ಲೋಕಸಭೆ ಚುನಾವಣೆಯಲ್ಲಿ ಆಡ್ವಾಣಿ, ಜೋಶಿ ಕಣಕ್ಕೆ?
Team Udayavani, Jun 6, 2018, 6:15 AM IST
ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸ್ಪರ್ಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಆಡ್ವಾಣಿ ಅವರ ನಿವಾಸಕ್ಕೆ ತೆರಳಿದ್ದ ವೇಳೆ ಪ್ರಧಾನಿ ಈ ಮನವಿ ಮಾಡಿದ್ದಾರೆ. ಎಲ್.ಕೆ. ಆಡ್ವಾಣಿ ಗುಜರಾತ್ನ ಗಾಂಧಿನಗರವನ್ನು ಸದ್ಯ ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.
ಉತ್ತರ ಪ್ರದೇಶದ ಕಾನ್ಪುರ ಕ್ಷೇತ್ರದ ಸಂಸದರಾಗಿರುವ ಡಾ| ಮುರಳಿ ಮನೋಹರ ಜೋಶಿ ಅವರನ್ನೂ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ. 2014ರ ಚುನಾ ವಣೆ ಬಳಿಕ 75 ವರ್ಷ ಮೀರಿದ ನಾಯಕರಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಲಾಗಿಲ್ಲ ಮತ್ತು ‘ಮಾರ್ಗದರ್ಶಿ ಮಂಡಲ್’ ಎಂಬ ಸಮಿತಿ ರಚಿಸಿ ಆಡ್ವಾಣಿ, ಜೋಶಿ ಮತ್ತು ಇತರ ನಾಯಕರನ್ನು ಮೂಲೆಗುಂಪು ಮಾಡಲಾಗಿತ್ತು.
ಇಂದು ಉದ್ಧವ್ ಭೇಟಿ: ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಜತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬುಧವಾರ ಭೇಟಿಯಾಗಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ‘ಬಿಜೆಪಿ ನಮ್ಮ ಅತ್ಯಂತ ದೊಡ್ಡ ಶತ್ರು’ ಎಂದು ಉದ್ಧವ್ ಹೇಳಿ ಕೊಂಡಿದ್ದರು. ಗುರುವಾರ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ರನ್ನು ಶಾ ಭೇಟಿಯಾಗಲಿದ್ದಾರೆ. ಬಿಜೆಪಿ ವಿರುದ್ಧ ಅತೃಪ್ತಿ ಹೊಂದಿರುವ ಮಿತ್ರಪಕ್ಷಗಳನ್ನು ಭೇಟಿಯಾಗಿ ಚುನಾವಣೆ ಎದುರಿಸುವುದಕ್ಕೂ ಮುನ್ನ ಸಂಬಂಧ ಕಾಯ್ದುಕೊಳ್ಳುವ ಯತ್ನ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ