ಕಣಿವೆ ಮಾರಮ್ಮನ ರಥೋತ್ಸವ
Team Udayavani, Jun 1, 2018, 5:09 PM IST
ಭದ್ರಾವತಿ: ಕಡದಕಟ್ಟೆ ಗ್ರಾಮದಲ್ಲಿರುವ ಶ್ರೀ ಕಣಿವೆ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಸೋಮವಾರ ಬೆಳಗ್ಗೆ ಧ್ವಜಾರೋಹಣ, ನಂತರ ಹೆಬ್ಬಂಡಿ ಗ್ರಾಮಸ್ಥರಿಂದ ಮದುವಣಗಿತ್ತಿ ಕಾರ್ಯದಿಂದ ಆರಂಭಗೊಂಡಿದ್ದ ಕಣಿವೆ ಮಾರಮ್ಮನ ಜಾತ್ರಾ ಮಹೋತ್ಸವ ಮಂಗಳವಾರ ಗಂಗೆಪೂಜೆ, ಹುಚ್ಚಾಯ ತೇರಿನಬಲಿ ಪೂಜೆ, ಕಳಸಾರೋಹಣ, ದುರ್ಗಾಹೋಮ, ಕಂಕಣ ಧಾರಣೆಧಾರಾ ಮಹೋತ್ಸವ ನೆರವೇರಿತು.
ಬುಧವಾರ ಬೆಳಗ್ಗೆ ಸೂರ್ಯೋದಯ ಕಾಲದಲ್ಲಿ ವರ್ಣಮಯ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಕಣಿವೆ ಮಾರಮ್ಮನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಾಲಯದ ಪ್ರಾಕಾರದಲ್ಲಿ ಪ್ರದಕ್ಷಿಣಾ ಉತ್ಸವ ನಡೆಸಲಾಯಿತು. ನಂತರ ರಥದಲ್ಲಿ ಉತ್ಸವಮೂರ್ತಿಯನ್ನು ಇರಿಸಲಾಯಿತು. ದೇವರನ್ನು ರಥದಲ್ಲಿ ಕೂರಿಸುತ್ತದ್ದಂತೆ ಸಾವಿರಾರು ಸಂಖ್ಯೆಯಲ್ಲಿದ್ದ ಭಕ್ತಾದಿಗಳು ದೇವಿಗೆ ಜಯಕಾರ ಹಾಕಿದರು.
ಕಡದಕಟ್ಟೆ, ಬಂಡಾರಹಳ್ಳಿ, ಭದ್ರಾವತಿ ನಗರ ಸೇರಿದಂತೆ ಸುತ್ತಮುತ್ತ ಅನೇಕ ಗ್ರಾಮಗಳಿಂದ ರಥೋತ್ಸವಕ್ಕೆ
ಸಾವಿರಾರು ಜನರು ಆಗಮಿಸಿದ್ದರು. ದೇವಿಗೆ ಆರತಿ ಮಾಡಿದ ನಂತರ ಜನರು ದೇವಿಗೆ ಜಯಕಾರ ಹಾಕುತ್ತಾ ರಥದ ಮೇಲೆ ಬಾಳೆ ಹಣ್ಣು ಕರಿ ಕಾಳುಮೆಣಸನ್ನು ಬೀರಿದರು. ನಂತರ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ಬೇವಿನ ಸೀರೆ ಕಾರ್ಯಕ್ರಮ ನೆರವೇರಿತು.
ಗುರುವಾರ ಬೆಳಗ್ಗೆ ಓಕುಳಿ ಹಾಗೂ ಸಂಜೆ ಹೂವಿನ ಅಲಂಕಾರದೊಂದಿಗೆ ದೇವಿಯ ರಾಜಬೀದಿ ಉತ್ಸವ ನಡೆಸಲಾಯಿತು. ದೇವಾಲಯದ ಸಮಿತಿ ಹಾಗೂ ಗ್ರಾಮಸ್ಥರು ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ತೀರ್ಥಪ್ರಸಾದ, ಅನ್ನ ದಾನದ ವ್ಯವಸ್ಥೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ