ಸಾಸ್ತಾನ ಟೋಲ್‌ ಗೇಟ್‌ ನಲ್ಲಿ ನೌಕರರ ಪ್ರತಿಭಟನೆ


Team Udayavani, Jun 2, 2018, 3:20 AM IST

toll-strike-1-6.jpg

ಕೋಟ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾಸ್ತಾನ ಟೋಲ್‌ ಗೇಟ್‌ ನ ಸಿಬಂದಿಗಳು ಜೂ 1ರಂದು ಮುಷ್ಕರ ನಡೆಸಿದರು. ಈ ಸಂದರ್ಭ ಎಲ್ಲ ವಾಹನಗಳು ಶುಲ್ಕ ರಹಿತವಾಗಿ ತೆರಳಿದವು. ಬೆಳಗ್ಗೆ 8ಗಂಟೆಗೆ ಸಿಬಂದಿಗಳು ಟೋಲ್‌ ಪ್ಲಾಜಾದಿಂದ ಹೊರಬಂದು ಮುಷ್ಕರ ಆರಂಭಿಸಿದರು. ಅನಂತರ ಟೋಲ್‌ ಗುತ್ತಿಗೆ ವಹಿಸಿಕೊಂಡ ಕಂಪನಿಯ ಅಧಿಕಾರಿಗಳು ಸಿಬಂದಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರು ಪ್ರಯೋಜನವಾಗಲಿಲ್ಲ. ಹೀಗೆ ಅಪರಾಹ್ನ 12.30ರ ತನಕ ಮುಷ್ಕರ ನಡೆಯಿತು.

ಕಾರ್ಮಿಕರ ಬೇಡಿಕೆಗಳೇನು?
ಸರಿಯಾದ ವೇತನ ನಿಗದಿ ಮಾಡಬೇಕು ಹಾಗೂ ಸಮವಸ್ತ್ರ, ಫಿ.ಎಫ್‌. ಮುಂತಾದ ಮೂಲ ಸೌಕರ್ಯಗಳನ್ನು ನೀಡಬೇಕು. ನಿಗದಿತ ದಿನಾಂಕದಂದೆ ವೇತನ ಪಾವತಿ ಮಾಡಬೇಕು.ವೇತನ ಹೊಂದಾಣಿಕೆಗೆ ಸರಿಯಾದ ದಾಖಲೆ ನೀಡಬೇಕು. ಹೊರ ರಾಜ್ಯದ ಕಾರ್ಮಿಕರು, ಸ್ಥಳೀಯ ಕಾರ್ಮಿಕರ ನಡುವೆ ತಾರತಮ್ಯ ಮಾಡಬಾರದು. ಕಾರ್ಮಿಕ ನಾಯಕರುಗಳಿಗೆ ಕಿರುಕುಳ ನೀಡಬಾರದು ಎಂದು ಆಗ್ರಹಿಸಿದರು. ಅದೇ ರೀತಿ ಭದ್ರತಾ ಸಿಬಂದಿಗಳು ಕೂಡ ಸರಿಯಾದ ವೇತನ ನೀಡಬೇಕು. ಕರ್ತವ್ಯ ನಿರ್ವಹಿಸಲು ಪೂರಕ ವಾತಾವರಣ ನಿರ್ಮಿಸಿಕೊಡಬೇಕು. ಸಿಬಂದಿ ಕೊರತೆ ನೀಗಿಸಬೇಕು. ವೇತನದಲ್ಲಿ ಕಡಿತಗೊಳಿಸುವ ಹಣದ ಕುರಿತು ದಾಖಲೆ ನೀಡಬೇಕು ಎಂದು ಆಗ್ರಹಿಸಿದರು.


ಬೇಡಿಕೆ ಈಡೇರಿಸುವ ಭರವಸೆ 

ಅನಂತರ ಟೋಲ್‌ ಮೆನೇಜರ್‌ ರವಿಬಾಬು ಹಾಗೂ ಸಾಸ್ತಾನ ಟೋಲ್‌ ನ ಮುಖ್ಯಸ್ಥ  ಕೇಶವ ಮೂರ್ತಿ ಅವರು ಕಾರ್ಮಿಕ ಮುಖಂಡ ಯೋಗೇಶ ಕುಮಾರ್‌ ಮತ್ತು ಸಿಬಂದಿಗಳೊಂದಿಗೆ ಮಾತುಕತೆ ನಡೆಸಿ ಜೂ 10ರೊಳಗೆ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು. ಅನಂತರ ಸಿಬಂದಿಗಳು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾದರು. ಕೋಟ ಪೊಲೀಸ್‌ ಠಾಣೆ ಉಪನಿರೀಕ್ಷಕ ಸಂತೋಷ ಎ.ಕಾಯ್ಕಿಣಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದು ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆೆ ವಹಿಸಿದರು.

ಜೀವ ಒತ್ತೆ ಇತ್ತು ಕೆಲಸ ಮಾಡಿದರೂ ಸರಿಯಾದ ವೇತನವಿಲ್ಲ ನಾವು ಕರ್ತವ್ಯದ ಸಂದರ್ಭ ಬಿಸಿಲು, ಮಳೆಯಲ್ಲಿ ನಿಂತು ಸೊರಗುತ್ತಿದ್ದೇವೆ. ಒಮ್ಮೊಮ್ಮೆ ಸುಡು ಬಿಸಿಲಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದ, ವಾಹನದ ಹೊಗೆಯಿಂದ ಅನಾರೋಗ್ಯಕ್ಕೊಳಗಾದ ಘಟನೆಗಳು ನಡೆದಿದೆ. ಈ ರೀತಿ ಕಷ್ಟದಲ್ಲಿ ಕೆಲಸ ಮಾಡಿದರು ಕೂಡ ನಮಗೆ ನೀಡಬೇಕಾದ 10ಸಾವಿರ ರೂ ವೇತನದಲ್ಲಿ 2 ಸಾವಿರ ಕಡಿತ ಮಾಡಿ ನೀಡಲಾಗುತ್ತದೆ. ಯಾಕೆ ಕಡಿತ ಎನ್ನುವುದಕ್ಕೆ ಸರಿಯಾದ ಕಾರಣ ನೀಡುವುದಿಲ್ಲ. ಬಿಸಿಲು-ಮಳೆಯ ರಕ್ಷಣೆಗೆ ಸೂಕ್ತ ವ್ಯವಸ್ಥೆ ಮಾಡುವುದಿಲ್ಲ. ಹೆಚ್ಚಿಗೆ ಮಾತನಾಡಿದರೆ ಕೆಲಸದಿಂದ ಕೈಬಿಡುತ್ತಾರೆ. ನಮ್ಮ ಕಷ್ಟ ಕೇಳುವವರಿಲ್ಲ ಎಂದು ಟೋಲ್‌ ನ ಭದ್ರತೆ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಸಿಬಂದಿಯೋರ್ವರು ತಮ್ಮ ಕಷ್ಟ ತೋಡಿಕೊಂಡರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.