ಗಡಿಪಿಲ: ದ್ವಿಚಕ್ರ ವಾಹನ ಸವಾರರ ಜೀವ ತಿನ್ನುವ ರೈಲ್ವೆ  ಕಂಬಿ


Team Udayavani, Jun 4, 2018, 2:57 PM IST

4june-12.jpg

ನರಿಮೊಗರು : ಕಾಣಿಯೂರು- ಮಂಜೇಶ್ವರ ಹೆದ್ದಾರಿಯ ಮಧ್ಯೆ ನರಿ ಮೊಗರು ಸಮೀಪದ ಗಡಿಪಿಲ ಉದ್ದ ಮಜಲು ಎಂಬಲ್ಲಿ ರೈಲ್ವೇ ಕಂಬಿಗಳು ದ್ವಿಚಕ್ರ ವಾಹನ ಸವಾರರಿಗೆ ಮೃತ್ಯು ಪಾಶವಾಗಿ ಪರಿಣಮಿಸುತ್ತಿವೆ. ಈ ಹಿಂದೆ ರಸ್ತೆ ಕಿರಿದಾಗಿದ್ದ ಸಂದರ್ಭದಲ್ಲಿ ಸಣ್ಣ ಅಂತರವಿರುವ ರೈಲ್ವೇ ಕಂಬಿ ಗಳನ್ನು ಹಾಕಲಾಗಿತ್ತು. ಆದರೆ ಈಗ ರಸ್ತೆ ಅಭಿ ವೃದ್ಧಿಗೊಂಡಿದ್ದು, ಹೊಸ ರಸ್ತೆಗೆ ಅನುಗುಣವಾಗಿ ಕಂಬಿಗಳನ್ನೂ ಹಾಕಲಾಗಿದೆ.

ಅಪಾಯಕಾರಿ ಕಂಬಿ ಪ್ರಾಣಕ್ಕೆ ಸಂಚಕಾರ
ರಸ್ತೆ ಕಿರಿದಾಗಿದ್ದ ಸಂದರ್ಭದಲ್ಲಿ ಹಾಕಲಾಗಿದ್ದ ಕಂಬಿಗಳನ್ನು ತೆರವುಗೊಳಿಸದೆ ಹಾಗೆಯೇ ಬಿಡಲಾಗಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿವೆ. ಈ ಕಂಬಿಗಳಿಗೆ ಹಲವು ಬಾರಿ ದ್ವಿಚಕ್ರ ವಾಹನಗಳು ಡಿಕ್ಕಿಯಾಗಿ ವಾಹನ ಸವಾರರು ಗಾಯಗೊಂಡ ನಿದರ್ಶನಗಳಿವೆ. ಈ ಅಪಾಯಕಾರಿ ರೈಲ್ವೇ ಕಂಬಿಗೆ ಕೆಲ ದಿನಗಳ ಹಿಂದೆ ಪುತ್ತೂರು ಅಂಚೆ ಇಲಾಖೆಯ ನೌಕರ ಕಾಣಿಯೂರಿನ ಚನಿಯ ಯಾನೆ ಸತೀಶ್‌ ಎಂಬವರ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಪ್ರಾಣ ಕಳೆದುಕೊಂಡಿದ್ದರು. ಕೆಲ ವರ್ಷಗಳ ಹಿಂದೆ ನವವಿವಾಹಿತರೊಬ್ಬರು ಇದೇ ಅಪಾಯಕಾರಿ ಕಂಬಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಪ್ರಾಣ ಕಳೆದುಕೊಂಡಿದ್ದರು. ಹಲವು ವಾಹನ ಸವಾರರು ಇದೇ ಸ್ತಳದಲ್ಲಿ ಅಪಘಾತಕ್ಕೀಡಾಗಿದ್ದಾರೆ.

ತೆರವಿಗೆ ಆಗ್ರಹ
ರಸ್ತೆ ವಿಸ್ತರಣೆಯಾಗಿದ್ದರೂ ಈ ಹಿಂದೆ ಅಳವಡಿಸಲಾಗಿದ್ದ ಕಂಬಿಯನ್ನು ತೆರವುಗೊಳಿಸದ ಕಾರಣ ಅಪಘಾತಗಳಾಗಿ, ಅಮಾಯಕರ ಜೀವಗಳು ಬಲಿಯಾಗುತ್ತಿವೆ. ರಸ್ತೆ ಅಂಚಿನಲ್ಲೇ ಇರುವ ಈ ಕಂಬಿಗಳನ್ನು ಕೂಡಲೇ ತೆರವುಗೊಳಿಸುವ ಕೆಲಸ ಮಾಡಬೇಕು ಎಂದು ಸವಣೂರು ಗ್ರಾಮ ಪಂಚಾಯತ್‌ನ ಸದಸ್ಯ ಸತೀಶ್‌ ಗೌಡ ಅಂಗಡಿಮೂಲೆ ಆಗ್ರಹಿಸಿದ್ದಾರೆ.

ಇಲಾಖೆ ಗಮನ ಹರಿಸಲಿ
ಇದೇ ರೀತಿ ಬೆದ್ರಾಳ ಎಂಬಲ್ಲಿಯೂ ರಸ್ತೆಯ ಮೇಲ್ಭಾಗದಲ್ಲಿ ರೈಲ್ವೆ ಹಳಿಯಿದೆ. ಅಲ್ಲಿ ರಸ್ತೆ ಅಭಿವೃದ್ಧಿ ಸಂದರ್ಭದಲ್ಲಿ ಹಳೆಯ ಕಂಬಿಗಳನ್ನು ತೆರವುಗೊಳಿಸಿ ನೂತನ ರಸ್ತೆಗೆ ಅನುಗುಣವಾಗಿ ಹೊಸ ಕಂಬಿ ಅಳವಡಿಸಲಾಗಿದೆ. ಆದರೆ ಗಡಿಪಿಲದಲ್ಲಿ ಹಳೆಯ ಕಂಬಿಗಳನ್ನು ತೆರವುಗೊಳಿಸಿಲ್ಲ. ಈ ಕುರಿತು ರೈಲ್ವೇ ಇಲಾಖೆಯವರು ಗಮನ ಹರಿಸಬೇಕು ಎಂದು ಪುತ್ತೂರಿನ ಕ್ಯಾಂಪ್ಕೋ ಉದ್ಯೋಗಿ ವೀರಮಂಗಲದ ರವೀಂದ್ರ ಕೈಲಾಜೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.