ಶೇ.70.13 ಮತದಾನ: ಪಾಂಡ


Team Udayavani, Jun 9, 2018, 10:10 AM IST

gul-1.jpg

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಮತದಾನದಲ್ಲಿ ಒಟ್ಟು ಶೇ. 70.13 ರಷ್ಟು ಮತದಾನವಾಗಿದೆ ಎಂದು ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಪಂಕಜಕುಮಾರ ಪಾಂಡೆ ತಿಳಿಸಿದ್ದಾರೆ.

ಬೀದರ ಜಿಲ್ಲೆಯಲ್ಲಿ ಶೇ. 67.50, ಕಲಬುರಗಿ ಶೇ. 57.64, ರಾಯಚೂರು ಶೇ. 67.19, ಯಾದಗಿರಿ ಶೇ. 72.46, ಕೊಪ್ಪಳ ಶೇ. 74.77, ಬಳ್ಳಾರಿ ಶೇ. 73.76 ಹಾಗೂ ದಾವಣಗೆರೆ ಜಿಲ್ಲೆಯ ಹರಪನಹಳ್ಳಿಯಲ್ಲಿ ಶೇ. 77.56 ರಷ್ಟು ಮತದಾನ ದಾಖಲಾಗಿದೆ.

ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಈಶಾನ್ಯ ಪದವೀಧರರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ನಗರದಲ್ಲಿರುವ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ಪ್ರಕ್ರಿಯೆ ಪರಿಶೀಲಿಸಿದರು.

ಬೀದರ: ಈಶಾನ್ಯ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ಶುಕ್ರವಾರ ನಡೆದಿದ್ದು, ಜಿಲ್ಲೆಯಲ್ಲಿ ಶೇ.67.50ರಷ್ಟು ಮತದಾನ ನಡೆದಿದೆ. ಜಿಲ್ಲೆಯಲ್ಲಿ ಒಟ್ಟು 23 ಮತಗಟ್ಟೆಗಳಿದ್ದು, 11,414 ಮತದಾರರು ಇದ್ದಾರೆ. ಈ ಪೈಕಿ 7,706 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದರಲ್ಲಿ 5,771 ಪುರುಷ ಹಾಗೂ 1,935 ಮಹಿಳಾ ಪದವೀಧರರು ಮತದಾನ ಮಾಡಿದ್ದಾರೆ. 

ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡ ಮತದಾನ ನಿಧಾನ ಗತಿಯಲ್ಲಿ ಸಾಗಿ ಮಧ್ಯಾಹ್ನದ 3 ಗಂಟೆ ಹೊತ್ತಿಗೆ ಶೇ.51.80 ಆಗಿತ್ತು. ಸಂಜೆ 5 ಗಂಟೆ ವರೆಗೂ ಶೇ. 67.50ರಷ್ಟು ಮತದಾನ ಆಗಿದೆ. ಈ ಪೈಕಿ ದಾಬಕಾ ಮತಗಟ್ಟೆ ಸಂಖ್ಯೆ 21ರಲ್ಲಿ ಶೇ. 91.67 ಅತಿ ಹೆಚ್ಚು ಮತದಾನ ಆಗಿದ್ದು, ಬೀದರ ದಕ್ಷಿಣ ಕ್ಷೇತ್ರದ ಮತಗಟ್ಟೆ ಸಂಖ್ಯೆ 43ರಲ್ಲಿ ಶೇ.58.82ರಷ್ಟು ಮತದಾನ ನಡೆದಿದೆ.

ಔರಾದ ತಾಲೂಕಿನ 7 ಮತಗಟ್ಟೆಗಳಲ್ಲಿ ಶೇ. 81.14ರಷ್ಟು ಮತದಾನವಾಗಿದ್ದು, 753 ಜನರು ಮತ ಚಲಾಯಿಸಿದ್ದಾರೆ. ಭಾಲ್ಕಿ ತಾಲೂಕಿನ ಒಟ್ಟು 4 ಮತಗಟ್ಟೆಗಳಲ್ಲಿ ಶೇ. 72.31ರಷ್ಟು ಮತದಾನವಾಗಿದ್ದು, 906 ಜನರು ಹಕ್ಕು ಚಲಾಯಿಸಿದ್ದಾರೆ.

ಬಸವಕಲ್ಯಾಣ ತಾಲೂಕಿನ ಒಟ್ಟು 4 ಮತಗಟ್ಟೆಗಳಲ್ಲಿ ಶೇ.70.89ರಷ್ಟು ಮತದಾನ ನಡೆದಿದ್ದು, 1381 ಪದವೀಧರರು ಹಕ್ಕು ಚಲಾಯಿಸಿದ್ದಾರೆ. ಹುಮನಾಬಾದ ತಾಲೂಕಿನ 4 ಮತಗಟ್ಟೆಗಳಲ್ಲಿ ಶೇ. 67.62ರಷ್ಟು ಮತದಾನ ನಡೆದಿದ್ದು, 2,308 ಪದವೀಧರರು ಹಕ್ಕು ಚಲಾಯಿಸಿದ್ದಾರೆ. ಬೀದರನ ಒಟ್ಟು 5 ಮತಗಟ್ಟೆಗಳಲ್ಲಿ ಶೇ. 60.87ರಷ್ಟು ಮತದಾನವಾಗಿದ್ದು, 2,358 ಪದವೀಧರರು ಮತದಾನ ಹಕ್ಕು ಚಲಾಯಿಸಿದ್ದಾರೆ.

ಯಾದಗಿರಿ: ಈಶಾನ್ಯ ಪದವೀಧರರ ಚುನಾವಣೆಗೆ ಜಿಲ್ಲೆಯಲ್ಲಿ ಶೇ. 72.46 ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 5,159 ಮತದಾರರಿದ್ದು, 13 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಬೆಳಗ್ಗೆಯಿಂದ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮತದಾನಕ್ಕೆ ನಿರುತ್ಸಾಹ ವ್ಯಕ್ತವಾಗಿತ್ತು. ಮಧ್ಯಾಹ್ನದ ಹೊತ್ತಿಗೆ ವಾತಾರಣ ತಿಳಿಗೊಂಡಿದ್ದರಿಂದ ಪದವೀಧರರು ಉತ್ಸಾಹದಿಂದ ಮತದಾನದಲ್ಲಿ ತೊಡಗಿದ್ದರು.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.