ಮಕ್ಕಳಂತೆ ಸಸಿ ಪಾಲನೆ ಮಾಡಿ: ಕುಲಕರ್ಣಿ
Team Udayavani, Jun 6, 2018, 5:22 PM IST
ಕುಳಗೇರಿ ಕ್ರಾಸ್: ಗಿಡ ಮರಗಳಿಂದ ಕೂಡಿದ ಪರಿಸರವು ಆರೋಗ್ಯಕ್ಕೆ ಪೂರಕವಾಗಿದ್ದು, ಪ್ರತಿಯೊಬ್ಬರು ತಮ್ಮ ಮನೆಯಂಗಳದಲ್ಲಿ ಸಸಿ ನೆಟ್ಟು ಅವುಗಳನ್ನು ಮಕ್ಕಳಂತೆ ಪಾಲನೆ ಮಾಡಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಾಧ್ಯಾಪಕ ಆರ್.ಆರ್. ಕುಲಕರ್ಣಿ ಹೇಳಿದರು. ಸ್ಥಳೀಯ ಜಿ.ಜಿ. ಹಕ್ಕಾ ಪಕ್ಕಿ ಪ್ರೌಢಶಾಲೆ ಹಾಗೂ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆಗೆ ಸಸಿ ನೆಟ್ಟು ನೀರು ಹಾಕುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಅರಣ್ಯ ಅಧಿಕಾರಿ ಆರ್.ಬಿ. ಗಂಗಾಪುರ ಮಾತನಾಡಿ, ಪರಿಸರ ನಾಶದಿಂದ ಭೂಮಿಯ ತಾಪಮಾನ ಹೆಚ್ಚುತಿದ್ದು, ಅದರ ಪರಿಣಾಮದಿಂದ ಅತಿಯಾದ ಬಿಸಿಲು, ಮಳೆ, ಚಳಿ ನೆರೆ ಹಾವಳಿ ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿದೆ. ಪ್ರತಿಯೊಬ್ಬರು ಗಿಡ ಮರ ಬೆಳೆಸಬೇಕು ಎಂದರು.
ವಿದ್ಯಾರ್ಥಿಗಳು, ಶಿಕ್ಷಕರು, ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸಿದರು. ಅರಣ್ಯ ಇಲಾಖೆ ಹವಾಲ್ದಾರ್ ಎಚ್.ಎಂ. ಗುಂಡಳ್ಳಿ, ಶಿಕ್ಷಕರಾದ ಎಂ.ಕೆ. ಸುಸಂಗಿ, ಪಿ.ವಿ. ಜಲ್ಲಿ, ಎಸ್.ಎಂ. ಅಂಗಡಿ, ಕೆ.ಎಲ್. ಪಾಟೀಲ, ಟಿ.ಪಿ. ಲಮಾಣಿ, ಎಸ್.ಎಚ್. ಪಾಟೀಲ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್