ತಪ್ಪಿದ ಸಚಿವ ಪದವಿ:ಎಂ.ಬಿ.ಪಾಟೀಲ್ ಹೇಳಿದ್ದೇನು? ಬೆಂಬಲಿಗರ ಆಕ್ರೋಶ
Team Udayavani, Jun 6, 2018, 1:19 PM IST
ಬೆಂಗಳೂರು: ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯುವ ಅಪಾರ ನಿರೀಕ್ಷೆ ಹೊಂದಿದ್ದ ಬಬಲೇಶ್ವರ ಶಾಸಕ, ಕಾಂಗ್ರೆಸ್ ಪ್ರಭಾವಿ ನಾಯಕ ಎಂ.ಬಿ.ಪಾಟೀಲ್ ಅವರಿಗೆ ಅವಕಾಶ ಕೈ ತಪ್ಪಿದೆ.
ಲಿಂಗಾಯತ ಕೋಟಾದಲ್ಲಿ ಸಚಿವ ಪದವಿ ಪಡೆಯುವ ಭಾರೀ ನಿರೀಕ್ಷೆ ಹೊಂದಿದ್ದ ಎಂ.ಬಿ. ಪಾಟೀಲ್ ಅವರು ತೀವ್ರ ಅಸಮಾಧಾನ ಹೊಂದಿರುವುದು ತಿಳಿದು ಬಂದಿದ್ದು, ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.
ಎಂ.ಬಿ. ಪಾಟೀಲ್ ಅವರ ನಿವಾಸಕ್ಕೆ ಕಾಂಗ್ರೆಸ್ ಶಾಸಕ ಮತ್ತು ಸಂಭಾವ್ಯ ಸಚಿವ ಕೃಷ್ಣ ಭೈರೇಗೌಡ ಅವರು ಭೇಟಿ ನೀಡಿ ಮಾತುಕತೆಯನ್ನು ನಡೆಸಿದ್ದಾರೆ.
ಮಾತುಕತೆ ನಡೆಸಿ ಹೊರ ಬರುವ ವೇಳೆ ಜಮಾಯಿಸಿದ್ದ ನೂರಾರು ಎಂ.ಬಿ.ಪಾಟೀಲ್ ಅವರ ಬೆಂಬಲಿಗರು ಕೃಷ್ಣ ಭೈರೇಗೌಡ ಅವರಿಗೆ ಮುತ್ತಿಗೆ ಹಾಕಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಎಂ.ಬಿ.ಪಾಟೀಲ್ ಪರ ಜೈಕಾರಗಳನ್ನು ಕೂಗುತ್ತಿದ್ದಾರೆ.
ಸಿದ್ದರಾಮಯ್ಯ ಜೊತೆ ಚರ್ಚಿಸುತ್ತೇನೆ !
ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ಪ್ರಶ್ನಿಸಿದಾಗ ‘ನಾನು ಸದ್ಯ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸುತ್ತೇನೆ’ ಎಂದಿದ್ದಾರೆ.
ಒತ್ತಡ ಹಾಕಲು ಸ್ವಾಮೀಜಿಗಳ ನಿರ್ಧಾರ
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ದಲ್ಲಿ ಮುಂಚೂಣಿಯಲ್ಲಿದ್ದು ಹಗಲಿರುಳು ದುಡಿದಿದ್ದ ಎಂ.ಬಿ.ಪಾಟೀಲ್ ಅವರ ಬೆಂಬಲಕ್ಕೆ ಬರಲು ಹತ್ತಾರು ಲಿಂಗಾಯತ ಸ್ವಾಮೀಜಿಗಳು ಮುಂದಾಗಿದ್ದು , ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಡ ಹಾಕಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು