳುಹಿಸಿಕೊಡಲಿದ್ದಾರೆ. ನಂತರ ಸರ್ಕಾರ ಅದನ್ನು ಪರಿಶೀಲಿಸಿ ಅನುಷ್ಟಾನಕ್ಕೆ ಕ್ರಮ ಕೈಗೊಳ್ಳಬೇಕಾಗುತ್ತದೆ.
ರಾಜ್ಯ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳ ನಡುವೆ ತೆರಿಗೆಗಳು, ಕರ್ತವ್ಯಗಳು, ಸುಂಕಗಳು ಮತ್ತು ಶುಲ್ಕದ ನಿವ್ವಳ ಆದಾಯ ವಿತರಣೆ, ಸ್ಥಳೀಯ ಸಂಸ್ಥೆಗಳಿಗೆ ನಿಯೋಜಿಸಬಹುದಾದ ತೆರಿಗೆ, ಕರ್ತವ್ಯ, ಸುಂಕ ಮತ್ತು ಶುಲ್ಕಗಳನ್ನು ನಿರ್ಣಯಿಸುವುದು, ರಾಜ್ಯದ ಏಕೀಕೃತ ಹಣಕಾಸು ವ್ಯವಸ್ಥೆಯಿಂದ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡುವುದು, ಲಭ್ಯವಿರುವ ಸಂಪನ್ಮೂಲಗಳ ನಿರ್ವಹಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಸುಧಾರಿಸಲು ಅಗತ್ಯವಾದ ಕ್ರಮಗಳನ್ನು ಆಯೋಗ ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ