ಅಂತ್ಯೋದಯ ಎಕ್ಸ್‌ಪ್ರೆಸ್‌ಗೆ ನಿಲುಗಡೆ ನೀಡದೆ ಕಾಸರಗೋಡಿನ ಅವಗಣನೆ


Team Udayavani, Jun 10, 2018, 6:00 AM IST

09ksde11.jpg

ಕಾಸರಗೋಡು: ರಾಜಧಾನಿ ಎಕ್ಸ್‌ ಪ್ರಸ್‌ ರೈಲಿಗೆ ಕಾಸರಗೋಡು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕೆಂದು ಪ್ರಯಾಣಿಕರ ಮತ್ತು ಜನಪ್ರತಿನಿಧಿಗಳ ಹಲವು ವರ್ಷಗಳ ಬೇಡಿಕೆ ಇರುವಂತೆ ಅಂತ್ಯೋದಯ ಎಕ್ಸ್‌ಪ್ರೆಸ್‌ಗೆ ನಿಲುಗಡೆ ನೀಡದೆ ಅವಗಣಿಸಲಾಗಿದೆ ಎಂದು ಸಾರ್ವತ್ರಿಕ ಅಭಿಪ್ರಾಯ ಕೇಳಿ ಬಂದಿದೆ. 

ದಾದರ್‌ ಕೊಚ್ಚುವೇಲಿ, ಕೊಯಮತ್ತೂರು ಬಿಕಾನೀರ್‌, ತಿರುವನಂತಪುರ (ವಾರಕ್ಕೆ ಒಂದು ಬಾರಿ). ತುರಂತ್‌ ಎಕ್ಸ್‌ಪ್ರೆಸ್‌ ಮೊದಲಾದ ರೈಲು ಗಳಿಗೆ ಕಾಸರಗೋಡಿನಲ್ಲಿ ನಿಲುಗಡೆಯಿಲ್ಲ.

ಮಲಬಾರಿನ ರೈಲು ಪ್ರಯಾಣಿಕರಿಗೆ ಪ್ರಯೋಜನಕಾರಿ ಯಾಗಿರುವ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲು ಗಾಡಿಗೆ ಕಾಸರಗೋಡು ಜಿಲ್ಲೆಯ ಯಾವುದೇ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಿಲ್ಲ. ತಿರುವನಂತಪುರ ಕೊಚ್ಚುವೇಲಿಯಿಂದ ಮಂಗಳೂರಿಗೆ ವಾರಕ್ಕೆ ಎರಡು ಬಾರಿ ಸಂಚ ರಿಸುವ ಈ ರೈಲು ಗಾಡಿಗೆ ಕಣ್ಣೂರು, ಕಲ್ಲಿಕೋಟೆ, ಶೋರ್ನೂರು, ತೃಶ್ಶೂರು, ಎರ್ನಾಕುಳಂ ಜಂಕ್ಷನ್‌, ಕೊಲ್ಲಂ, ಕೊಚ್ಚುವೇಲಿಯಲ್ಲಿ ಮಾತ್ರ ನಿಲುಗಡೆಯಿದೆ.

ಅಂತ್ಯೋದಯ ರೈಲುಗಾಡಿ ಗುರುವಾರ ಮತ್ತು ಶನಿವಾರ ರಾತ್ರಿ 9.25ಕ್ಕೆ ಕೊಚ್ಚುವೇಲಿಯಿಂದ ಹೊರಟು ಮರುದಿನ ಮಂಗಳೂರಿಗೆ ತಲುಪಲಿದೆ. ಶುಕ್ರವಾರ ಮತ್ತು ರವಿವಾರ ಮಂಗಳೂರು ರೈಲು ನಿಲ್ದಾಣದಿಂದ ರಾತ್ರಿ 8 ಗಂಟೆಗೆ ಹೊರಟು ಮರುದಿನ ಕೊಚ್ಚುವೇಲಿಗೆ ತಲುಪಲಿದೆ. 18 ಬೋಗಿಗಳಿರುವ ಈ ರೈಲು ಗಾಡಿಯಲ್ಲಿ ಎಲ್ಲ ಬೋಗಿ ಗಳು ಜನರಲ್‌ ಆಗಿರುತ್ತವೆ. ಕೇರಳದ ದಕ್ಷಿಣದಿಂದ ಹೊರ ಡುವ ರೈಲುಗಾಡಿಗೆ ಹತ್ತಿರದ ಜಿಲ್ಲೆಯಾದ ಕೊಲ್ಲಂನಲ್ಲಿ ನಿಲುಗಡೆ ನೀಡಿದ್ದರೂ, ಉತ್ತರದ ಕೊನೆಯ ಜಿಲ್ಲೆಯಾದ ಕಾಸರಗೋಡಿನಲ್ಲಿ  ನಿಲುಗಡೆ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.

ರಾಜ್ಯದ ರಾಜಧಾನಿಯಾದ ತಿರುವನಂತಪುರಕ್ಕೆ ವಿವಿಧ ಅಗತ್ಯಗಳಿಗಾಗಿ ದಿನ ನಿತ್ಯ ನೂರಾರು ಪ್ರಯಾಣಿಕರು ಸಂಜೆ ವೇಳೆ ಇರುವ ಮಲಬಾರ್‌, ಮಾವೇಲಿ ಸಹಿತ ರೈಲುಗಾಡಿಗಳಲ್ಲಿ ಕಾಸರಗೋಡು ರೈಲು ನಿಲ್ದಾಣದಿಂದ ಪ್ರಯಾಣಿಸುತ್ತಾರೆ. ಹಲವು ಸಂದರ್ಭಗಳಲ್ಲಿ ರಿಸರ್ವೇಶನ್‌ ಲಭಿಸದೆ ಜನರಲ್‌ ಬೋಗಿಗಳಲ್ಲಿ ಪ್ರಯಾಣಿಸಬೇಕಾಗಿ ಬರುವುದಿದೆ. ಈ ರೈಲು ಗಾಡಿಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುವುದರಿಂದ ಬಹುತೇಕ ಮಂದಿ ರಾಜ್ಯ ಸಾರಿಗೆ ಬಸ್‌ ಮತ್ತು ಖಾಸಗಿ ಬಸ್‌ಗಳನ್ನು ಅವಲಂಬಿಸುತ್ತಾರೆ. ಬಸ್‌ಗಳಲ್ಲಿ ರೈಲುಗಾಡಿಗಳಿಗಿಂತ ಮೂರು ಪಟ್ಟು ಹೆಚ್ಚಿನ‌ ಹಣವನ್ನು ನೀಡಬೇಕಾಗುತ್ತದೆ. ಇದಕ್ಕೆ ಪರಿಹಾರ ಎಂಬಂತಿರುವ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲುಗಾಡಿಗೆ ಕಾಸರಗೋಡು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡದಿರುವುದರಿಂದ ಕಾಸರಗೋಡಿನ ಪ್ರಯಾಣಿಕರಿಗೆ ಇದರ ಪ್ರಯೋಜನ ಲಭಿಸದಂತಾಗಿದೆ.

ಸದಾನಂದ ಗೌಡ  ರೈಲ್ವೇ ಸಚಿವರಾಗಿದ್ದಾಗ ಮಂಜೂರು ಮಾಡಿದ್ದ ಬೈಂದೂರು ಪ್ಯಾಸೆಂಜರ್‌ ರೈಲುಗಾಡಿಯನ್ನು ನಿಲುಗಡೆಗೊಳಿಸಿ ಹಲವು ತಿಂಗಳುಗಳೇ ಕಳೆದಿದೆ. ಬೈಂದೂರು ಪ್ಯಾಸೆಂಜರ್‌ ರೈಲುಗಾಡಿಯನ್ನು ಪುನರಾರಂಭಿಸುವುದಾಗಿ ರೈಲ್ವೇ ಅಧಿಕಾರಿಗಳು ಭರವಸೆ ನೀಡಿದ್ದರೂ ಈ ವರೆಗೂ ಆರಂಭಗೊಂಡಿಲ್ಲ. ಜಿಲ್ಲೆಯ ಪ್ರಯಾಣಿಕರಿಗೆ ಬಹಳಷ್ಟು ಪ್ರಯೋಜನವಾಗಿದ್ದ ಯಶವಂತಪುರ ಎಕ್ಸ್‌ಪ್ರೆಸ್‌ ರೈಲುಗಾಡಿಯ ಬೋಗಿಗಳನ್ನು ಕಡಿತಗೊಳಿಸಿರುವುದರಿಂದ ಕಾಸರಗೋಡು, ಕಣ್ಣೂರು ಜಿಲ್ಲೆಯ ಪ್ರಯಾಣಿಕರು ಬಹಳಷ್ಟು ಸಮಸ್ಯೆಗೆ ತುತ್ತಾಗಿದ್ದಾರೆ.

ಪ್ರತಿಭಟನಾರ್ಹ
ಕಾಸರಗೋಡು ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆಯೂ ಅವಗಣನೆ ತೋರಿದೆ. ದಕ್ಷಿಣ ರೈಲ್ವೇ ಹಲವು ರೈಲು ನಿಲ್ದಾಣಗಳನ್ನು ಭಡ್ತಿಗೊಳಿಸುತ್ತಿದ್ದರೂ ಕಾಸರಗೋಡು ಜಿಲ್ಲೆಯ ಉಪ್ಪಳ ಮೊದಲಾದ ರೈಲು ನಿಲ್ದಾಣಗಳನ್ನು ಭಡ್ತಿಗೊಳಿಸದೆ ಅವಗಣಿಸುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಉಪ್ಪಳ ರೈಲು ನಿಲ್ದಾಣ ಅವಗಣನೆ ವಿರುದ್ಧ ಸ್ಥಳೀಯರು ಹಲವು ಬಾರಿ ಪ್ರತಿಭಟನೆ ವ್ಯಕ್ತಪಡಿಸಿದ್ದರು. ನಿರ್ದಿಷ್ಟ  ಸೂಪರ್‌ ಫಾಸ್ಟ್‌ ರೈಲು ಹಳಿ ನಿರ್ಮಾಣ ಯೋಜನೆಯಲ್ಲಿ ಕಾಸರಗೋಡು ರೈಲು ನಿಲ್ದಾಣವನ್ನು ಸೇರ್ಪಡೆಗೊಳಿಸದಿರುವುದು ಪ್ರತಿಭಟ ನಾರ್ಹವಾಗಿದೆ.

– ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.