ಜ್ಞಾನ ದಾನಕ್ಕೆ ಶೇಷ್ಠ ಅಧಿ ಕಮಾಸ: ಮಂತ್ರಾಲಯ ಶ್ರೀ


Team Udayavani, Jun 4, 2018, 9:52 AM IST

gul-4.jpg

ಬಳಗಾನೂರು: ಪ್ರತಿ ಮೂರು ವರ್ಷಕ್ಕೊಮ್ಮೆ ಬರುವ ಅಧಿಕ ಮಾಸವನ್ನು ಪರಮಾತ್ಮ ತನ್ನ ಪೂಜೆಗೆ ಮೀಸಲು ಇಟ್ಟುಕೊಂಡಿರುವ ಹಿನ್ನೆಲೆಯಲ್ಲಿ ಪುರುಷೋತ್ತಮನನ್ನು ಧ್ಯಾನ ಮಾಡಲು ಶೇಷ್ಠವಾದ ಮಾಸವಿದು ಎಂದು ಮಂತ್ರಾಲಯ ಮಠದ ಸುವಿಧ್ಯೇಂದ್ರತಿರ್ಥ ಶ್ರೀಪಾದಂಗಳು ನುಡಿದರು.

ಅಧಿ ಕ ಜೇಷ್ಠ ಮಾಸ ನಿಮಿತ್ತ ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ವಿಪ್ರ ಸಮುದಾಯ ಹಾಗೂ ಭಕ್ತರು ಹಮ್ಮಿಕೊಂಡಿದ್ದ ಮುಖ್ಯ ಪ್ರಾಣ ದೇವರಿಗೆ ವಿಶೇಷ ಪೂಜೆ ಹಾಗೂ ಪವಮಾನ ಹೋಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಸಕಲರಿಗೂ ಬಂಧು-ಬಳಗವಾಗಿರುವ ಮುಖ್ಯ ಪ್ರಾಣದೇವರು ಭಗವಂತನ ಪ್ರಧಾನ ಅರ್ಚಕರು. ಇವರ ಸಾನ್ನಿಧ್ಯದಲ್ಲಿ ಪುರುಷೋತ್ತಮ ಮಾಸದಲ್ಲಿ ಭಗವಂತನಿಗೆ ಪೂಜೆ, ಹೋಮ-ಹವನ ನೆರವೇರಿಸುವುದರಿಂದ ಇಷ್ಟಾರ್ಥಗಳು ಪ್ರಾಪ್ತಿಯಾಗುತ್ತವೆ. ಈ ಮಾಸದಲ್ಲಿ ಪ್ರತಿಯೊಬ್ಬರು ಜ್ಞಾನ ದಾನದಲ್ಲಿ ತೊಡಗಬೇಕು. 33 ಕೋಟಿ ದೇವತೆಗಳನ್ನು ಪೂಜೆ ಮಾಡಲು ಶೇಷ್ಠವಾದ ಮಾಸ ಇದಾಗಿದೆ. ಪ್ರಾಣ ದೇವರಲ್ಲಿ ಪರಮಾತ್ಮ ಪುರುಷೋತ್ತಮರು ನೆಲೆಸಿದ್ದಾರೆ. 33 ಸಂಖ್ಯೆ ಪರಮಾತ್ಮನಿಗೆ ಪ್ರಿಯವಾಗಿರುವ ಹಿನ್ನೆಲೆಯಲ್ಲಿ 33 ಪವಮಾನ ಹೋಮ, ಪೂಜಾ ವಿಧಾನಗಳನ್ನು ನೆರವೇರಿಸುವುದರ ಮೂಲಕ ಭಗವಂತನ ಕೃಪೆ ದೊರೆಯಲಿದೆ. ಇಂತಹ ಅಭೂತಪೂರ್ವ ಮಹಾತ್ಕಾರ್ಯ ನೆರವೇರಿಸಿರುವ ಸದ್ಭಕ್ತರಿಗೆ ಸನ್ಮಂಗಲವಾಗಲಿ ಎಂದರು. 

ಮಂತ್ರಾಲಯ ಮಠದ ಸುವಿಧ್ಯೇಂದ್ರತಿರ್ಥ ಶ್ರೀಪಾದಂಗಳು ಪವಮಾನ ಹೋಮ, ಪೂರ್ಣಾಹುತಿ ಕಾರ್ಯ ನೆರವೇರಿಸಿದರು. ಶ್ರೀ ಮಾರುತಿಗೆ ಮಧು ಅಭಿಷೇಕ, ವಿವಿಧ ಪೂಜಾ ಕಾರ್ಯಕ್ರಮಗಳನ್ನು ಸುರೇಂದ್ರ ಆಚಾರ್ಯ ಕೋರ್ತಕುಂದ ನೇತೃತ್ವದಲ್ಲಿ ನೆರವೇರಿಸಲಾಯಿತು. 46 ಜೋಡಿ ದಂಪತಿ ಪಾಲ್ಗೊಂಡಿದ್ದರು.

ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ ಸೇರಿದಂತೆ ಹೋಮ ಕಾರ್ಯದಲ್ಲಿ ಭಾಗವಹಿಸಿದ್ದ ದಂಪತಿಗೆ ಮಂತ್ರಾಲಯ ಶ್ರೀಗಳು ಆಶೀರ್ವಚನ ನೀಡಿದರು. ಸಂದರ್ಭದಲ್ಲಿ ಹನುಮೇಶ ಜೋಷಿ, ಗುರುರಾಜ ಆಚಾರ್ಯ ಮೂರ್ತಿ ಆಚಾರ್ಯ, ಹನುಮೇಶ ಕುಲಕರ್ಣಿ, ಗಿರೀಶ ಆಚಾರ್ಯ, ಪದ್ಮನಾಭಾಚಾರ್ಯ, ಸಮೀರ ಆಚಾರ್ಯ, ಮಧುಸೂಧನ ಆಚಾರ್ಯ, ರಾಮಾಚಾರ್ಯ, ವಿಜಯಾಚಾರ್ಯ, ಬದ್ರಿ ಆಚಾರ್ಯ, ಸುರೇಶ ಆಚಾರ್ಯ, ರಂಗನಾಥ ಪೂಜಾರ, ಮುಖಂಡರಾದ ಶಂಕರರಾವ್‌ ಕುಲಕರ್ಣಿ, ಶೇಖರಪ್ಪ ಮೇಟಿ, ಪಂಪನಗೌಡ ಮಾಲಿಪಾಟೀಲ, ಮಲ್ಲರಾವ ಪಟವಾರಿ, ಬಾಬಣ್ಣ ಆಚಾರ್ಯ ಹಾಗೂ ಸದ್ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.