ಡಿಕೆಶಿ ಕೈತಪ್ಪಿದ ಇಂಧನ; ಕಾಂಗ್ರೆಸ್ ಹಾಗೂ JDS ಗೆ ಯಾವ್ಯಾವ ಖಾತೆ?
Team Udayavani, Jun 1, 2018, 5:18 PM IST
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸಂಪುಟದ ಖಾತೆ ಹಂಚಿಕೆ ಕೊನೆಗೂ ಅಂತ್ಯಗೊಂಡಿದ್ದು, ಭಾರೀ ಲಾಬಿ ನಡೆಸಿದ ನಂತರವೂ ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಗೆ ಇಂಧನ ಖಾತೆ ಕೈತಪ್ಪಿದೆ.
ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಸಿಎಂ ಎಚ್ ಡಿ ಕುಮಾರ್ ಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲಾದ ಖಾತೆಗಳ ವಿವರ ನೀಡಿದರು.
ಕಾಂಗ್ರೆಸ್ ಪಕ್ಷಕ್ಕೆ ಹಂಚಿಕೆಯಾದ ಖಾತೆಗಳು:
ಗೃಹ, ಜಲಸಂಪನ್ಮೂಲ, ಕೈಗಾರಿಕೆ ಮತ್ತು ಸಕ್ಕರೆ ಇಲಾಖೆ, ನೀರಾವರಿ, ಕಂದಾಯ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ವಿಜ್ಞಾನ ಮತ್ತು ತಂತ್ರಜ್ಞಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆರೋಗ್ಯ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ, ಸಮಾಜ ಕಲ್ಯಾಣ, ಅರಣ್ಯ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ. ಕಾರ್ಮಿಕ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ, ಬಂದರು, ಒಳನಾಡು ಸಾರಿಗೆ ಇಲಾಖೆ,
ಜೆಡಿಎಸ್ ಪಕ್ಷಕ್ಕೆ ಹಂಚಿಕೆಯಾದ ಖಾತೆಗಳು:
ಹಣಕಾಸು, ಲೋಕೋಪಯೋಗಿ, ಇಂಧನ, ಉನ್ನತ ಮತ್ತು ಪ್ರಾಥಮಿಕ ಶಿಕ್ಷಣ, ಸಣ್ಣ ಕೈಗಾರಿಕೆ, ಸಾರಿಗೆ, ಯೋಜನೆ ಮತ್ತು ಸಾಂಖ್ಯಿಕ, ಸಣ್ಣ ನೀರಾವರಿ, ಗುಪ್ತಚರ, ಮಾಹಿತಿ ಮತ್ತು ತಂತ್ರಜ್ಞಾನ, ಸಹಕಾರ-ಪ್ರವಾಸೋದ್ಯಮ, ತೋಟಗಾರಿಕೆ ಮತ್ತು ರೇಷ್ಮೆ.
ಬುಧವಾರ ಮಧ್ಯಾಹ್ನ ಪ್ರಮಾಣವಚನ:
ಎರಡೂ ಪಕ್ಷಗಳ ನಿರ್ಧಾರದಂತೆ ಬುಧವಾರ ಮಧ್ಯಾಹ್ನ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಟ್ಟು 22 ಖಾತೆಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಜೆಡಿಎಸ್ ಗೆ 12 ಖಾತೆಗಳು ಸಿಕ್ಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ