ಹೊತೇರಿದಂತೆ ಮತದಾನ ಚುರುಕು


Team Udayavani, Jun 9, 2018, 2:34 PM IST

cta-1.jpg

ಚಿತ್ರದುರ್ಗ: ವಿಧಾನಪರಿಷತ್‌ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶುಕ್ರವಾರ ಶಾಂತಿಯುತವಾಗಿ ಮತದಾನ ನಡೆಯಿತು. ಜಿಲ್ಲೆಯ ಏಳು ಮತಗಟ್ಟೆಗಳಲ್ಲಿ ಬೆಳಿಗ್ಗೆ 7ರಿಂದ 11 ಗಂಟೆ ತನಕ ಮತ ಚಲಾವಣೆ ನೀರಸವಾಗಿತ್ತು. ಆಗ ಕೇವಲ ಶೇ. 19 ರಷ್ಟು ಮಾತ್ರ ಮತದಾನವಾಗಿತ್ತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಚೇತರಿಕೆ ಕಂಡು ಶೇ. 50.78ರಷ್ಟು ಮತದಾನ ಆಗಿತ್ತು.

ಮಧ್ಯಾಹ್ನದ ನಂತರ ಮತದಾರರು ಮತಗಟ್ಟೆಯತ್ತ ದೌಡಾಯಿಸಿದ್ದರಿಂದ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 84.75 ರಷ್ಟು ಮತದಾನವಾಗಿ ಏರಿಕೆ ಕಂಡಿತು. ಸಂಜೆ 5 ಗಂಟೆ ವೇಳೆಗೆ ಶೇ. 95.59 ರಷ್ಟು ಮತದಾನ ಆಗುವ ಮೂಲಕ ದಾಖಲೆ ಸೃಷ್ಟಿಯಾಯಿತು.

ಮೊಳಕಾಲ್ಮೂರು ತಾಲೂಕಿನಲ್ಲಿ ಗರಿಷ್ಠ ಶೇ. 96.73 ಮತದಾನವಾಗಿದ್ದರೆ, ಚಿತ್ರದುರ್ಗದಲ್ಲಿ ಶೇ. 96.44 ರಷ್ಟು ಮತದಾನವಾಗಿದೆ. ಚಿತ್ರದುರ್ಗದ ಮತ್ತೂಂದು ಮತಗಟ್ಟೆಯಲ್ಲಿ ಕನಿಷ್ಠ ಶೇ. 93.05 ಮತದಾನವಾಗಿದೆ.
 
ಕ್ಷೇತ್ರದ ಒಟ್ಟು 19,402 ಮತದಾರರಲ್ಲಿ 3830 ಮತದಾರರು ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳಲ್ಲಿದ್ದಾರೆ. ಈ ಪೈಕಿ 2944 ಪುರುಷರು ಹಾಗೂ 886 ಮಹಿಳಾ ಮತದಾರರಿದ್ದಾರೆ. ಚಿತ್ರದುರ್ಗ ನಗರದಲ್ಲಿ 1234 ಮತದಾರರು ಇರುವುದರಿಂದ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರ ಅಭ್ಯರ್ಥಿ ಕೆ.ಜಿ. ತಿಮ್ಮಾರೆಡ್ಡಿಯವರ ಬೆಂಬಲಿಗರು ಮತಗಟ್ಟೆಗಳ ಮುಂದೆ ನಿಂತು ಮತಯಾಚಿಸಿದರು. ಜೆಡಿಎಸ್‌ ಅಭ್ಯರ್ಥಿ ರಮೇಶ್‌ಬಾಬು, ಕಾಂಗ್ರೆಸ್‌ ಅಭ್ಯರ್ಥಿ ಎಂ. ರಾಮಪ್ಪ, ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ, ಪಕ್ಷೇತರ ಅಭ್ಯರ್ಥಿ ತಿಮ್ಮಾರೆಡ್ಡಿ ಪರ ಕೆಲಸ ಮಾಡುತ್ತಿದ್ದ ಕಾರ್ಯಕರ್ತರು ಮತದಾನ ಕೇಂದ್ರ ಬಿಟ್ಟು ಕದಲಲಿಲ್ಲ.

ಚಿತ್ರದುರ್ಗ ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ತೆರೆಯಲಾಗಿದ್ದ ಎರಡು ಮತ ಕೇಂದ್ರಗಳಿಗೆ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಭೇಟಿ ನೀಡಿ ತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಅದೇ ರೀತಿ ಜೆಡಿಎಸ್‌, ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿಗಳ ಪರ ಸಾಕಷ್ಟು ಕಾರ್ಯಕರ್ತರು, ಮುಖಂಡರು
ತಮ್ಮ ತಮ್ಮ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ ಪರ ಮತಯಾಚಿಸಿದರು. 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.