ಮಲ್ಪೆ ಬಂದರಲ್ಲಿ ಲಂಗರು ಹಾಕಿದ 2 ಸಾವಿರ ಬೋಟ್‌ಗಳು


Team Udayavani, Jun 1, 2018, 2:00 AM IST

boats-port-31-5.jpg

ಮಲ್ಪೆ: ಮುಂಗಾರು ಸಂದರ್ಭ ಆಳ ಸಮುದ್ರದಲ್ಲಿ ಮೀನುಗಾರಿಕೆ ಅಪಾಯಕಾರಿ. ಈ ಹಿನ್ನೆಲೆಯಲ್ಲಿ ಸರಕಾರವು ಸಾರ್ವತ್ರಿಕವಾಗಿ ಎರಡು ತಿಂಗಳು (ಜೂ.1 ರಿಂದ ಜು.31) ಯಾಂತ್ರಿಕ ಮೀನುಗಾರಿಕೆಗೆ ರಜೆ ಘೋಷಿಸಲಾಗುತ್ತದೆ. ಮೀನುಗಳ ಸಂತಾನ ಅಭಿವೃದ್ದಿಗೂ ಇದು ಪ್ರಸಕ್ತವಾಗಿದ್ದು ಈ ನಿಟ್ಟಿನಲ್ಲಿ ಮಲ್ಪೆ ಬಂದರಿನಲ್ಲಿ ಎಲ್ಲ ಸ್ತರದ ದೋಣಿಗಳು ಲಂಗರು ಹಾಕಿ ನಿಂತಿವೆ.

ಊರಿಗೆ ಮರಳಿದ ಕಾರ್ಮಿಕರು
ಮೀನುಗಾರಿಕಾ ಋತು ಆರಂಭದಲ್ಲಿ ಹೊರ ಜಿಲ್ಲೆಯ ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ಹುಬ್ಬಳ್ಳಿ, ವಿಜಯಪುರ ಮುಂತಾದ ಕಡೆಗಳಿಂದ ಪುರುಷ, ಮಹಿಳಾ ಕಾರ್ಮಿಕರು ಮೀನು ಹೋರುವ, ಲೋಡ್‌, ಅನ್‌ ಲೋಡ್‌ ಮಾಡುವ ಕಾಯಕಕ್ಕೆ ಮಲ್ಪೆ ಬಂದರಿಗೆ ಬರುತ್ತಾರೆ. ಮೀನುಗಾರಿಕೆ ಸೀಸನ್‌ ಮುಗಿಯುತ್ತಿದ್ದಂತೆ ಮತ್ತೆ ತಮ್ಮ ಊರಿಗೆ ಮರುಳುವುದು ವಾಡಿಕೆ. ಇನ್ನು ಎರಡು ತಿಂಗಳು ಬಿಡುವಿನ ಕಾರಣ ಬಹುತೇಕ ಮಂದಿ ಈಗಾಗಲೇ ಊರಿಗೆ ತೆರಳಿದ್ದಾರೆ, ಹೊರರಾಜ್ಯವಾದ ಒರಿಸ್ಸಾ, ಆಂಧ್ರಪ್ರದೇಶ, ಜಾರ್ಖಂಡ್‌ ಗಳಿಂದಲೂ ಕಾರ್ಮಿಕರು ಇಲ್ಲಿಗೆ ಆಗಮಿಸುತ್ತಿದ್ದು, ನಿಷೇಧ ಕಾರಣ ಊರಿಗೆ ಮರಳಲು ಸಿದ್ಧರಾಗಿದ್ದಾರೆ.  

ಇಷ್ಟು ಮಂದಿಗೆ ರೆಸ್ಟ್‌
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿರುವ ಸುಮಾರು 1200 ಬೋಟ್‌ ಗಳಲ್ಲಿ 10,800 ಮಂದಿ,150 ಪರ್ಸಿನ್‌ ಬೋಟ್‌ ಗಳಲ್ಲಿ 5200 ಮಂದಿ, 600 ತ್ರಿಸೆವೆಂಟಿ ಬೋಟ್‌ಗಳಲ್ಲಿ 3600 ಮಂದಿ, ಗಿಲ್‌ ನೆಟ್‌,  ಸಣ್ಣಟ್ರಾಲ್‌ ಬೋಟ್‌, ಸೇರಿದಂತೆ 30 ಸಾವಿರ ಮಂದಿ ಮೀನುಗಾರಿಕೆ ನಡೆಸುತ್ತಾರೆ. ಇನ್ನು ಬೋಟಿನಿಂದ ಮೀನು ಖಾಲಿ ಮಾಡುವವರು, ಹೊತ್ತೂಯ್ಯುವವರು ಮೀನು ಲೋಡ್‌ ಮಾಡುವವರು ಸೇರಿದಂತೆ ಸುಮಾರು 12 ಸಾವಿರ ಮಂದಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಇತರ ಕೆಲಸ ಮಾಡುತ್ತಿದ್ದಾರೆ. ಸುಮಾರು 40 ಐಸ್‌ ಪ್ಲಾಂಟ್‌, 10 ಮೀನು ಕಟ್ಟಿಂಗ್‌ ಶೆಡ್‌ಗಳು, 4 ಫಿಶ್‌ ಮೀಲ್‌ ಗ‌ಳು ಈ ಅವಧಿಯಲ್ಲಿ ಮುಚ್ಚುತ್ತವೆ. ಇವಲ್ಲದೆ ಮೀನುಗಾರಿಕೆಗೆ ಸಂಬಂಧಿಸಿದಂತೆ ಲಾರಿಗಳು ಟೆಂಪೋ, ರಿಕ್ಷಾಗಳು ಸೇರಿದಂತೆ ಸುಮಾರು 8 ಸಾವಿರಕ್ಕೂ ಅಧಿಕ ಮೀನು ಸಾಗಾಟದ ವಾಹನಗಳಿವೆ.

ರಜೆಯಲ್ಲೂ ಕೆಲಸ
ಮೀನುಗಾರಿಕೆಗೆ ರಜೆ ಇದ್ದರೂ  ಬೋಟ್‌ ಮಾಲಕರು, ಮೀನುಗಾರರಿಗೆ ರಜೆ ಇರುವುದಿಲ್ಲ. ಬೋಟ್‌ ಕಟ್ಟುವುದು, ಬೋಟಿನ ರಿಪೇರಿ, ನಿರ್ವಹಣೆ, ಬಲೆ ಹೊಂದಿಸಿಕೊಳ್ಳುವ ಕೆಲಸದಲ್ಲಿ ಮೀನುಗಾರರು ತೊಡಗಿಸಿಕೊಳ್ಳುತ್ತಾರೆ. ಆ ಮೂಲಕ ನಿಷೇಧ ಬಳಿಕ ಮತ್ತೆ ಮೀನುಗಾರಿಕೆಗೆ ತೆರಳಲು ಸಿದ್ಧತೆ ನಡೆಸುತ್ತಾರೆ.

ಮಳೆಗಾಲದಲ್ಲಿ ನಾಡದೋಣಿ
ಆಳಸಮುದ್ರ ಮೀನುಗಾರಿಕೆಗೆ ನಿಷೇಧವಿರುವ ಈ ಸಂದರ್ಭದಲ್ಲಿ ನಾಡದೋಣಿ ಮೀನುಗಾರಿಕೆಗೆ ಅವಕಾಶವಿದೆ. ಶ್ರಮಜೀವಿ ಮೀನುಗಾರರು ಈ ಸಂದರ್ಭದಲ್ಲಿ ನಾಡದೋಣಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. 12 ನಾಟಿಕಲ್‌ ಮೈಲುನೊಳಗೆ 10 ಅಶ್ವಶಕ್ತಿಯ ಎಂಜಿನ್‌ ಬಳಸಿದ ದೋಣಿಗಳಲ್ಲಿ ಸಮುದ್ರತೀರದಲ್ಲಿ ಮೀನುಗಾರಿಕೆ ನಡೆಸುತ್ತಾರೆ.

ಜೂ. 3ರವರೆಗೆ ಅವಕಾಶ
ಸರಕಾರದ ಆದೇಶದ ಪ್ರಕಾರ ಮೇ 31ರ ರಾತ್ರಿ 12 ಗಂಟೆ ಒಳಗೆ ಮಾತ್ರ ಮೀನುಗಾರಿಕೆ ಚಟುವಟಿಕೆಗೆ ಅವಕಾಶವಿದೆ. ಸಮುದ್ರದಲ್ಲಿ ಈಗಾಗಲೇ ಉಳಿದಿರುವ ಬೋಟ್‌ ಗಳೆಲ್ಲ ಒಮ್ಮೆಲೆ ಬಂದರು ಸೇರುವುದರಿಂದ ಮೀನುಗಾರ ಸಂಘಟನೆಯ ಒಳ ಒಪ್ಪಂದದಂತೆ ಮೀನು ಖಾಲಿ ಮಾಡಲು ಜೂ.3ರವರೆಗೆ ಅವಕಾಶ ನೀಡಲಾಗುತ್ತದೆ.
– ಸತೀಶ್‌ ಕುಂದರ್‌, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ 

— ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.