ಸರ್ಕಾರ ಪತನವಾದರೆ ಜನರ ಬಳಿ ಹೋಗ್ತೀವೆ
Team Udayavani, Jun 4, 2018, 7:10 AM IST
ಕಲಬುರಗಿ: ಲಿವಿಂಗ್ ಟುಗೆದರ್ನಂತೆ ರಚನೆಗೊಂಡ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಸುಖ ಪ್ರಸವ ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಭವಿಷ್ಯ ನುಡಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಯಾವಾಗ ಬೀಳುತ್ತದೆ ಎಂಬುದುಗೊತ್ತಿಲ್ಲವಾದರೂ ಸಂಪುಟ ರಚನೆಯಾದ ನಂತರ ದಿನಗಣನೆ ಶುರುವಾಗುತ್ತದೆ. ದುರಂತದಲ್ಲಿ ಸರ್ಕಾರ ಅಂತ್ಯಗೊಳ್ಳುತ್ತದೆ. ಆದರೆ, ಬಿಜೆಪಿ ಯಾರೊಂದಿಗೂ ಸೇರಿ ಸರ್ಕಾರ ರಚಿಸಲ್ಲ. ಮತ್ತೆ ಜನರ ಬಳಿಗೆ ಹೋಗುತ್ತೇವೆ ಎಂದರು.
ಪರಮೇಶ್ವರ ಅವರು ಜೆಡಿಎಸ್ಗೆ ಸಿಎಂ ಸ್ಥಾನ ಬಿಟ್ಟು ಕೊಡಬಾರದಿತ್ತು ಎಂದು ನೋವು ವ್ಯಕ್ತಪಡಿಸಿದ್ದರೆ,
ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸ್ಥಾನವನ್ನು ಐದು ವರ್ಷಗಳ ಕಾಲ ಜೆಡಿಎಸ್ಗೆ ಬಿಟ್ಟು ಕೊಟ್ಟಿರುವುದಕ್ಕೆ
ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ, ಆರ್.ವಿ.ದೇಶಪಾಂಡೆ ಸೇರಿದಂತೆ ಇತರ ನಾಯಕರು ತಮ್ಮ ನೋವು ಹಾಗೂ ಹತಾಶೆ ವ್ಯಕ್ತಪಡಿಸಿದ್ದನ್ನು ನೋಡಿದರೆ ಸರ್ಕಾರಕ್ಕೆ ಭವಿಷ್ಯ ಇಲ್ಲ ಎಂಬುದು ಖಾತ್ರಿಯಾಗುತ್ತಿದೆ.
ಹಸಿದವರ-ಹಳಸಿದವರ ಸಂಬಂಧ ಬಹಳ ದಿನ ನಡೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !