ಕಮಲೇಶ್ಚಂದ್ರ ವರದಿ ಜಾರಿ ಮಾಡಿ


Team Udayavani, Jun 4, 2018, 10:54 AM IST

vij-2.jpg

ವಿಜಯಪುರ: ಕಮಲೇಶ್ಚಂದ್ರ ವರದಿ ಜಾರಿ ಹಾಗೂ 7ನೇ ವೇತನ ಜಾರಿಗೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು ನಗರದ ಪ್ರಧಾನ ಅಂಚೆ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಭಾಗೀಯ ಕಾರ್ಯದರ್ಶಿ ಕೆ.ಪಿ. ಹೂಗಾರ, ಕೇಂದ್ರ ಸರ್ಕಾರದ ಈ ಕಾರ್ಮಿಕ ವಿರೋಧಿ ಕ್ರಮವನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಜೂ. 4ರಂದು ಭಾರತ ಬಂದ್‌ ಕರೆ ನೀಡಲಾಗಿದೆ. 

ವಿಜಯಪುರ ಜಿಲ್ಲೆಯಲ್ಲೂ ಈ ಬಂದ್‌ ಕರೆ ನೀಡಲಾಗಿದೆ. ನಗರದಲ್ಲಿ ಬೆಳಗ್ಗೆ 11ಕ್ಕೆ ಸಿದ್ದೇಶ್ವರ ದೇವಸ್ಥಾನದಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಮಹಾತ್ಮ ಗಾಂಧೀಜಿ ವೃತ್ತ, ಕಿತ್ತೂರು ಚನ್ನಮ್ಮ ಮಾರುಕಟ್ಟೆ, ಟಿಪ್ಪು ಸುಲ್ತಾನ್‌ ಚೌಕ್‌ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸುವುದಾಗಿ ಹೇಳಿದರು.

ಗ್ರಾಮೀಣ ಅಂಚೆ ನೌಕರರ ನ್ಯಾಯ ಸಮ್ಮತ ಹೋರಾಟಕ್ಕಾಗಿ ಬೀದಿಗೆ ಇಳಿದು ನಿರಂತರ 13 ದಿನದಿಂದ ಮುಷ್ಕರ ನಡೆಸಿದರೂ ಯಾವೊಬ್ಬ ಸಂಸದರೂ ಪ್ರತಿಭಟನಾನಿರತರು ಹಾಗೂ ಸಂಘಟನೆ ಜೊತೆ ಮಾತನಾಡಲಿಲ್ಲ. ಈ ನಿರ್ಲಕ್ಷ್ಯದಿಂದ ದೇ ಶಕ್ಕೆಗ್ರಾಮೀಣ ಅಂಚೆ ಸೇವಕರ ಅಗತ್ಯ ಇಲ್ಲವೇ ಎಂಬ ಅನುಮಾನ ಮೂಡುತ್ತಿದೆ.

ಬೆಂಗಳೂರಿನ ವಲಯ ಉಪಾಧ್ಯಕ್ಷ ಬಿ.ಎಲ್‌. ಹೂಗಾರ ಮಾತನಾಡಿ, ಈ ಮುಷ್ಕರ ಯಶಸ್ವಿಗೊಳಿಸಲು ಎಲ್ಲ ಗ್ರಾಮೀಣ ಅಂಚೆ ನೌಕರರು ಜನತಾ ನ್ಯಾಯಾಲಯದ ಮುಂದೆ ತಮ್ಮ ಕುಟುಂಬ ಸಮೇತ ಭಾಗವಹಿಸಬೇಕು. ಇದರೊಂದಿಗೆ ಅಂಚೆ ನೌಕರರ ಕುಟುಂಬ ತಮಗಾದ ಅನ್ಯಾಯ ಕುರಿತು ಪ್ರತಿಭಟನೆ ಮೂಲಕ ಸಮಾಜದ ಮುಂದೆ
ಇಡಬೇಕು ಎಂದು ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಸಿಐಟಿಯು, ಕರ್ನಾಟಕ ರೈತ ಸಂಘ, ಎಪಿಎಂಸಿ ಹಮಾಲರ ಸಂಘ, ಜನವಾದಿ ಮಹಿಳಾ ಸಂಘ, ಅಂಗನವಾಡಿ ಕಾರ್ಯಕರ್ತೆಯರ ಸಂಘ, ಲಾರಿ ಹಮಾಲರ ಸಂಘ, ರಾಜ್ಯ ಸರ್ಕಾರಿ ನೌಕರರ ಸಂಘಗಳ ಒಕ್ಕೂಟ, ಗ್ರಾಪಂ ನೌಕರರ ಸಂಘ, ಬಿಸಿಯೂಟ ನೌಕರರ ಸಂಘ, ಗುತ್ತಿಗೆ ನೌಕರರ ಸಂಘ, ಬಿಎಸ್‌ಎನ್‌ಎಲ್‌ ಪತ್ತಿನ ಸಹಕಾರಿ
ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾ ಕುರುಬರ ಸಂಘ, ಶ್ರೀರಾಮ ಸೇನೆ, ಜೈ ಭಗೀರಥ ಸಂಘ, ಜಿಲ್ಲಾ ಉಪ್ಪಾರ ಸಮಾಜ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಘಟಕ, ವಕೀಲ ಸಾಹಿತ್ಯ ಪರಿಷತ್‌ ಸೇರಿದಂತೆ ಮುಂತಾದವರು ಬೃಹತ್‌ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆ ಮುಖಂಡರು ವಿವರಿಸಿದರು.

ಇದೇ ಸಂದರ್ಭದಲ್ಲಿ ಎಂ.ಎಂ. ಬೀಳಗಿ, ಎಂ.ಜಿ. ಹೂಗೂಡಿ, ಎಸ್‌.ಎಸ್‌. ಗಲಗಲಿ, ಬಿ.ಕೆ. ದಿಂಡವಾರ, ಆರ್‌.ಆರ್‌. ಚಿಕ್ಕಲಕಿ, ಪಿ.ಎನ್‌. ಕುಲಕರ್ಣಿ, ಎಸ್‌.ಎಂ. ಕೂಳೂರು, ಪಿ.ಎಸ್‌. ಕೋಳೂರಗಿ, ಎನ್‌.ಎಸ್‌. ಮಠಪತಿ, ಎಚ್‌.ಪಿ.
ಕಟ್ಟಿ, ಜಿ.ಎಸ್‌. ಪಾಟೀಲ, ಐ.ಸಿ. ಹಂಚಿನಾಳ, ಎಸ್‌. ಆರ್‌. ನರಳೆ, ಕೆ.ಎಸ್‌. ಓಂಕಾರ ಧರಣಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.