ಭಿನ್ನಾಭಿಪ್ರಾಯ ಬಗೆಹರಿಸುವಲ್ಲಿ ಭಾರತ-ಚೀನ ಮುತ್ಸದ್ದಿತನ


Team Udayavani, Jun 2, 2018, 10:11 AM IST

narendra-modi.jpg

ಸಿಂಗಾಪುರ: ಭಾರತ ಮತ್ತು ಚೀನ ತಮ್ಮ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುವಲ್ಲಿ ಹೆಚ್ಚಿನ ಮುತ್ಸದ್ದಿತನವನ್ನು ತೋರಿಸಿವೆ. ಎರಡೂ ರಾಷ್ಟ್ರಗಳು ಪರಸ್ಪರ ನಂಬಿಕೆಯಿಂದ ಹೆಜ್ಜೆಯಿಟ್ಟಲ್ಲಿ, ಏಷ್ಯಾ ಮತ್ತು ಜಗತ್ತಿನ ಇತರ ಭಾಗಗಳಿಗೆ ಉತ್ತಮ ಭವಿಷ್ಯ ನಿರ್ಮಾಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಸಿಂಗಾಪುರದಲ್ಲಿ ವಾರ್ಷಿಕ ಭದ್ರತಾ ಸಮ್ಮೇಳನ ಶಾಂಗ್ರಿ-ಲಾದಲ್ಲಿ ಪ್ರಮುಖ ಭಾಷಣ ಮಾಡಿದ ಅವರು, ಏಷ್ಯಾ ವಲಯದ ರಾಷ್ಟ್ರಗಳ ನಡುವೆ ಪರಸ್ಪರ ಸಹಕಾರ ಧೋರಣೆ ಇದ್ದರೆ ಶತಮಾನಗಳ ಕಾಲ ಉತ್ತಮವಾಗಿ ಜೀವಿಸುವ ವಾತಾವರಣ ನಿರ್ಮಿಸಿದಂತಾಗುತ್ತದೆ ಎಂದಿದ್ದಾರೆ. 

ಜಲ, ಸಾಗರ ಮಾರ್ಗಗಳನ್ನು ಮುಕ್ತವಾಗಿ ಬಳಕೆ ಮಾಡುವ ಬಗ್ಗೆ ಭಾರತ ಒಲವು ಹೊಂದಿದೆ. ಅದರಲ್ಲಿ ತಾರತಮ್ಯ ಉಂಟಾಗಲು ಅವಕಾಶ ಇರಬಾರದು. ಇಂಡೋ-ಪೆಸಿಫಿಕ್‌ ವಲಯ ದಲ್ಲಿ ಅದೇ ನಿಯಮ ಜಾರಿಯಾಗಬೇಕು ಎಂದಿದ್ದಾರೆ ಪ್ರಧಾನಿ. ಈ ಮೂಲಕ ಚೀನಗೆ ಪರೋಕ್ಷವಾಗಿ ಚುಚ್ಚಿದ್ದಾರೆ.

ಆಸಿಯಾನ್‌ ಉದಾಹರಣೆ: ವಿವಿಧ ರಾಷ್ಟ್ರಗಳ ನಡುವಿನ ಸಂಬಂಧ ಹೇಗಿರಬೇಕು ಎನ್ನುವುದಕ್ಕೆ ಆಸಿಯಾನ್‌ ಮತ್ತು ಭಾರತ ನಡುವಿನ ಸಂಬಂಧವನ್ನು ಪ್ರಧಾನಿ ಪ್ರಸ್ತಾವಿಸಿದರು. ಪರಸ್ಪರ ಸ್ಪರ್ಧೆ ಮತ್ತು ಭಿನ್ನಾಭಿಪ್ರಾಯ ಮರೆತು ಒಂದಾಗಿ ಕೆಲಸ ಮಾಡುವುದನ್ನು ಸದ್ಯದ ಪರಿಸ್ಥಿತಿ ಬಯಸುತ್ತಿದೆ. ಇದು ನಮಗೆ ಸಾಧ್ಯವಿದೆ. ಅದಕ್ಕೆ ಆಸಿಯಾನ್‌ ರಾಷ್ಟ್ರಗಳೇ ಉದಾಹರಣೆ ಎಂದರು ಪ್ರಧಾನಿ.

8 ಒಪ್ಪಂದ: ಇದಕ್ಕೂ ಮೊದಲು, ರಕ್ಷಣೆ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿ ಕುರಿತು ಮಾತುಕತೆ ನಡೆಸಿದ ಮೋದಿ ಮತ್ತು ಸಿಂಗಾಪುರ ಪ್ರಧಾನಿ ಲಿ ಸೈನ್‌ ಲೂಂಗ್‌, 8 ಕ್ಷೇತ್ರಗಳಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆಂಧ್ರಪ್ರದೇಶದ ಹೊಸ ರಾಜಧಾನಿ ಅಮರಾವತಿಯ ನಿರ್ಮಾಣ ವಿಚಾರ ಪ್ರಸ್ತಾಪಿಸಿದ ಸಿಂಗಾಪುರ ಪ್ರಧಾನಿ, “ಅದು ಪ್ರಗತಿಯಲ್ಲಿದೆ’ ಎಂದಿದ್ದಾರೆ. ನನ್ಯಾಂಗ್‌ ತಾಂತ್ರಿಕ ವಿವಿ ವಿದ್ಯಾರ್ಥಿಗಳ ಜತೆ ಪಿಎಂ ಮೋದಿ ಸಂವಾದ ನಡೆಸಿದರು. 

ಬುದ್ಧನ ವಿಗ್ರಹ ಉಡುಗೊರೆ
ಪ್ರಧಾನಿ ಮೋದಿ ಅವರು ಸಿಂಗಾಪುರ ಪ್ರಧಾನಿ ಲೂಂಗ್‌ಗೆ ಆರನೇ ಶತಮಾನದ ಬುದ್ಧಗುಪ್ತ ಸ್ಟೆಲೆಯ ಪ್ರತಿರೂಪದ ವಿಗ್ರಹ ಉಡುಗೊರೆಯಾಗಿ ನೀಡಿದ್ದಾರೆ. ಅದರಲ್ಲಿ ಆಗ್ನೇಯ ಏಷ್ಯಾಕ್ಕೆ ಬೌದ್ಧ ಧರ್ಮ ಹೇಗೆ ಪ್ರಚಾರವಾಯಿತು ಎಂಬುದನ್ನು ವಿವರಿಸುವ ಸಂಸ್ಕೃತ ಶ್ಲೋಕಗಳನ್ನು ಕೆತ್ತಲಾಗಿದೆ. ಇದೇ ವೇಳೆ, ಸಿಂಗಾಪುರದ ಮಾಜಿ ರಾಜತಾಂತ್ರಿಕ ಅಧಿಕಾರಿ ಟಾಮಿ ಕೊಹ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.

ಟಾಪ್ ನ್ಯೂಸ್

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

fraud-2

Fraud Case ನಕಲಿ ಆ್ಯಪ್‌ ಬಳಸಿ ಲ. ರೂ. ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Udupi ಪೆಟ್ರೋಲ್‌ ಹಾಕದ ಕಾರಣಕ್ಕೆ ಹಲ್ಲೆ

Udupi ಪೆಟ್ರೋಲ್‌ ಹಾಕದ ಕಾರಣಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಈಜಿಪ್ಟ್ ನ ಅತೀ ಪ್ರಾಚೀನ, ಶ್ರೀಮಂತ ದೊರೆ ಚಿತ್ರ ಸಿದ್ಧ!

1

Abu Dhabi: ಅಬುಧಾಬಿಯಲ್ಲಿ ಬಿಯರ್‌ ಅಂಗಡಿ!

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.