ಆನೆ ಹಾವಳಿ ತಡೆಯಲು ಅರಣ್ಯ ಇಲಾಖೆಯ ಹೊಸ ಚಿಂತನೆ


Team Udayavani, Jun 11, 2018, 11:38 AM IST

11-june-4.jpg

ಮಹಾನಗರ: ಕೃಷಿ ಭೂಮಿಗೆ ಆನೆಗಳು ನುಗ್ಗುವುದನ್ನು ತಡೆಯಲು ಅರಣ್ಯ ಇಲಾಖೆಯು ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ‘ವಿಶೇಷ ತಡೆ’ (ಸ್ಪೆಷಲ್‌ ಸ್ಟ್ರಕ್ಚರ್) ನಿರ್ಮಿಸಲು ಯೋಜನೆ ರೂಪಿಸಿದೆ. ನೀರು ಹರಿಯುವ ತೋಡುಗಳಿಗೆ ಅಡ್ಡಲಾಗಿ ಇವನ್ನು ನಿರ್ಮಿಸಿ ಆನೆಗಳ ಪ್ರವೇಶ ತಡೆಯುವುದು ಇದರ ಸ್ಥೂಲ ಚಿತ್ರಣ.

ಆನೆಗಳಿಂದ ಬೆಳೆ ನಾಶ ತಡೆಯಲು ಈ ಹಿಂದೆ ಸೋಲಾರ್‌ ಬೇಲಿ, ಆನೆ ಕಂದಕ ನಿರ್ಮಿಸಲಾಗಿತ್ತು. ಆದರೆ ಸಂಪೂರ್ಣ ಪರಿಹಾರ ಸಿಕ್ಕಿರಲಿಲ್ಲ. ಜನ ಸಂಚಾರವಿರುವಲ್ಲಿ ಸೋಲಾರ್‌ ಬೇಲಿ ಅಳವಡಿಸಲು, ನೀರು ಹರಿಯುವ ನದಿ- ತೋಡುಗಳಲ್ಲಿ ಆನೆ ಕಂದಕ ನಿರ್ಮಿಸಲು ಅಸಾಧ್ಯ ಎಂಬುದೇ ಇದಕ್ಕೆ ಕಾರಣ. ಹೀಗಾಗಿ ಜಿಲ್ಲೆಯ ಕಾಡಿನಂಚಿನ ನದಿ, ತೋಡುಗಳಲ್ಲಿ ವಿಶೇಷ ತಡೆ ನಿರ್ಮಿಸಿ ಆನೆಗಳ ಪ್ರವೇಶಕ್ಕೆ ತಡೆ ಹಾಕಲು ಇಲಾಖೆ ಗಮನಹರಿಸಿದೆ.

ವಿಶೇಷ ತಡೆ ರಚನೆ ಹೇಗಿರುತ್ತದೆ ?
ಸಿಮೆಂಟ್‌ ಹಾಗೂ ಕಬ್ಬಿಣದ ಬೀಮ್‌ಗಳನ್ನು ತಯಾರಿಸಿ, ನೀರು ಹರಿಯುವ ತೋಡುಗಳಲ್ಲಿ ಪ್ರತಿ 80 ಸೆಂ.ಮೀ. ಅಥವಾ 1 ಮೀ. ಅಂತರದಲ್ಲಿ ಸುಮಾರು 2 ಮೀ. ಎತ್ತರಕ್ಕೆ ಕಂಬಗಳನ್ನಾಗಿ ನಿಲ್ಲಿಸಲಾಗುತ್ತದೆ. ಅನಂತರ ಅವುಗಳಿಗೆ ಕಬ್ಬಿಣದ ಮುಳ್ಳುಗಳನ್ನು ಜೋಡಿಸಲಾಗುತ್ತದೆ. ಕಂಬಗಳ ನಡುವೆ ಅವಕಾಶ ಕಿರಿದಾಗಿರುವುದರಿಂದ ಆನೆಗಳಿಗೆ ಇದನ್ನು ದಾಟಿ ಒಳಬರುವುದಕ್ಕೆ ಸಾಧ್ಯವಾಗುವುದಿಲ್ಲ. ಒಂದು ವೇಳೆ ದಾಟಲು ಪ್ರಯತ್ನಪಟ್ಟರೂ ಮುಳ್ಳು ಚುಚ್ಚುವ ಕಾರಣ ಆನೆಗಳು ಹಿಂಜರಿಯುತ್ತವೆ.

ಬಂಡೀಪುರ, ನಾಗರಹೊಳೆ ಉದಾಹರಣೆ
ಈ ವಿಶೇಷ ತಡೆ ರಚನೆ ಅಳವಡಿಕೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ. ಆದರೆ ಆನೆಗಳು ಅತೀ ಹೆಚ್ಚಿರುವ ಬಂಡೀಪುರ ಹಾಗೂ ನಾಗರಹೊಳೆಯಂತಹ ಅರಣ್ಯ ಪ್ರದೇಶಗಳಲ್ಲಿ ಈಗಾಗಲೇ ನಿರ್ಮಿಸಲಾಗಿದೆ; ಆನೆಗಳ ಹಾವಳಿ ತಡೆಯುವಲ್ಲಿ ಗಣನೀಯ ಯಶಸನ್ನನ್ನೂ ಸಾಧಿಸಿದೆ. ಹೀಗಾಗಿ ಈ ಪ್ರಯೋಗವನ್ನು ಜಿಲ್ಲೆಯಲ್ಲೂ ನಡೆಸಲು ಜಿಲ್ಲಾ ಅರಣ್ಯ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಆನೆ ಹಾವಳಿ ಹೆಚ್ಚಿರುವ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳಲ್ಲಿ ಇದರ ಅಳವಡಿಕೆ ಯಶಸ್ವಿಯಾಗಬಹುದು ಎನ್ನುವ ಲೆಕ್ಕಾಚಾರ ಅವರದು.

ಈ ಬಗ್ಗೆ ‘ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಾ| ವಿ. ಕರಿಕಳನ್‌, ವಿಶೇಷ ತಡೆಗಳನ್ನು ಎಲ್ಲಿ ನಿರ್ಮಿಸಬಹುದೆನ್ನು ವುದಕ್ಕಾಗಿ ಸರ್ವೆ ನಡೆಸುವಂತೆ ಸೂಚನೆನೀಡಲಾಗಿದೆ. ವರದಿ ಬಂದ ಬಳಿಕ ಮೇಲಧಿಕಾರಿಗಳ ಅಂಗೀಕಾರ ಪಡೆದು ನಿರ್ಮಿಸಲಾಗುವುದು ಎಂದಿದ್ದಾರೆ. 

ಕಾಡಾನೆ ದಾಂಧಲೆ ಇಳಿಕೆ
ಜಿಲ್ಲೆಯಲ್ಲಿ ಕಾಡಾನೆಗಳು ಕೃಷಿ ಭೂಮಿಗೆ ನುಗ್ಗಿದ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಕೆ ಆಗಿರುವುದು ದಾಖಲೆಗಳಿಂದ ಸ್ಪಷ್ಟವಾಗುತ್ತದೆ. ಇದಕ್ಕೆ ಇಲಾಖೆ ನಿರ್ಮಿಸಿರುವ ಆನೆ ಕಂದಕಗಳೂ ಕಾರಣ ಎನ್ನಬಹುದು. ಹಾಗಿದ್ದರೂ ಆನೆ ದಾಳಿ ಸಂಪೂರ್ಣ ನಿಲ್ಲದ ಕಾರಣ ಈಗ ಈ ವಿಶೇಷ ತಡೆ ರಚನೆಯ ಮೊರೆ ಹೊಗಲು ಇಲಾಖೆ ನಿರ್ಧರಿಸಿರುವುದು ಗಮನಾರ್ಹ.

ಗಣೇಶ್‌ ಮಾವಂಜಿ

ಟಾಪ್ ನ್ಯೂಸ್

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.