ಹಿರಿಯ ಜೀವದ ಕನಸು ಕೊನೆಗೂ ನನಸಾಯಿತು
Team Udayavani, Jun 10, 2018, 7:00 AM IST
ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಕಾರ್ಕಡ ತೆಂಕ ಹೋಳಿ ನಿವಾಸಿ ಕಾಳಿಂಗ ಹೊಳ್ಳ ಎನ್ನುವ 75 ವರ್ಷದ ಹಿರಿಯ ನಾಗರಿಕರು ತನ್ನ ಮನೆ ಸಮೀಪದ ರಸ್ತೆ ಅಭಿವೃದ್ಧಿಗಾಗಿ ಸಾಕಷ್ಟು ಹೋರಾಟ ನಡೆಸಿ ಪ್ರಯೋಜನವಾಗದಿದ್ದಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದೀಗ ಪ್ರಧಾನಿ ಕಾರ್ಯಾಲಯದಿಂದ ಬಂದ ಸೂಚನೆಯಂತೆ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಅನುದಾನದಿಂದ ರಸ್ತೆ ಅಭಿವೃದ್ಧಿಗೊಂಡಿದೆ.
ಈ ರಸ್ತೆ ಅಭಿವೃದ್ಧಿಗೆ 2011ರಲ್ಲಿ ಸಾಲಿಗ್ರಾಮ ಪ.ಪಂ. ಅನುದಾನ ಬಿಡುಗಡೆ ಮಾಡಿತ್ತು. ಆಗ ಹೊಳ್ಳರು ತನ್ನ ಪಟ್ಟಾ ಸ್ಥಳವನ್ನು ರಸ್ತೆ ನಿರ್ಮಾಣಕ್ಕಾಗಿ ಬಿಟ್ಟುಕೊಟ್ಟಿದ್ದರು. ಆದರೆ ಶೇ.75 ಮಾತ್ರ ಕಾಮಗಾರಿ ನಡೆಸ ಲಾಯಿತು. ಇದರಿಂದಾಗಿ ಕಾಳಿಂಗ ಹೊಳ್ಳರ ಮನೆ ಹಾಗೂ ಹತ್ತಿರದ ಹಲವು ಮನೆ ಗಳಿಗೆ ಸಂಪರ್ಕ ಸಾಧ್ಯವಾಗಲಿಲ್ಲ. ಹೀಗಾಗಿ ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆ ಯಾಗುತಿತ್ತು. ದ್ವಿಚಕ್ರ ವಾಹನ ಕೂಡ ಸಂಚರಿಸಲು ಸಾಧ್ಯವಾಗುತ್ತಿರಲಿಲ್ಲ.
ಈ ಕುರಿತು ಕಾಳಿಂಗ ಹೊಳ್ಳರು 2011ರಿಂದ ಜಿಲ್ಲಾಧಿಕಾರಿ, ಎ.ಸಿ.ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರು. ಪ್ರಯೋಜನವಾಗದಿದ್ದಾಗ ತಹಶೀಲ್ದಾರ್, ಲೋಕಾಯುಕ್ತ, ಎ.ಸಿ.ಬಿ.ಗೂ ದೂರು ನೀಡಿದ್ದರು. ಅನಂತರ ಕೊನೆಗೆ ಪ್ರಧಾನಿ ಅವರಿಗೆ ಪತ್ರ ಬರೆದರು. ಹೊಳ್ಳರ ಈ ಹೋರಾಟ ಕುರಿತು ಉದಯವಾಣಿ ಹಲವು ಬಾರಿ ವರದಿ ಮಾಡಿತ್ತು.
ಎರಡು ಬಾರಿ ಮನವಿ
ಪ್ರಧಾನಿಯವರಿಗೆ ಮೊದಲ ಬಾರಿ ಮನವಿ ಸಲ್ಲಿಸಿದಾಗ ಪರಿಶೀಲಿಸುವಂತೆ ಜಿಲ್ಲಾಡಳಿತ ಹಾಗೂ ಸ್ಥಳೀಯಾಡಳಿತಕ್ಕೆ ಸೂಚನೆ ಬಂದಿತ್ತು. ಅದರಂತೆ ಸ್ಥಳೀಯಾಡಳಿತ ಪರಿಶೀಲಿಸಿತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದ ಬೇಸರಗೊಂಡ ಹೊಳ್ಳರು ಮತ್ತೆ ಪ್ರಧಾನಿಗೆ ಪತ್ರ ಬರೆದರು. ಆಗ ಸಮಸ್ಯೆಯನ್ನು ಗಂಭೀರವಾಗಿ ಪರಿಶೀಲಿಸುವಂತೆ ಮತ್ತೂಮ್ಮೆ ಆದೇಶ ಬಂತು.
ಅನಂತರ ಹೊಳ್ಳರು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ ಮಾಡಿ ಪ್ರಧಾನಿ ಕಾರ್ಯಾಲಯದಿಂದ ಬಂದ ಪತ್ರವನ್ನು ತೋರಿಸಿದರು. ತತ್ಕ್ಷಣ ಕಾರ್ಯಪ್ರವೃತ್ತರಾದ ವಿ.ಪ. ಸದಸ್ಯರು 1.50ಲಕ್ಷ ರೂ. ಅನುದಾನ ನೀಡಿ ರಸ್ತೆ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಇದೀಗ ಹೊಳ್ಳರ ಮನೆಯ ತನಕ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಸ್ವಲ್ಪ ಕಾಮಗಾರಿ ಬಾಕಿ ಇದ್ದು ಹೆಚ್ಚುವರಿ ಅನುದಾನ ನೀಡುವ ಭರವಸೆ ಕೂಡ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ