ಮುಂಗಾರು ಪೂರ್ವದಲ್ಲೇ ಮೈದುಂಬಿದ ಪಯಸ್ವಿನಿ


Team Udayavani, May 31, 2018, 4:41 PM IST

31-may-17.jpg

ಸುಳ್ಯ : ಭಾಗಮಂಡಲ ಭಾಗದಲ್ಲಿ ಭರ್ಜರಿ ಮಳೆ ಸುರಿದ ಹಿನ್ನೆಲೆಯಲ್ಲಿ ಸುಳ್ಯ ನಗರದ ಸನಿಹದಲ್ಲಿ ಹಾದು ಹೋಗಿರುವ ಪಯಸ್ವಿನಿ ಮುಂಗಾರು ಪೂರ್ವದಲ್ಲಿಯೇ ತುಂಬಿ ಹರಿದು ಕೃಷಿಕರ ಮೊಗದಲ್ಲಿ ಸಂತಸ ಮೂಡಿದೆ.

ಮಡಿಕೇರಿ ತಾಲೂಕಿನ ಭಾಗಮಂಡಲದ ಪಶ್ಚಿಮ ದಿಕ್ಕಿನಲ್ಲಿ ಉಗಮಗೊಂಡು ಜೋಡುಪಾಲದ ಮೂಲಕ ಅರಂತೋಡು, ಸುಳ್ಯ ನಗರ, ಪೈಚಾರು, ಜಾಲ್ಸೂರು, ಪಂಜಿಕಲ್ಲು, ದೇವರಗುಂಡ ಮುರೂರು ಮೂಲಕ ಸಾಗಿ ಕೇರಳ ಸೇರುತ್ತದೆ. ಬೇಸಗೆ ಕಾಲದಲ್ಲಿ ಈ ನದಿ ತಟದೊದ್ದಗಿನ ಕೃಷಿಕರಿಗೆ ಪಯಸ್ವಿನಿಯೇ ಜೀವಧಾರೆ. ಸುಳ್ಯದ ನಗರಕ್ಕೆ ಕುಡಿಯುವ ನೀರಿಗೂ ಇದೆ ಮೂಲವಾಗಿದೆ.

ಜೀವಕಳೆ
ಎರಡು ವರ್ಷದ ಹಿಂದೆ ಎಪ್ರಿಲ್‌, ಮೇ ತಿಂಗಳಿನಲ್ಲಿ ಪಯಸ್ವಿನಿ ಸಂಪೂರ್ಣ ಬತ್ತಿ ಬರಡಾಗಿತ್ತು. ಆಗ ಕುಡಿಯುವ ನೀರಿಗೂ ಬರ ಬರುವ ಸಂದರ್ಭ ಎದುರಾಗಿತ್ತು. ಜೂನ್‌ ಮೊದಲ ವಾರದಲ್ಲಿ ಮಳೆಯಾದ ಕಾರಣ, ಆತಂಕ ದೂರವಾಗಿತ್ತು. ಆ ವರ್ಷ ಜುಲೈ ಅನಂತರವೇ ಮಳೆ ಹೆಚ್ಚಳಗೊಂಡು ನದಿಯಲ್ಲಿ ನೀರಿನ ಹರಿವು ಕಂಡಿತ್ತು. ಕಳೆದ ವರ್ಷವೂ ಬಿಸಿಲಿನ ತಾಪ ಮೇ ಅಂತ್ಯದ ತನಕ ಇದ್ದು, ಮಳೆ ಬಂದಿದ್ದರೂ, ನೀರಿನ ಮಟ್ಟ ಹೆಚ್ಚಳಗೊಂಡಿರಲಿಲ್ಲ.

ಮುಂಗಾರು ಪೂರ್ವ ಮಳೆ
ಈ ಬಾರಿ ಮಾರ್ಚ್‌, ಎಪ್ರಿಲ್‌, ಮೇ ತಿಂಗಳಿನಲ್ಲಿ ಮಳೆಯಾಗಿದೆ. ಪಯಸ್ವಿನಿ ಉಗಮದ ಸ್ಥಳದಲ್ಲಿ ಮುಂಗಾರು ಪೂರ್ವ ಮಳೆ ನಿರೀಕ್ಷೆಗೂ ಮೀರಿ ಸುರಿದ ಕಾರಣ, ಮೇ ಮೊದಲ ವಾರದಲ್ಲಿಯೇ ನದಿ ಹರಿವು ಹೆಚ್ಚಾಗಿತ್ತು.

ಮೇ 9ರಂದು ಸುರಿದ ಮಳೆಯಿಂದ ನಗರದ ಕುಡಿಯುವ ನೀರಿನ ಪೂರೈಕೆಗಾಗಿ ನಾಗಪಟ್ಟಣದ ಬಳಿ ನಿರ್ಮಿಸಲಾದ ಮರಳಿನ ಕಟ್ಟದಿಂದ ಹೊರ ಹರಿವು ಕಂಡಿತ್ತು. ಮಾರ್ಚ್‌ನಲ್ಲಿ 49 ಮಿ.ಮೀ., ಎಪ್ರಿಲ್‌ನಲ್ಲಿ 125 ಮಿ.ಮೀ., ಮೇ ತಿಂಗಳಲ್ಲಿ 516 ಮಿ.ಮೀ. ಮಳೆ ಸುರಿದಿದೆ. ಇವೆಲ್ಲವೂ ನದಿಯ ನೀರಿನ ಮಟ್ಟ ಹೆಚ್ಚಳಕ್ಕೆ ಪೂರಕವಾಗಿವೆ.

ನೀರಿನ ಸೆಲೆ
ಕೆಲ ದಿನಗಳಿಂದ ಮಳೆಯಾದ ಪರಿಣಾಮ ಕೆಲವೆಡೆ ಬಾವಿ, ಕೆರೆಯಲ್ಲಿ ನೀರಿನ ಸೆಲೆ ಕಂಡಿದೆ. ಸಣ್ಣ ಪುಟ್ಟ ತೋಡು, ಹೊಳೆಗಳಲ್ಲಿಯು ಕೆಂಬಣ್ಣದ ನೀರು ಹರಿದಿದೆ. ಮಳೆ ನಿರಂತರವಾಗಿ ಸುರಿದರೆ, ನೀರಿನ ಮೂಲಗಳು ಭರ್ತಿ ಆಗುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.