ಸ್ವಲ್ಪವೂ ಕರಗದ ಪ್ಲಾಸ್ಟಿಕ್‌ ಜೀವಕ್ಕೆ ಮಾರಕ: ಕಾಡದೇ ವರ


Team Udayavani, Jun 7, 2018, 5:06 PM IST

7-june-22.jpg

ಧಾರವಾಡ: ಪ್ಲಾಸ್ಟಿಕ್‌ ಸಂಶೋಧನೆಯಾದಾಗಿನಿಂದ ಹಿಡಿದು ಈವರೆಗೂ ಉತ್ಪಾದಿಸಿರುವ ಲಕ್ಷ ಲಕ್ಷ ಟನ್‌ ಪ್ಲಾಸ್ಟಿಕ್‌ನಲ್ಲಿ ಒಂದಂಗುಲ ಕೂಡ ಮರಳಿ ಜೈವಿಕವಾಗಿ ಕರಗಿಲ್ಲ ಎಂದು ಕವಿವಿ ಪ್ರಾಣಿಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ| ಗಿರೀಶ ಕಾಡದೇವರ ಕಳವಳ ವ್ಯಕ್ತಪಡಿಸಿದರು.

ಹಳ್ಳಿಗೇರಿಯ ನೇಚರ್‌ ಫಸ್ಟ್‌ ಇಕೋವಿಲೇಜ್‌ ಹಾಗೂ ನೇಚರ್‌ ರಿಸರ್ಚ್‌ ಸೆಂಟರ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಪ್ಲಾಸ್ಟಿಕ್‌ ಮುಕ್ತಿಗೆ ನಮ್ಮ ಯುಕ್ತಿ’ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ನಮ್ಮ ಪ್ರತಿನಿತ್ಯದ ಪ್ರಾರಂಭ ಪ್ಲಾಸ್ಟಿಕ್‌ನಿಂದ ಮಾಡಿದ ಬ್ರಶ್‌, ಸ್ನಾನದ ಬಕೆಟ್‌, ಊಟದ ಡಬ್ಬಿ, ಬಾಟಲ್‌ ನೀರು ಹೀಗೆ ಎಲ್ಲಕ್ಕೂ ಪ್ಲಾಸ್ಟಿಕ್‌ ಆವರಿಸಿಕೊಂಡು ಬಿಟ್ಟಿದೆ. ಪ್ಲಾಸ್ಟಿಕ್‌ನ್ನು ಜೈವಿಕವಾಗಿ ಕರಗಿಸುವ ಸಂಶೋಧನೆಯಾಗುವವರೆಗೂ ಈಗಿರುವ ಪ್ಲಾಸ್ಟಿಕ್‌ನ್ನು ಕಡಿಮೆ ಬಳಕೆ ಮತ್ತು ಮರುಬಳಕೆ ಮಾಡಬೇಕು. ಅದರಲ್ಲೂ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ ಹಾಗೂ ಪ್ಲಾಸ್ಟಿಕ್‌ ನೀರಿನ ಬಾಟಲ್‌ ಬಳಕೆ ಸಂಪೂರ್ಣ ಕಡಿಮೆಯಾಗಬೇಕು ಎಂದರು.

ಪರಿಸರವಾದಿ ಮುಕುಂದ ಮೈಗೂರ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಬಂತೆಂದರೆ ಬಹಳಷ್ಟು ವನಮಹೋತ್ಸವ ಕಾರ್ಯಕ್ರಮಗಳು ಜರಗುತ್ತವೆ. ಆದರೆ, ಅವುಗಳಲ್ಲಿ ಬಹಳಷ್ಟು ಮಹೋತ್ಸವಗಳು ವನಮಹೋತ್ಸವವಾಗುತ್ತವೆ. ಆ ದಿನ ತೋರಿದ ಪರಿಸರ ಕಾಳಜಿ ಮರುದಿನ ದಿನ ಇರುವುದಿಲ್ಲ. ಹಚ್ಚಿದ ಗಿಡಗಳು ಬೆಳೆದು ನಿಲ್ಲುವವರೆಗೆ ಜೋಪಾನ ಮಾಡಿದಲ್ಲಿ ಮಾತ್ರ ಇದು ನಿಜವಾದ ಪರಿಸರ ಕಾಳಜಿಯಾಗುವುದು ಎಂದರು.

ಶಿರಸಿಯ ಉಮಾಪತಿ ಭಟ್ಟ ಮಾತನಾಡಿ, ಕಾಡಿನ ಮರಗಳು ಮತ್ತು ಔಷ ಧೀಯ ಸಸ್ಯಗಳು ನಮ್ಮ ಹಿಂದಿನ ಸಂಪ್ರದಾಯದಿಂದಲೂ ಎಲ್ಲ ಆರೋಗ್ಯ ಸಮಸ್ಯಗಳಿಗೆ ಚಿಕತ್ಸೆಯ ಮೂಲವಾಗಿದ್ದವು. ಆದರೆ, ಇತ್ತೀಚಿನ ಅಲೋಪತಿ ಮೆಡಿಸಿನ್‌ ಬಂದಾಗಿನಿಂದ ನಾವೆಲ್ಲ ನಮ್ಮ ಸಾಂಪ್ರದಾಯಿಕ ಚಿಕತ್ಸೆಗಳನ್ನು ತ್ಯಜಿಸಿ ಬಿಟ್ಟಿದ್ದೇವೆ ಎಂದರು.

ಅಧ್ಯಕ್ಷತೆವಿಹಿಸಿದ್ದ ಇಕೋ ವಿಲೇಜಿನ ಸಂಸ್ಥಾಪಕ ಪಿ.ವಿ. ಹಿರೇಮಠ ಮಾತನಾಡಿ, ಕಳೆದ ಬಾರಿ ರಾಜ್ಯಾದ್ಯಂತ ವಾಡಿಕೆಗಿಂತ ಅರ್ಧಕ್ಕೂ ಕಡಿಮೆಯಷ್ಟು ಮಳೆಯಾಗಿದೆ. ಆದರೆ ಈ ಬಾರಿ ಮಳೆ ಚೆನ್ನಾಗಿ ಆಗುವ ನಿರೀಕ್ಷೆ ಇದ್ದು, ಈ ಬಾರಿ ಹನಿ ನೀರನ್ನೂ ನಾವು ಇಂಗಿಸುವ ಕೆಲಸ ಮಾಡಬೇಕಾಗಿದೆ ಎಂದರು.

ನೇಚರ್‌ ರಿಸರ್ಚ್‌ ಸೆಂಟರ್‌ನ ಚಂದ್ರಶೇಖರ ಬೈರಪ್ಪನವರ, ಡಾ|ಧಿಧೀರಜ ವೀರನಗೌಡರ, ಆರ್‌ .ಜಿ ತಿಮ್ಮಾಪೂರ, ವೀರಣ್ಣ ಪತ್ತಾರ ಇದ್ದರು. ಹರ್ಷವರ್ಧನ್‌ ಶೀಲವಂತ ಸ್ವಾಗತಿಸಿದರು. ಪ್ರಕಾಶ ಗೌಡರ ಪ್ರಾಸ್ತಾವಿಕ ಮಾತನಾಡಿದರು. ಪೂರ್ತಿ ಶರ್ಮಾ ನಿರೂಪಿಸಿದರು. ಅನೀಲ ಅಳ್ಳೊಳ್ಳಿ ವಂದಿಸಿದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.