ನಟ ಚಂದನ್ ಅಗಲುವಿಕೆ;ಪುತ್ರನನ್ನು ಕೊಂದು ಪತ್ನಿ ಆತ್ಮಹತ್ಯೆ
Team Udayavani, May 31, 2018, 12:12 PM IST
ದೊಡ್ಡಬಳ್ಳಾಪುರ : ಕಿರುತೆರೆ ನಿರೂಪಕ ಹಾಗೂ ನಟ ಚಂದನ್ (ಚಂದ್ರಶೇಖರ್) ಅವರ ಅಕಾಲಿಕ ಮರಣದಿಂದ ತೀವ್ರವಾಗಿ ನೊಂದಿದ್ದ ಪತ್ನಿ ಮೀನಾ ಕತ್ತು ಕೊಯ್ದು ಪುತ್ರನನ್ನು ಹತ್ಯೆಗೈದು ಬಳಿಕ ತಾನು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಗುರುವಾರ ನಡೆದಿದೆ.
ಮೇ 24 ರಂದು ದಾವಣಗೆರೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಚಂದನ್ ಮೃತಪಟ್ಟಿದ್ದರು.
ಪತಿಯ ಅಗಲುವಿಕೆಯ ನೋವಿನಲ್ಲಿದ್ದ ಮೀನಾ(38) ಇಂದು ಬೆಳಗ್ಗೆ ಏಕಾಏಕಿ 13 ವರ್ಷದ ಪುತ್ರ ತುಷಾರ್ನನ್ನು ಕತ್ತು ಕೊಯ್ದು ಹತ್ಯೆಗೈದು ಬಳಿಕ ತಾನು ಆ್ಯಸಿಡ್ ಸೇವಿಸಿದ್ದಾರೆ. ಪುತ್ರ ಸಾವನ್ನಪ್ಪಿದ್ದು, ಮೀನಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತರಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸಂಜೆ ಕೊನೆಯುಸಿರೆಳೆದಿದ್ದಾರೆ.
ಕಾರ್ಯಕ್ರಮವೊಂದಕ್ಕೆ ಕಾರಿನಲ್ಲಿ ನಾಲ್ವರು ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದಾಗ ದಾವಣಗೆರೆ ಸಮೀಪದ ಹನಗವಾಡಿ ಗ್ರಾಮದ ಹೆದ್ದಾರಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಚಂದನ್ ಸೇರಿದಂತೆ ಇಬ್ಬರು ಮೃತಪಟ್ಟು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!