ಮನೆಗೆಲಸದವರ ನೋಂದಣಿ ಮಾಡದಿದ್ದರೆ ಅನುದಾನವಿಲ್ಲ
Team Udayavani, Jun 1, 2018, 3:10 AM IST
ಹೊಸದಿಲ್ಲಿ: ಮನೆಗೆಲಸದವರ ನೋಂದಣಿ ಮಾಡಿಸದ ರಾಜ್ಯ ಸರಕಾರಗಳಿಗೆ ಅನುದಾನವನ್ನು ನೀಡದಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಅಸಂಘಟಿತ ಕೆಲಸಗಾರರ ಸಾಮಾಜಿಕ ಭದ್ರತೆ ಕಾಯ್ದೆ ಅಡಿಯಲ್ಲಿ ಜನವರಿ 11ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಹಲವು ರಾಜ್ಯಗಳು ಬದ್ಧವಾಗಿಲ್ಲ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ.
ಕಳೆದ ಫೆಬ್ರವರಿಯಿಂದಲೇ ನೋಂದಣಿ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಲಾಗಿತ್ತು. ಅಲ್ಲದೆ ಈ ಸಂಬಂಧ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ಅಥವಾ ಪ್ರಧಾನ ಕಾರ್ಯದರ್ಶಿಗಳಿಗೆ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಮತ್ತು ಎಂ.ಎಂ. ಶಾಂತನಗೌಡರ್ ರನ್ನು ಒಳಗೊಂಡ ನ್ಯಾಯಪೀಠ ಆದೇಶಿಸಿದೆ. ಕಾನೂನಿನ ಪ್ರಕಾರ ಮನೆಗೆಲಸದವರನ್ನು ನೋಂದಣಿ ಮಾಡುವುದು ಹಾಗೂ ಅವರಿಗೆ ಗುರುತಿನ ಚೀಟಿ ನೀಡುವುದು ಕಡ್ಡಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು