ಸೌಲಭ್ಯವಿಲ್ಲದೇ ವಿದ್ಯಾರ್ಥಿಗಳ ಪರದಾಟ


Team Udayavani, Jun 5, 2018, 12:56 PM IST

ray-3.jpg

ಲಿಂಗಸುಗೂರು: ಸುತ್ತಲೂ ಗಲೀಜು, ಹಂದಿಗಳ ತಾಣ, ಮುಳ್ಳಿನ ಗಿಡಗಳು, ತಿಪ್ಪೆಯಂತ ಪ್ರದೇಶ ಇದು ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರ ಬಾಲಕರ ವಸತಿ ನಿಲಯದಲ್ಲಿ ಕಂಡುಬರುವ ದೃಶ್ಯ. ಇಂತಹ ಅನಾರೋಗ್ಯಕರ ವಾತಾವರಣದಲ್ಲಿ ವಾಸಿಸುವ ವಿದ್ಯಾರ್ಥಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಪಟ್ಟಣದ ಕಲುಬುರಗಿ ರಸ್ತೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿದ ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರ ಬಾಲಕರ ವಸತಿ ನಿಲಯವಿದೆ. ವಸತಿ ನಿಲಯದಲ್ಲಿ ಕುಡಿಯುವ ನೀರು, ಶುಚಿಯಾದ ಆಹಾರ, ಶೌಚಾಲಯದ ಕೊರತೆ, ಕ್ರಿಮಿಕೀಟಗಳ ಕಾಟ ಹೀಗೆ ಹತ್ತಾರು ಸಮಸ್ಯೆಗಳು ಮನೆ ಮಾಡಿವೆ.

ಪಿಯುಸಿಯಿಂದ ಪದವಿವರೆಗೂ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಸತಿ ನಿಲಯದಲ್ಲಿದ್ದು, ಮೂಲ ಸೌಲಭ್ಯಗಳ ಕೊರತೆ ಇದೆ. ಹಲವು ಬಾರಿ ವಿದ್ಯಾರ್ಥಿಗಳು ವಾರ್ಡನ್‌ ಹಾಗೂ ತಾಲೂಕಾ ಅಧಿ ಕಾರಿಗಳ ಗಮನಕ್ಕೆ ತಂದರೂ ಕ್ರಮಕ್ಕೆ ಮುಂದಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಬಾಡಿಗೆ ಕಟ್ಟಡದಲ್ಲಿ ವಸತಿ ನಿಲಯ ನಡೆಸಲಾಗುತ್ತಿದೆ. ಕುಡಿಯುವ ನೀರಿಗಾಗಿ ಶುದ್ಧೀಕರಣ ಘಟಕ ತೆರೆಯಲಾಗಿತ್ತು. ಅದು ಕೆಟ್ಟು ನಿಂತು ವರ್ಷಗಳೇ ಕಳೆದಿವೆ. ಶೌಚಾಲಯದ ಕೊರತೆ, ಊಟದ ಕೋಣೆಯಿಲ್ಲದೇ ಮಲಗುವ ಕೋಣೆಯಲ್ಲಿ ಊಟ ಮಾಡುವಂತಹ ಸ್ಥಿತಿ ಇದೆ. ಕಟ್ಟಡದಲ್ಲಿ ನೆಲಕ್ಕೆ ಹಾಸಲಾಗಿರುವ ಬಂಡೆಗಳು ಮೇಲಕ್ಕೆ ಎದ್ದಿವೆ. ಇದರಿಂದ ಅನೇಕ ಕ್ರಿಮಿಕೀಟಗಳ ಕಾಟ ಹೇಳತೀರದಾಗಿದೆ. ಹೆಗ್ಗಣಗಳು ಎಲ್ಲೆಂದರಲ್ಲಿ ಓಡಾಡುತ್ತಿದ್ದು, ಬಿಲಗಳು ಕಾಣುತ್ತಿವೆ. ವಿದ್ಯಾರ್ಥಿಗಳ ಬಟ್ಟೆ, ಪುಸ್ತಕ ಹೆಗ್ಗಣಕ್ಕೆ ಆಹಾರವಾಗುತ್ತಿವೆ. ಇಡೀ ವಸತಿ ನಿಲಯವೇ ದುರ್ನಾತದಿಂದ ಕೂಡಿದೆ. ಸೊಳ್ಳೆಗಳ ಕಾಟದಿಂದ ತಪ್ಪಿಸಿಕೊಳ್ಳುವುದೇ ವಿದ್ಯಾರ್ಥಿಗಳ ದಿನ ನಿತ್ಯ ಕಾಯಕವಾಗಿದೆ. ಅಡುಗೆ ಕೋಣೆಯ ಸುತ್ತಮುತ್ತ ಗಲೀಜಿನಿಂದ ಕೂಡಿದ್ದು ಹಂದಿಗಳ ವಾಸಸ್ಥಾನವಾಗಿದೆ. 

ಕಲುಷಿತ ವಾತಾವರಣದಲ್ಲಿ ವಿದ್ಯಾರ್ಥಿಗಳು ದಿನ ಕಳೆಯುವಂತಾಗಿದೆ. ಈ ಕುರಿತು ನಿಲಯದ ಮೇಲ್ವಿಚಾರಕನ
ಗಮನಕ್ಕೆ ತಂದರೆ ಇದ್ದುದರಲ್ಲೇ ಅನುಸರಿಸಿಕೊಂಡು ಹೋಗಿ ಎಂದು ಗದರಿಸುತ್ತಾರೆ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಾರೆ.

ವಸತಿ ನಿಲಯಕ್ಕೆ ತಾಲೂಕು ಮಟ್ಟದ ಅಧಿಕಾರಿಗಳಾಗಲಿ ಅಥವಾ ಸಹಾಯಕ ಆಯುಕ್ತರಾಗಲಿ ಈವರೆಗೂ ಭೇಟಿ ನೀಡಿ ವಸತಿ ನಿಲಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಪ್ರಯತ್ನಿಸಿಲ್ಲ ಎಂಬುದು ವಿಪರ್ಯಾಸದ
ಸಂಗತಿಯಾಗಿದೆ.

ಅಧಿಕಾರಿ ನಾಟ್‌ ರಿಚೇಬಲ್‌ ವಸತಿ ನಿಲಯ ಸಮಸ್ಯೆಗಳ ಕುರಿತು ಬಿಸಿಎಂ ಅಧಿಕಾರಿ ರವಿ ಅವರನ್ನು ಫೋನ್‌ ಮೂಲಕ ಸಂಪರ್ಕಿಸಿದರೆ ಕೆಲವೊಮ್ಮೆ ಸ್ವಿಚ್‌ ಆಫ್‌, ಮತ್ತೆ ಕೆಲವೊಮ್ಮೆ ನಾಟ್‌ ರಿಚೇಬಲ್‌ ಆಗಿದ್ದರೆ ಮತ್ತೆ ಕೆಲವೊಮ್ಮೆ ಸಂಪರ್ಕ ಸಾಧಿಸಿದರೂ ಫೋನ್‌ ಕರೆ ಸ್ವೀಕರಿಸಲಿಲ್ಲ. ಇತ್ತೀಚೆಗೆ ಶಾಸಕ ಡಿ.ಎಸ್‌. ಹೂಲಗೇರಿ ಅವರು ವಸತಿ ನಿಲಯಕ್ಕೆ ಭೇಟಿ ನೀಡಿದಾಗಲೂ ಅಧಿಕಾರಿ ಸ್ಥಳದಲ್ಲಿರಲಿಲ್ಲ. ಇದು ವಸತಿ ನಿಲಯಗಳ ಸಮಸ್ಯೆಗಳನ್ನು ಪರಿಹರಿಸಬೇಕಾದ ಅಧಿಕಾರಿಯ ಕಾರ್ಯವೈಖರಿಯಾಗಿದೆ. 

ವಸತಿ ನಿಲಯದಲ್ಲಿ ಶೌಚಾಲಯ, ಸ್ನಾನ ಗೃಹ, ಕುಡಿಯುವ ನೀರು ಸೇರಿ ಅನೇಕ ಕೊರತೆಗಳ ಬಗ್ಗೆ ವಾರ್ಡನ್‌ ಕ್ರಮ ಕೈಗೊಳ್ಳುವ ಬದಲು ನಮ್ಮ ಮೇಲೆ ಹರಿಹಾಯ್ದು ನಮ್ಮ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಾರೆ. ಹೆದರಿಕೆಯಿಂದ ನಾವು ತಾಲೂಕಾಧಿಕಾರಿಗೆ ದೂರು ನೀಡಿಲ್ಲ. 
 ಹೆಸರು ಹೇಳಲು ಇಚ್ಛಿಸದ ವಿದ್ಯಾರ್ಥಿಗಳು

ಶಿವರಾಜ ಕೆಂಭಾವಿ

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.