ಕಬ್ಬನ್‌ ಪಾರ್ಕಲ್ಲಿ ಕಲರ್‌ಫ‌ುಲ್‌ ಬಿದಿರು


Team Udayavani, Jun 11, 2018, 11:53 AM IST

cubbon.jpg

ಬೆಂಗಳೂರು: ಪರಿಸರ ಪ್ರಿಯರ ನೆಚ್ಚಿನ ತಾಣ ಕಬ್ಬನ್‌ ಉದ್ಯಾನವನ ಇನ್ನುಮುಂದೆ ದೇಸಿ ಮತ್ತು ವಿದೇಶಿ ಬಿದಿರು ತಳಿಗಳ ಸಂಗಮ ತಾಣವಾಗಲಿದೆ. ಬಣ್ಣ-ಬಣ್ಣದ ಬಿದಿರು ಮೆಳೆಗಳು ಇಲ್ಲಿ ಮಿನುಗಲಿವೆ.

ತೋಟಗಾರಿಕೆ ಇಲಾಖೆ ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದು ಕಬ್ಬನ್‌ಪಾರ್ಕ್‌ಗೆ ಇನ್ನಷ್ಟು ಮೆರುಗು ನೀಡಲು ಮುಂದಾಗಿದೆ. ಪಾರ್ಕ್‌ನಲ್ಲಿ ಈಗಾಗಲೇ ಹೂ ಬಿಟ್ಟು, ನೆಲಕಚ್ಚಿರುವ ಬಿದಿರಿನ ಸ್ಥಳದಲ್ಲೇ ಹೊಸ ಬಿದಿರಿನ ತಳಿಗಳ ನಾಟಿ ಮಾಡುವ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ.

ಬಿದಿರು ಕಬ್ಬನ್‌ಪಾರ್ಕ್‌ಗೆ ಅಂದ ತಂದುಕೊಟ್ಟಿದೆ. ಆದರೆ, ಅವುಗಳಲ್ಲಿ ಕೆಲವು ಇತ್ತೀಚೆಗೆ ನೆಲೆಕ್ಕುರುಳಿವೆ. ಹೀಗಾಗಿ ಬಿದಿರು ಬಿದ್ದಿರುವ ಜಾಗದಲ್ಲಿ ಮತ್ತೆ ಬಿದಿರು ನಾಟಿ ಮಾಡುವ ಕೆಲಸಕ್ಕೆ ತೋಟಗಾರಿಕಾ ಇಲಾಖೆ ಮುಂದಾಗಿದೆ. ಈ ಮೂಲಕ ಕಬ್ಬನ್‌ಪಾರ್ಕ್‌ಗೆ ದೇಶಿಯ ಮತ್ತು ವಿದೇಶಿ ಬಿದಿರಿನ ಸೌಂದರ್ಯ ನೀಡುವ ಉದ್ದೇಶ ಇಲಾಖೆಯದ್ದಾಗಿದೆ.

ಸದ್ಯದಲ್ಲೇ ಅರಣ್ಯಇಲಾಖೆ ನೆಲಕ್ಕುರುಳಿರುವ ಬಿದಿರುಗಳನ್ನು ತೆರವುಗೊಳಿಸುವ ಕಾರ್ಯಚಣೆಗೆ ಮುಂದಾಗಲಿದೆ. ಇದಾದ ಬಳಿಕ ಬಿದಿರು ತಳಿಗಳ ನಾಟಿ ಪ್ರಕ್ರಿಯೆ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಕಲಾಕೃತಿಯ ಟಚ್‌: ಇತ್ತೀಚೆಗೆ ಬಿದ್ದಿರುವ ಬಿದಿರುಗಳಿಗೆ ಕಲಾಕೃತಿಗಳ ಟಚ್‌ ನೀಡುವ ಇರಾದೆ ಕೂಡ ತೋಟಗಾರಿಕೆ ಇಲಾಖೆಗೆ ಇದೆ. ಈ ಕುರಿತಂತೆ ಶಿಪ್ಲಕಲಾ ಅಕಾಡೆಮಿಯನ್ನು ಸಂಪರ್ಕಿಸಿದೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ, ಬಿದಿರನ್ನು ಭದ್ರಾವತಿಯ ಕಾಗದ ಕಾರ್ಖಾನೆಗೆ ನೀಡುವ ಚಿಂತನೆ ನಡೆಸಿದೆ. ಈ ಎರಡೂ ಕಾರ್ಯಗಳು ಯಶಸ್ವಿಯಾಗದಿದ್ದರೆ ಹರಾಜು ಹಾಕುವ ಇಂಗಿತವನ್ನು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಕೇರಳಕ್ಕೆ ತಜ್ಞರ ತಂಡ: ಕಬ್ಬನ್‌ಪಾರ್ಕ್‌ನಲ್ಲಿ ಬಿದಿರು ನಾಟಿ ಮಾಡುವ ಪ್ರಕ್ರಿಯೆ ಸಂಬಂಧ ಪರಿಸರ ತಜ್ಞ ಯಲಪ್ಪ ರೆಡ್ಡಿ ನೇತೃತ್ವದ ತಜ್ಞರ ತಂಡ ಸದ್ಯದಲ್ಲಿಯೇ ಕೇರಳಕ್ಕೆ ಭೇಟಿ ನೀಡಲಿದೆ. ಕೇರಳದಲ್ಲಿ ಬಿದಿರಿಗೆ ಸಂಬಂಧ ಪಟ್ಟ ಹಲವು ಅರಣ್ಯ ಸಂಸ್ಥೆಗಳಿದ್ದು, ಇವುಗಳಿಗೆ ಪರಿಣಿತ ತಜ್ಞರ ತಂಡ ಭೇಟಿ ನೀಡಲಿದೆ. ಭಾರತೀಯ ತಳಿಗಳ ಜತೆಗೆ ಬರ್ಮಾ, ಮಲೇಷಿಯಾ ಸೇರಿದಂತೆ ಇನ್ನಿತರ ಬಿದಿರಿನ ತಳಿಗಳು ಇಲ್ಲಿ ದೊರೆಯಲಿದ್ದು, ಸೂಕ್ತವಾದ ಬಿದಿರಿನ ತಳಿಗಳನ್ನು ತಜ್ಞರ ತಂಡ ಆಯ್ಕೆ ಮಾಡಲಿದೆ.

ಬಣ್ಣ ಬಣ್ಣದ ಬಿದಿರು: ಕೇರಳದಿಂದ ಬಿದಿರು ವಿಭಿನ್ನ ಬಣ್ಣದಲ್ಲಿರುತ್ತದೆ. ಕಪ್ಪು, ಹಸಿರು ಮತ್ತು ಕಡು ಹಸಿರು ಬಣ್ಣದ ಬಿದಿರು ತಳಿಗಳು ಅಲ್ಲಿ ಲಭ್ಯವಿವೆ. ಬಿದಿರಿನ ಎಲೆಗಳು ಕೂಡ ಭಿನ್ನವಾಗಿರುತ್ತವೆ. ಈ ಎಲೆಗಳು ಕಬ್ಬನ್‌ಪಾರ್ಕ್‌ಗೆ ಹೊಸ ಕಳೆ ಕಟ್ಟಿಕೊಡಲಿವೆ. ಈ ಹೊಸ ಬಿದಿರು ತಳಿಗಳು 3 ವರ್ಷಕ್ಕೆ 15 ರಿಂದ 20 ಅಡಿ ಬೆಳೆಯಲಿವೆ. ಇವುಗಳಲ್ಲಿ 15 ವರ್ಷದಿಂದ 40 ವರ್ಷ ಬಾಳುವ ತಳಿಗಳು ಇರಲಿವೆ ಎನ್ನುತ್ತಾರೆ ಅಧಿಕಾರಿಗಳು.

ಕಬ್ಬನ್‌ ಪಾರ್ಕ್‌ನಲ್ಲಿ ಈಗಾಗಲೇ ಹೂ ಬಿಟ್ಟು ನೆಲಕ್ಕುರುಳಿರುವ ಬಿದಿರಿನ ಸ್ಥಳದಲ್ಲಿಯೇ ಹೊಸ ಬಿದಿರಿನ ನಾಟಿ ಪ್ರಕ್ರಿಯೆ ನಡೆಯಲಿದೆ. ಈ ಸಂಬಂಧ ಸದ್ಯದಲ್ಲಿಯೇ ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ನೇತೃತ್ವದಲ್ಲಿ ಪರಿಣಿತರ ತಂಡ ಕೇರಳಕ್ಕೆ ಭೇಟಿ ನೀಡಲಿದ್ದು, ಅಲ್ಲಿಂದ ತರಲಾಗುವ ದೇಶಿ ಮತ್ತು ವಿದೇಶಿ ಬಿದಿರಿನ ತಳಿಗಳ ನಾಟಿ ಪ್ರಕ್ರಿಯೆ ನಡೆಯಲಿದೆ.
-ಮಹಾಂತೇಶ್‌ ಮುರುಗೋಡ್‌, ತೋಟಗಾರಿಕಾ ಇಲಾಖೆ ಉಪನಿರ್ದೇಶಕ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

8

Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ  ಶುರು 

7

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

6

Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.