ಬೇಸರ ಸಹಜ,ಯಾರೂ ಪಕ್ಷ ಬಿಡಲ್ಲ: ಸಿದ್ದರಾಮಯ್ಯ
Team Udayavani, Jun 9, 2018, 6:05 AM IST
ಬಾಗಲಕೋಟೆ: ಸಚಿವ ಸ್ಥಾನ ಸಿಗದವರಿಗೆ ಬೇಸರ ಆಗುವುದು ಸಹಜ. ಪಕ್ಷದಲ್ಲಿ ಕೆಲವರಿಗೆ ಅಸಮಾಧಾನ
ಇರುವುದೂ ನಿಜ. ಆದರೆ,ಅವರೆಲ್ಲ ಪಕ್ಷ ಬಿಟ್ಟು ಹೋಗಲ್ಲ. ಎಲ್ಲರನ್ನೂ ಸಮಾಧಾನಪಡಿಸುತ್ತೇವೆ ಎಂದು ಮಾಜಿ
ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ಬಿ.ಎನ್ ಜಾಲಿಹಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಂ.ಬಿ.ಪಾಟೀಲ ನನ್ನನ್ನು ಭೇಟಿ ಮಾಡಿದ್ದಾರೆ. ಆದರೆ,ಕಣ್ಣೀರು ಹಾಕಿಲ್ಲ. ಅವರನ್ನು ನಾನು ಸಮಾಧಾನ ಮಾಡಿದ್ದೇನೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಸಮಾಧಾನ ಮಾಡಿದ್ದಾರೆ ಎಂದರು. ಎಂ.ಬಿ.ಪಾಟೀಲ ನನ್ನ ಜತೆಗೆ 22 ಶಾಸಕರಿದ್ದಾರೆ ಎಂದಿದ್ದಾರೆ.ಅವರಿಂದ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತದೆಯೇ ಎಂಬ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಹಿನ್ನಡೆ ಅಂದರೇನು ಎಂದು ಮರು ಪ್ರಶ್ನೆ ಹಾಕಿದರು. ನಾನು ಪ್ರಮುಖರ ಮನವೊಲಿಕೆಗೆ ಬೆಂಗಳೂರಿಗೆ ಮರಳಿ ಹೋಗುವುದಿಲ್ಲ.
ನಾನು ಯಾಕೆ ಬೆಂಗಳೂರಿಗೆ ಹೋಗಬೇಕು. ಎಲ್ಲರನ್ನೂ ಸಮಾಧಾನ ಮಾಡಿದ್ದೇವೆ. ಮಾಜಿ ಸಚಿವ ಸತೀಶ
ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ವಿಷಯ ನನಗೆ ಗೊತ್ತಿಲ್ಲ.
ಕಾಂಗ್ರೆಸ್ನಿಂದ ಹೊರ ಬರುವಂತೆ ಕುರುಬ ಸಮಾಜದ ಶಾಸಕರಿಗೆ ಕರೆ ನೀಡಿರುವ ಕುರುಬರ ಸಂಘದ ಅಧ್ಯಕ್ಷ
ಯಾರು ಎಂಬುದೂ ನನಗೆ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ