ಕೋಲಾರಕ್ಕೆ ಬಂತು ಕೆ.ಸಿ.ವ್ಯಾಲಿ ನೀರು


Team Udayavani, Jun 3, 2018, 6:55 AM IST

ban03061806medn.jpg

ಕೋಲಾರ: ಹಲವು ಹೋರಾಟಗಳ ನಂತರ ಕೊನೆಗೂ ಕೆ.ಸಿ.ವ್ಯಾಲಿ ಯೋಜನೆಯಡಿ ಜಿಲ್ಲೆಗೆ ನೀರು ಹರಿದು
ಬಂದಿದೆ. ಈ ಯೋಜನೆಯಲ್ಲಿ ಮೊಟ್ಟ ಮೊದಲ ಬಾರಿಗೆ ತಾಲೂಕಿನ ಲಕ್ಷ್ಮೀಸಾಗರ ಕೆರೆಗೆ ನೀರು ಹರಿಯಿತು.

ಸುಮಾರು 55 ಕಿ.ಮೀ.ದೂರ ಪೈಪ್‌ಗಳ ಮೂಲಕ ಹಾದು ಬಂದ ನೀರು,ಶನಿವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ
ಲಕ್ಷ್ಮೀಸಾಗರ ಕೆರೆಯ ಬಳಿ ಉಕ್ಕಿ ಹರಿಯುತ್ತಿದ್ದಂತೆ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ
ಅಭಿಯಂತರ ವೆಂಕಟೇಶ್‌ ನೇತೃತ್ವದಅಧಿಕಾರಿಗಳು ಪೂಜೆ ಸಲ್ಲಿಸಿ, ಹೂ ಚೆಲ್ಲಿ, ಕೈಮುಗಿದು ಸ್ವಾಗತಿಸಿದರು. ಜನ
ಸಂತೋಷದಿಂದ ಕುಣಿದಾಡಿದರು.

2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ, ಪ್ರಣಾಳಿಕೆಯ ಭರವಸೆಗೆ ತಕ್ಕಂತೆ ಕೋಲಾರಕ್ಕೆ ಕೆ.ಸಿ.ವ್ಯಾಲಿ ಯೋಜನೆಯಡಿ ಶುದ್ದೀಕರಿಸಿದ ತ್ಯಾಜ್ಯ ನೀರನ್ನು ಕೆರೆಗಳಿಗೆ ತುಂಬಿಸಿ, ಅಂತರ್ಜಲ
ಹೆಚ್ಚಿಸಲು ಮುಂದಾಯಿತು. 2016ರ ಮೇ 30 ರಂದು ನರಸಾಪುರ ಕೆರೆಯಂಗಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಿನಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಆರಂಭದಲ್ಲಿ ಕುಂಟುತ್ತಾ ಸಾಗಿದ್ದ ಯೋಜನೆ ರಮೇಶ್‌ ಕುಮಾರ್‌ ಉಸ್ತುವಾರಿ ಸಚಿವರಾಗುತ್ತಿದ್ದಂತೆಯೇ ಚುರುಕುಕಂಡಿತು. ಪ್ರತಿಫ‌ಲವಾಗಿ ನಿರೀಕ್ಷೆಗೂ ಮೀರಿ ಟೆಂಡರ್‌ನಲ್ಲಿ ಸೂಚಿಸಿದ್ದಕ್ಕಿಂತಲೂ ಒಂದು ತಿಂಗಳು ಮೊದಲೇ ಕೋಲಾರದ ಲಕ್ಷ್ಮೀಸಾಗರ ಕೆರೆಗೆ ನೀರು ಹರಿದು ಬರುವಂತಾಗಿದೆ.

52.5 ಕಿ.ಮೀ.ಹರಿದು ಬಂದ ನೀರು:
ಬೆಳ್ಳಂದೂರು ಎಸ್‌ಟಿಪಿಯಿಂದ ವರ್ತೂರು ಎಸ್‌ಟಿಪಿವರೆಗೂ ಸುಮಾರು 10 ಕಿ.ಮೀ, ವರ್ತೂರು ಎಸ್‌ಟಿಪಿಯಿಂದ ಲಕ್ಷ್ಮೀಸಾಗರ ಕೆರೆವರೆಗೂ 40 ಕಿ.ಮೀ. ದೂರದವರೆಗೆ ಪೈಪ್‌ಲೈನ್‌ ಮೂಲಕವೇ ನೀರು ಹರಿದು ಬಂದು ಕೆರೆ
ಸೇರಿತು. ಲಕ್ಷ್ಮೀಸಾಗರ ಕೆರೆಯಿಂದ ಇನ್ನೂ 126 ಕಿ.ಮೀ.ದೂರ ಈ ನೀರು ಕೆರೆಯಿಂದ ಕೆರೆಗೆ ಹರಿದು
ಸಾಗಬೇಕಾಗಿದೆ. ಕೋಲಾರ ಜಿಲ್ಲೆಯ ಗಡಿ ಗ್ರಾಮ ನಂಗಲಿವರೆಗೂ 130 ಕೆರೆಗಳನ್ನು ತುಂಬಿಸುತ್ತಾ ಕೆ.ಸಿ.ವ್ಯಾಲಿ ನೀರು ಹರಿಯಲು ಒಂದು ವರ್ಷ ಅಗತ್ಯವೆಂದು ಅಧಿಕಾರಿಗಳು ವಿವರಿಸುತ್ತಾರೆ.

ಪ್ರಸ್ತುತ ಕೇವಲ ಐದನೇ ಒಂದು ಭಾಗದ ನೀರನ್ನು ಮಾತ್ರವೇ ಪ್ರಾಯೋಗಿ ಕವಾಗಿ ಪೈಪ್‌ಗ್ಳಲ್ಲಿ ಹರಿಸುತ್ತಿರುವುದರಿಂದ ಸೋಮವಾರದೊಳಗೆ ಲಕ್ಷ್ಮೀಸಾಗರ ಕೆರೆ ತುಂಬಲಿದೆ. ಒಂದು ವಾರದೊಳಗೆ ಮಧ್ಯ ದಲ್ಲಿರುವ ಎರಡು ಮೂರು ಚಿಕ್ಕ ಕೆರೆಗಳು ತುಂಬಿದ ನಂತರ ನೀರು ನರಸಾಪುರ ಕೆರೆಗೆ ಹರಿಯಲಿದೆ. ನರಸಾಪುರ ಸೇರಿದಂತೆ ಆರು ಲಿಫ್ಟ್ ಕೇಂದ್ರಗಳ ಕಾಮಗಾರಿಯೂ ಪೂರ್ಣಗೊಳ್ಳುತ್ತಿದ್ದು, ಯಂತ್ರಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ.

ಕಣ್ಣೀರಿಟ್ಟ ರಮೇಶ್‌ಕುಮಾರ್‌
ಕೆ.ಸಿ.ವ್ಯಾಲಿ ನೀರನ್ನು ನೋಡುತ್ತಿದ್ದಂತೆ ಭಾವುಕರಾದ ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌, ಕಣ್ಣೀರಿಡುತ್ತಲೇ 
“ಇಂತಹ ಒಳ್ಳೆಯ ಕೆಲಸಕ್ಕಾಗಿ ನನ್ನ ತಾಯಿ ನನಗೆ ಜನ್ಮ ನೀಡಿದ್ದರು’ ಎಂದರು.

ಶನಿವಾರ ತಾಲೂಕಿನ ಲಕ್ಷ್ಮೀಸಾಗರ ಕೆರೆಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನೆ ಜಾರಿಗೆ ಬಂದ ಹಲವಾರು ಅಡ್ಡಿ ಆತಂಕಗಳನ್ನು ಸ್ಮರಿಸಿದರು. ಕೋಲಾರ ಜಿಲ್ಲೆಯ ಜನತೆ ನೀರಿಗಾಗಿ ಹಲವಾರು ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಬರದಿಂದ ತತ್ತರಿಸಿರುವ ಇಲ್ಲಿನ ಅಂತರ್ಜಲವೂ 1,500 ಅಡಿಗಳಿಗೆ ತಲುಪಿದೆ. ಅಲ್ಲಿ ಸಿಗುವ ನೀರು ವಿಷವಾಗಿದೆ. ತಾಯಿಯ ಎದೆಯ ಹಾಲಲ್ಲೂ ವಿಷವಿದೆ ಎಂದು ತಜ್ಞರು ತಿಳಿಸುವಷ್ಟರ ಮಟ್ಟಿಗೆ ಪರಿಸ್ಥಿತಿ ವಿಕೋಪಕ್ಕೆಹೋಗಿದೆ ಎಂದರು. ಜೂ.7ರಂದು ಮುಖ್ಯಮಂತ್ರಿಗ ಳಿಂದ ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಏನಿದು ಕೆ.ಸಿ ವ್ಯಾಲಿ?
ಬೆಂಗಳೂರಿನ ಕೋರಮಂಗಲ ಚಲ್ಲಘಟ್ಟ ಭಾಗದಲ್ಲಿ ಪ್ರತಿ ವರ್ಷವೂ ಸುಮಾರು 5 ಟಿಎಂಸಿ ತ್ಯಾಜ್ಯ ನೀರನ್ನು
ಸಂಸ್ಕರಿಸಿ ತಮಿಳುನಾಡಿನತ್ತ ಕಾಲುವೆಯಲ್ಲಿ ಹರಿಸಲಾಗುತ್ತಿತ್ತು. ಇದೇ ನೀರನ್ನು ಎರಡು ಬಾರಿ ಸಂಸ್ಕರಿಸಿ ಕೋರಮಂಗಲ ಚಲ್ಲಘಟ್ಟ ವ್ಯಾಲಿ ಎಂಬ ಹೆಸರಿನ ಯೋಜನೆಯಡಿ ಕೋಲಾರದ 130 ಕೆರೆಗಳಿಗೆ ಹರಿಸಲು ಸುಮಾರು 1,342 ಕೋಟಿ ರೂ.ಗಳ ವೆಚ್ಚದ ಯೋಜನೆಯನ್ನು ರೂಪಿಸಲಾಗಿತ್ತು. ಕೋಲಾರ ಜಿಲ್ಲೆಯ 125 ಮತ್ತು ಚಿಂತಾಮಣಿ ತಾಲೂಕಿನ 5 ಕೆರೆಗಳು ಸೇರಿದಂತೆ ಒಟ್ಟು 130 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪಾಲಾರ್‌ ನದಿ ಕಣಿವೆ ಮಾರ್ಗದಲ್ಲಿಯೇ ಹರಿಸುವ ಯೋಜನೆಯಿದು. ಕೋಲಾರ ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳ ಎಲ್ಲಾ
ದೊಡ್ಡಕೆರೆಗಳಿಗೂ ನೀರು ಹರಿಸುವುದು ಈ ಯೋಜನೆಯ ವಿಶೇಷ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.