ಬೈಕಂಪಾಡಿ ಕೈಗಾರಿಕೆ ವಲಯದ ಪಾಡು ಕೇಳುವವರೇ ಇಲ್ಲ!


Team Udayavani, Jun 6, 2018, 2:55 AM IST

baikampadi-5-6.jpg

ಮಂಗಳೂರಿನ ರಾಜಕಾಲುವೆ ಹಾಗೂ ದೊಡ್ಡ ತೋಡುಗಳ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಒತ್ತುವರಿ ಆದ ಕಾರಣದಿಂದ ಮಳೆ ನೀರು ಸರಾಗವಾಗಿ ನದಿ ಸೇರಲು ಸಾಧ್ಯವಾಗಲಿಲ್ಲ ಎಂಬ ಆರೋಪ ಕೇಳಿಬರುತ್ತಿರುವ ಮಧ್ಯೆಯೇ, ನದಿ ಬದಿಯ ಭಾಗಕ್ಕೂ ಕೆಲವರು ಕಣ್ಣು ಹಾಕಿದ್ದಾರೆ ಎಂಬ ದೂರು ಕೇಳಿಬರುತ್ತಿದೆ. ನಗರ ವ್ಯಾಪ್ತಿಯಲ್ಲಿ ಹರಿಯುವ ಎರಡು ನದಿಯ ವ್ಯಾಪ್ತಿಯಲ್ಲೂ ಒಂದಿಷ್ಟು ಒತ್ತುವರಿ ಆಗಿದ್ದು, ಈ ಕಾರಣದಿಂದ ಹಿನ್ನೀರು ಸರಾಗವಾಗಿ ಹರಿಯಲು ಸಾಧ್ಯವಾಗಲಿಲ್ಲ ಎಂಬ ಆರೋಪವೂ ಇದೀಗ ಪ್ರತಿಧ್ವನಿಸಿದೆ. ಈ ಕುರಿತಂತೆ ಬೆಳಕು ಚೆಲ್ಲುವ ‘ರಿಯಾಲಿಟಿ ಚೆಕ್‌’ ಇಲ್ಲಿದೆ.

ಮಹಾನಗರ: ಮೊನ್ನೆ ಸುರಿದ ಭಾರೀ ಮಳೆಗೆ ಮಂಗಳೂರು ನಗರ ತತ್ತರಗೊಳ್ಳುವುದರ ಜತೆಗೆ ಬೈಕಂಪಾಡಿಯ ಕೈಗಾರಿಕಾ ಪ್ರದೇಶವೂ ನಲುಗಿ ಹೋಗಿವೆ. ಸುಮಾರು 10 ಕೋ.ರೂ. ಗೂ ಅಧಿಕ ನಷ್ಟ ಸಂಭವಿಸಿದೆ. ಇಂತಹ ಸಮಸ್ಯೆಗೆ ಮೂಲ ಕಾರಣ ಏನು ಎಂಬ ಪ್ರಶ್ನೆ ಎದುರಾದಾಗ ಸಿಕ್ಕ ಉತ್ತರವೇ ಚರಂಡಿ/ತೋಡು ಸಮಸ್ಯೆ!
ಬೈಕಂಪಾಡಿ ಕೈಗಾರಿಕ ಪ್ರದೇಶವು ಸಾವಿರಾರು ಜನರಿಗೆ ಉದ್ಯೋಗ ದೊರಕಿಸಿಕೊಡುವ ಜತೆಗೆ ಹಲವು ಉತ್ಪನ್ನಗಳ ರಫ್ತು ಮಾಡುವುದಕ್ಕೆ ಮೂಲ ಸ್ಥಳವಾಗಿದೆ. ಸರಿ ಸುಮಾರು 700ರಷ್ಟು ಕೈಗಾರಿಕೆಗಳು ಇಲ್ಲಿ ನಿತ್ಯ ಉದ್ಯಮ ನಡೆಸುತ್ತಿವೆ. ಆದರೆ, ಮೊನ್ನೆಯ ಮಳೆಗೆ ಮಂಗಳೂರು ಮುಳುಗುವುದರ ಜತೆಗೆ ಕೈಗಾರಿಕೆಗಳನ್ನೂ ಮುಳುಗಿಸಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಕೈಗಾರಿಕೆಗಳು ಸಂಕಷ್ಟ ಎದುರಿಸುವಂತಾಯಿತು. ಹಲವು ಜನರ ಬದುಕಿಗೆ ಬೆಳಕಾಗಬೇಕಾದ ಕೈಗಾರಿಕೆಗಳು ಇಂದು ಆರ್ಥಿಕ ನಷ್ಟಕ್ಕೆ ತುತ್ತಾಗಿ ಸಮಸ್ಯೆ ಅನುಭವಿಸುತ್ತಿವೆ. 

ನಿಜಕ್ಕೂ ಸಮಸ್ಯೆ ಏನು?
ಬೈಕಂಪಾಡಿ ಪೊಲೀಸ್‌ ಠಾಣೆಯ ಹಿಂಭಾಗದಲ್ಲಿ ಕೈಗಾರಿಕಾ ಪ್ರದೇಶದ ಅಕ್ಕ ಪಕ್ಕದಲ್ಲಿರುವ ದೊಡ್ಡ ತೋಡುಗಳು ಮಳೆ ನೀರು ಹರಿಯಲು ಸಾಧ್ಯವಾಗದೆ ತೋಡು ಬಿಟ್ಟು ರಸ್ತೆ- ಕೈಗಾರಿಕಾ ವಲಯಕ್ಕೆ ಬರು ವಂತಾಯಿತು. ತೋಡನ್ನು ಪ್ರತೀ ವರ್ಷ ಸ್ವಚ್ಛಗೊಳಿಸಬೇಕಾದ ಕೆಐಎಡಿಬಿ ಅವರು ಈ ಬಗ್ಗೆ ಕ್ಯಾರೇ ಅನ್ನದಿರುವುದರಿಂದ ಈ ಬಾರಿ ಸಮಸ್ಯೆ ಉಲ್ಬಣವಾಗಿದೆ. 

ಸ್ವಚ್ಛಗೊಳಿಸುವುದೇ ಇಲ್ಲ!
ಹೇಳುವುದಕ್ಕೆ ಇದು ಕೈಗಾರಿಕಾ ವಲಯ. ರಾಜ್ಯ- ದೇಶದ ವಿವಿಧ ಭಾಗದ ಕಾರ್ಮಿಕರು ಇಲ್ಲಿಗೆ ಕೆಲಸಕ್ಕೆಂದು ಬರುತ್ತಾರೆ. ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ, ರಸ್ತೆ ಬದಿ ನಿಲ್ಲುವ ಬೃಹತ್‌ ವಾಹನಗಳಿಂದ ಜನರು ಪ್ಲಾಸ್ಟಿಕ್‌, ಬಾಟಲ್‌, ಕಸ ಕಡ್ಡಿ ಎಲ್ಲವನ್ನೂ ಎಸೆಯುವುದು ಇಲ್ಲಿನ ಮಳೆ ನೀರು ಹರಿಯುವ ಚರಂಡಿಗೆ.

ಹೀಗಾಗಿ ಮಳೆಗಾಲದ ಸಂದರ್ಭ ಇಲ್ಲಿನ ತೋಡು ಕಸ ಕಡ್ಡಿಗಳಿಂದಲೇ ಆವರಿಸಿರುತ್ತದೆ. ಇದನ್ನು ಪ್ರತೀ ಮಳೆಗಾಲಕ್ಕೂ ಮುನ್ನ ಸಂಬಂಧಪಟ್ಟವರು ಸ್ವಚ್ಛಗೊಳಿಸಬೇಕು. ಆದರೆ, ಕಳೆದ ಕೆಲವು ವರ್ಷಗಳಿಂದ ತೋಡು-ಚರಂಡಿ ಸ್ವತ್ಛಗೊಳಿಸದೆ ಇರುವ ಕಾರಣದಿಂದ ಮಳೆ ನೀರು ಸಮಸ್ಯೆ ಉಲ್ಬಣಿಸಿದೆ. ಇಲ್ಲಿನ ಚರಂಡಿ-ತೋಡಿನ ಪಕ್ಕದಲ್ಲಿ ವಿದುತ್‌ ಲೈನ್‌ ಸಾಗುವ ಕಾರಣದಿಂದ ಅಪಾಯಕಾರಿ ಮರದ ರೆಂಬೆಗಳನ್ನು ಮೆಸ್ಕಾಂನವರು ಕಡಿಯುತ್ತಾರೆ. ಆದರೆ, ಕಡಿದ ರೆಂಬೆ ಇದೇ ಚರಂಡಿಗೆ ಬಿದ್ದು, ಅದನ್ನೂ ತೆಗೆಯುವವರು ಇಲ್ಲ!

ಕೈಗಾರಿಕಾ ವಲಯದಲ್ಲಿ ಒಳಚರಂಡಿ, ಮಳೆ ನೀರು ಚರಂಡಿ ಸಹಿತ ಸಾಕಷ್ಟು ಸಮಸ್ಯೆಗಳಿವೆ. ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಗ್ರ ಅಭಿವೃದ್ಧಿಗಾಗಿ ಸಮಿತಿ ಕೂಡ ರಚಿಸಲಾಗಿದೆ. ಕೆನರಾ ಸಣ್ಣ ಕೈಗಾರಿಕಾ ಸಂಘದ ಪ್ರತಿನಿಧಿಗಳು, ಮಾಲಿನ್ಯ ನಿಯಂತ್ರಣ ಮಂಡಳಿ, ಕೆಐಎಡಿಬಿ, ಎನ್‌.ಐ.ಟಿ.ಕೆ. ಪ್ರತಿನಿಧಿಗಳು ಸಮಿತಿಯಲ್ಲಿದ್ದಾರೆ. 

ತೋಡು – ಚರಂಡಿ ಕೇಳುವವರೇ ಇಲ್ಲ !
ಕೆಐಎಡಿಬಿಯವರು ಬೈಕಂಪಾಡಿ ಕೈಗಾರಿಕಾ ವ್ಯಾಪ್ತಿಯ ತೋಡು-ಚರಂಡಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣದಿಂದ ಈ ಬಾರಿಯ ಮಳೆಗೆ ಸಮಸ್ಯೆ ಸೃಷ್ಟಿಯಾಗಿದೆ ಎಂಬ ಆರೋಪ ಕೈಗಾರಿಕೋದ್ಯಮಿಗಳದ್ದು. ಬೈಕಂಪಾಡಿಯ ಓವರ್‌ ಬ್ರಿಡ್ಜ್ ವರೆಗಿನ ತೋಡು-ಚರಂಡಿಯನ್ನು ಎನ್‌.ಎಂ.ಪಿ.ಟಿ.ಯವರೇ ನಿರ್ವಹಿಸುತ್ತಾರೆ. ಬೈಕಂಪಾಡಿಯ ಎಂ.ಆರ್‌.ಪಿ.ಎಲ್‌. ಪಂಪ್‌ ಹೌಸ್‌ ಬಳಿಕದಿಂದ ಮಂಗಳೂರು ಪಾಲಿಕೆ ನಿರ್ವಹಿಸುತ್ತದೆ. ಇದರ ಮಧ್ಯದ ಪ್ರದೇಶದಲ್ಲಿ ಕೆಐಎಡಿಬಿ ಹಾಗೂ ಎಪಿಎಂಸಿ ಅವರು ಚರಂಡಿ-ತೋಡು ನಿರ್ವಹಿಸಬೇಕು. ಆದರೆ, ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸದ ಕಾರಣದಿಂದ ಇಂದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದು ಕೈಗಾರಿಕೆಗಳ ವಾದ. 

ಮಳೆ ನೀರು ನುಗ್ಗಿದ ಪ್ರದೇಶಗಳಿಗೆ ಮೇಯರ್‌ ಭೇಟಿ

ಕಳೆದ ಮಂಗಳವಾರ ಸುರಿದ ಭಾರೀ ಮಳೆಗೆ ನೀರು ನುಗ್ಗಿದ ನಗರದ ಪ್ರದೇಶಗಳಿಗೆ ಪಾಲಿಕೆ ಮೇಯರ್‌ ಭಾಸ್ಕರ್‌ ಕೆ. ಭೇಟಿ ನೀಡಿ ಪರಿಶೀಲಿಸಿದರು. ನಗರದ ಲಾಲ್‌ ಬಾಗ್‌, ಕೊಟ್ಟಾರ ಚೌಕಿ, ಪಂಪ್‌ ವೆಲ್‌, ಜಪ್ಪಿನಮೊಗರು ಸಹಿತ ಮತ್ತಿತರ ಪ್ರದೇಶಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈ ಕಾರಣದಿಂದಾಗಿ ರಾಜಕಾಲುವೆ, ನೀರು ಹರಿಯುವ ತೋಡುಗಳು ಬ್ಲಾಕ್‌ ಆಗಿವೆ. ಇದರಿಂದಾಗಿ ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುವುದಿಲ್ಲ. ಕೆಲವು ಕಡೆಗಳಲ್ಲಿ ರಾಜಕಾಲುವೆ ಪ್ರದೇಶವನ್ನು ಒತ್ತುವರಿ ಮಾಡಲಾಗಿದೆ. ಕೂಡಲೇ ಒತ್ತುವರಿ ಪ್ರದೇಶಗಳನ್ನು ಬಿಟ್ಟುಕೊಡುವಂತೆ ಸಂಬಂಧಪ‌ಟ್ಟವರಿಗೆ ಸೂಚನೆ ನೀಡಿದರು. ಈ ಸಂದರ್ಭ ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ, ಕಾರ್ಪೊರೇಟರ್‌ ನವೀನ್‌ ಡಿ’ಸೋಜಾ, ಪ್ರವೀಣ್‌ ಚಂದ್ರ ಆಳ್ವ, ಆಶಾ ಡಿ’ಸಿಲ್ವ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊನ್ನೆಯ ಮಳೆಗೆ 10 ಕೋ.ರೂ. ನಷ್ಟ !
ಬೈಕಂಪಾಡಿ ಕೈಗಾರಿಕಾ ವಲಯಕ್ಕೆ ಇತ್ತೀಚೆಗೆ ಮಳೆ ನೀರು ನುಗ್ಗಿ ಸುಮಾರು 10 ಕೋ. ರೂ. ಗೂ ಅಧಿಕ ನಷ್ಟವಾಗಿದೆ. ಉತ್ಪಾದನೆ ಸ್ಥಗಿತಗೊಳಿಸಿರುವ ಹೆಚ್ಚಿನ ಕೈಗಾರಿಕೆಗಳು ಇನ್ನೂ ಪುನರಾರಂಭ ಆಗಿಲ್ಲ. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಸುಮಾರು 700ಕ್ಕೂ ಅಧಿಕ ಕೈಗಾರಿಕೆಗಳಿವೆ. ಅದರಲ್ಲಿ ಬಹುತೇಕ ಕೈಗಾರಿಕೆಗಳ ಒಳಗೆ ನೆರೆ ನೀರು ನುಗ್ಗಿ ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿತ್ತು.

ಟಾಪ್ ನ್ಯೂಸ್

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.