ವಿದ್ಯುತ್‌ ಘಟಕ ಸ್ಥಾಪನೆ ಒಡಂಬಡಿಕೆ


Team Udayavani, Jun 7, 2018, 12:38 PM IST

electricity.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ವಿದ್ಯುತ್‌ ತಯಾರಿಕಾ ಘಟಕಗಳನ್ನಾಗಿ ಪರಿವರ್ತಿಸುತ್ತಿರುವ ಬಿಬಿಎಂಪಿ, ಇದೀಗ ಚಿಕ್ಕನಾಗಮಂಗಲದಲ್ಲಿ ತ್ಯಾಜ್ಯದಿಂದ ವಿದ್ಯುತ್‌ ಉತ್ಪಾದಿಸಲು ಯೋಜನೆಗೆ ಫ್ರಾನ್ಸ್‌ ಮೂಲದ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಮೇಯರ್‌ ಆರ್‌.ಸಂಪತ್‌ರಾಜ್‌ ಹಾಗೂ ಫ್ರಾನ್ಸ್‌ನ ಫ್ರಾನ್ಸ್‌ ದೇಶದ ರಾಯಭಾರಿ ಅಲೆಗ್ಸಾಂಡರ್‌ ಜಿಗ್ಗರ್‌ ಚಿಕ್ಕನಾಗಮಂಗಲದಲ್ಲಿ ವಿದ್ಯುತ್‌ ಘಟಕ ಸ್ಥಾಪನೆ ಸಂಬಂಧಿತ ಒಡಂಬಡಿಕೆಗೆ ಸಹಿ ಹಾಕಿದರು. 

3ವೇಸ್ಟ್‌ (ತ್ರೀವೇಸ್ಟ್‌) ಸಂಸ್ಥೆಯೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಗುತ್ತಿಗೆದಾರರು ನಿತ್ಯ 500 ಟನ್‌ ತ್ಯಾಜ್ಯವನ್ನು ವಿದ್ಯುತ್‌ ಆಗಿ ಪರಿವರ್ತಿಸಬೇಕಾಗಿದ್ದು, ಘಟಕ ನಿರ್ಮಾಣಕ್ಕೆ ಅಗತ್ಯವಾದ ಎಲ್ಲ ರೀತಿಯ ಯಂತ್ರೋಪಕರಣಗಳನ್ನು ಗುತ್ತಿಗೆದಾರರೇ ಖರೀದಿಸಬೇಕು. ಪಾಲಿಕೆಯಿಂದ ನಿತ್ಯ ಮನೆಗಳಲ್ಲಿ ಉತ್ಪತ್ತಿಯಾಗುವ 300 ಟನ್‌ ಹಾಗೂ ಸಗಟು ತ್ಯಾಜ್ಯ ಉತ್ಪಾದಕರಿಂದ 200 ಟನ್‌ ತ್ಯಾಜ್ಯವನ್ನು ಮಾತ್ರ ಪೂರೈಕೆ ಮಾಡಲಾಗುತ್ತದೆ.

ತ್ಯಾಜ್ಯದಿಂದ ವಿದ್ಯುತ್‌ ಉತ್ಪಾದನೆ ಘಟಕ ನಿರ್ಮಾಣಕ್ಕಾಗಿ ಚಿಕ್ಕನಾಗಮಂಗಲದ ಬಳಿ 15 ಎಕರೆ ವಿಸ್ತೀರ್ಣದ ಜಮೀನನ್ನು 3ವೇಸ್ಟ್‌ ಸಂಸ್ಥೆಗೆ 30 ವರ್ಷಗಳಿಗೆ ಗುತ್ತಿಗೆ ನೀಡುತ್ತಿದ್ದು, ಮುಂದಿನ ಏಳು ತಿಂಗಳಲ್ಲಿ ಇಂಧನ ಉತ್ಪಾದನಾ ಘಟಕ ಸ್ಥಾಪಿಸಿ ಕಾರ್ಯಾರಂಭಿಸಬೇಕು. ಜತೆಗೆ ಜಮೀನನ್ನು ಯಾವುದೇ ಕಾರಣಕ್ಕೂ ಪರಭಾರೆ ಮಾಡುವಂತಿಲ್ಲ ಎಂಬ ಷರತ್ತನ್ನು ಬಿಬಿಎಂಪಿ ವಿಧಿಸಿದೆ. ಜತೆಗೆ ಘಟಕ ಸ್ಥಾಪನೆಗೆ ಪಾಲಿಕೆ ಅಥವಾ ಸರ್ಕಾರದಿಂದ ಯಾವುದೇ ಅನುದಾನ ನೀಡುವುದಿಲ್ಲವೆಂಬ ಅಂಶವನ್ನು ಒಪ್ಪಂದದಲ್ಲಿ ಉಲ್ಲೇಖೀಸಲಾಗಿದೆ.

ಘಟಕ ಸ್ಥಾಪನೆಗೆ ಬೇಕಾಗುವಂತಹ ಸಾಮಗ್ರಿಗಳನ್ನು 3ವೇಸ್ಟ್‌ ಸಂಸ್ಥೆ ಸರಬರಾಜು ಮಾಡಿಕೊಳ್ಳಬೇಕಿದ್ದು,
ಸರ್ಕಾರಕ್ಕೆ ಅಬಕಾರಿ ಸುಂಕ ಪಾವತಿಸಬೇಕಿದೆ. ಹೀಗಾಗಿ ಸಂಸ್ಥೆಗೆ ಮುಂದಿನ 10 ವರ್ಷಗಳವರೆಗೆ ವಿವಿಧ ತೆರಿಗೆ
ವಿನಾಯಿತಿ ನೀಡಲು ಸರ್ಕಾರ ಸಮ್ಮತಿಸಿರುವುದಾಗಿ ಒಪ್ಪಂದದಲ್ಲಿ ತಿಳಿಸಿದೆ. ಒಡಂಬಡಿಕೆ ವೇಳೆ ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಹಾಜರಿದ್ದರು. 

ವಿದ್ಯುತ್‌ ಮಾರಾಟ
ಚಿಕ್ಕನಾಗಮಂಗಲದಲ್ಲಿ ನಿರ್ಮಿಸಲು ಉದ್ದೇಶಿಸಿರುವ 500 ಟನ್‌ ಸಾಮರ್ಥಯದ ತ್ಯಾಜ್ಯದಿಂದ ವಿದ್ಯುತ್‌
ಉತ್ಪಾದನಾ ಘಟಕದಲ್ಲಿ ನಿತ್ಯ 7 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗಲಿದೆ. ಘಟಕದಲ್ಲಿ ಉತ್ಪಾದನೆಯಾಗುವ ವಿದ್ಯುತ್‌ನ್ನು ಕೆಇಆರ್‌ಸಿ ನಿಗದಿಪಡಿ ಸಿದಂತೆ ಪ್ರತಿ ಕಿಲೋ ವ್ಯಾಟ್‌ಗೆ 7.08 ರೂ.ಗಳಂತೆ ಗುತ್ತಿಗೆದಾರರು ಮಾರಾಟ ಮಾಡಬಹುದಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.