ಬಸವಸಾಗರ ಜಲಾಶಯದಲ್ಲಿ ನೀರು ಸಂಗ್ರಹ ಕೊಂಚ ಏರಿಕೆ


Team Udayavani, Jun 4, 2018, 10:04 AM IST

gul-6.jpg

ನಾರಾಯಣಪುರ: ಕಳೆದ ಮೇ 18ರಿಂದ ಮಲಪ್ರಭಾ ನದಿ ತೀರ ಹಾಗೂ ಜಲಾಶಯದ ತೀರ ಪ್ರದೇಶಗಳಲ್ಲಿ ಮುಂಗಾರು ಪೂರ್ವದಲ್ಲಿ ಅನೀರಿಕ್ಷಿತವಾಗಿ ಸುರಿದ ಮಳೆಯಿಂದ ಇಲ್ಲಿನ ಬಸವಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಆರಂಭವಾಗಿದ್ದು, ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ಕೊಂಚ ಏರಿಕೆ ಕಂಡಿದೆ.

ಕೃಷ್ಣಾ ಅಚ್ಚುಕಟ್ಟು ಪ್ರದೇಶ ಸುಮಾರು ಆರು ಲಕ್ಷ ಹೆಕ್ಟೇರ್‌ ಪ್ರದೇಶದ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮಹತ್ವದ ನೀರಾವರಿ ಯೋಜನೆಗಳೊಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಅಡಿ ನಿರ್ಮಿಸಲಾದ ಬಸವಸಾಗರ ಜಲಾಶಯವು 1982ರಲ್ಲಿ ಲೋಕಾರ್ಪಣೆಗೊಂಡು ಈ ಭಾಗದ ಜನರ ಜೀವನಾಡಿಯಾಗಿದೆ.

ಉತ್ತರ ಕರ್ನಾಟಕದ ಯಾದಗಿರಿ, ಕಲಬುರಗಿ, ವಿಜಯಪುರ, ರಾಯಚೂರು ಜಿಲ್ಲೆ ಸೇರಿದಂತೆ ಬಸವಸಾಗರ ಹಿನ್ನೀರನ್ನು ಬಳಸಿಕೊಂಡು  ಕುಡಿಯುವ ನೀರು, ಬೃಹತ್‌ನೀರಾವರಿ ಯೋಜನೆ ಅಡಿಯಲ್ಲಿ ಕಾಲುವೆ ಮತ್ತು ಏತ ನೀರಾವರಿಯಿಂದ ನೀರು ಬಳಸಿಕೊಂಡು ಕೃಷಿಗೆ ನೀರಾವರಿ ಸೇರಿದಂತೆ ಉದ್ಯಮಗಳಿಗೆ ಅಗತ್ಯ ನೀರನ್ನು ಒದಗಿಸಲು ಈ ಬೃಹತ್‌ ಜಲಾಶಯವೇ ಜಲಮೂಲವಾಗಿದೆ. 

ಜಲಾಶಯಕ್ಕೆ ಒಳಹರಿವು: ಕೃಷ್ಣಾ ಹಾಗೂ ಮಲಪ್ರಭಾ ನದಿಗಳು ಕೂಡಲ ಸಂಗಮದಲ್ಲಿ ಕೂಡಿ ಸಂಗಮವಾಗುವ ನೀರೇ ಬಸವಸಾಗರ ಜಲಾಶಯದ ಹಿನ್ನೀರಾಗಿದೆ. ಕೃಷ್ಣೆ ಉಗಮವಾದ ಸ್ಥಳ ಮಹಾರಾಷ್ಟ್ರದ ಮಹಾಬಲೇಶ್ವರ ಕಣಿವೆ
ಪ್ರದೇಶ ಸೇರಿದಂತೆ ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಸುರಿಯುವ ಮಳೆಯಿಂದಲೇ ಅತ್ಯಧಿಕ ಪ್ರಮಾಣದಲ್ಲಿ ಒಳಹರಿವು ಹರಿದು ಆಲಮಟ್ಟಿ ಲಾಲ್‌ಬಹದ್ದೂರ ಶಾಸ್ತ್ರೀ ಜಲಾಶಯಕ್ಕೆ ಬಂದು ಸೇರುತ್ತದೆ. ನಂತರ ಆಲಮಟ್ಟಿ ಜಲಾಶಯ ಭರ್ತಿಯಾಗಿ ಹೊರಬಿಡಲಾದ ನೀರು ಇಲ್ಲಿನ ಬಸವಸಾಗರ ಭರ್ತಿಗೆ ಸಹಕಾರಿಯಾಗತ್ತದೆ. ಪ್ರಸ್ತುತ
ಮುಂಗಾರು ಪೂರ್ವವೇ ಮಲಪ್ರಭಾ ನದಿ ತೀರದಲ್ಲಿ ಮಳೆ ಸುರಿದಿದ್ದರಿಂದ ಅನೀರಿಕ್ಷಿತವಾಗಿ ಬಸವಸಾಗರಕ್ಕೆ ಒಳಹರಿವು ಹರಿದು ಬರುತ್ತಿದೆ ಎಂದು ಆಣೆಕಟ್ಟು ಗೇಟ್ಸ್‌ ಉಪವಿಭಾಗದ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಆರ್‌.ಎಲ್‌. ಹಳ್ಳೂರ ಮಾಹಿತಿ ನೀಡಿದ್ದಾರೆ.

ಆರ್ಟಿಪಿಸಿಎಲ್‌ಗೆ ಒಂದು ಟಿಎಂಸಿ ಅಡಿ ನೀರು: ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಉತ್ಪಾದನ ಘಟಕದ ಬೇಡಿಕೆ ಹಾಗೂ ಸರ್ಕಾರದ ನಿರ್ದೇಶನದಂತೆ ಪ್ರತಿ ವರ್ಷದಂತೆ ಈ ವರ್ಷವೂ ಒಂದು ಟಿಎಂಸಿ ಅಡಿಯಷ್ಟು ನೀರನ್ನು ಜಲಾಶಯದ ಮುಖ್ಯ ಕ್ರಸ್ಟ್‌ಗೇಟ್‌ ಮುಖಾಂತರ ನದಿ ಮೂಲಕ ಆರ್ಟಪಿಸಿಎಲ್‌ ಗೆ ಹರಿಬಿಡಲಾಗಿದೆ. ಮೇ 31ರಿಂದ ಜಲಾಶಯದ ಮುಖ್ಯ ಕ್ರಸ್ಟ್‌ಗೇಟ್‌ಗಳನ್ನು ತೆರೆದು ನೀರು ಹರಿಸಿ ಪುನಃ ಜೂ. 2ರ ಸಂಜೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಣೆಕಟ್ಟು ಉಪವಿಭಾಗದ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ರಾಮಚಂದ್ರ ತಿಳಿಸಿದ್ದಾರೆ.
 
ಪ್ರಸ್ತುತ ಜಲಾಶಯದ 487.94 ಮೀಟರ್‌ ನೀರಿನ ಮಟ್ಟದಲ್ಲಿ 17.12 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಗೊಂಡಿದೆ. ಜಲಾಶಯಕ್ಕೆ ಮೇ 18ರಿಂದ 1200 ಕ್ಯೂಸೆಕ್‌ನಷ್ಟು ಒಳಹರಿವು ನಿರಂತವಾಗಿ ಬರುವುದಕ್ಕೆ ಆರಂಭವಾಗಿ, ಜೂ.
3ಕ್ಕೆ 738 ಕ್ಯೂಸೆಕ್‌ನಷ್ಟು ನೀರಿನ ಒಳಹರಿವು ಇದೆ. ಜಲಾಶಯವನ್ನೇ ನೆಚ್ಚಿಕೊಂಡಿರುವ ಪ್ರಮುಖ ನಗರ, ಪಟ್ಟಣಗಳು ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜಿಗೆ ಯಾವುದೇ ತೊಂದರೆಯಿಲ್ಲ ಎಂದು ಮಾಹಿತಿ
ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.

„ಬಸವರಾಜ ಶಾರದಳ್ಳಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.