ಪೈಪ್‌ಲೈನ್‌ ಕಾಮಗಾರಿ ಮೇಲ್ದರ್ಜೆಗೆ


Team Udayavani, Jun 11, 2018, 3:17 PM IST

chitra1.jpg

ಚಿತ್ರದುರ್ಗ: ಚಿತ್ರದುರ್ಗ ಮತ್ತು ಹಿರಿಯೂರು ನಗರಗಳಿಗೆ ಕುಡಿಯುವ ನೀರು ಪೂರೈಕೆ ಮೂಲದ ಹಿರಿಯೂರಿನ ವಾಣಿವಿಲಾಸ ಸಾಗರದ ಪೈಪ್‌ಲೈನ್‌ ಕಾಮಗಾರಿಯನ್ನು ಮೇಲ್ದರ್ಜೆಗೇರಿಸಲಾಗಿದೆ. ಅಕ್ಟೋಬರ್‌ ತಿಂಗಳಿನಲ್ಲಿ ಕಾಮಗಾರಿಗೆ ಚಾಲನೆ ದೊರೆಯಲಿದೆ.

ಚಿತ್ರದುರ್ಗ ನಗರದ ಜನತೆಗೆ ನೀರು ಸರಬರಾಜು ಮಾಡಲು 1972-73ನೇ ಸಾಲಿನಲ್ಲಿ ಮೊದಲ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು. ಸುಮಾರು 45 ವರ್ಷಗಳ ಹಳೆ ಯೋಜನೆ ಇದಾಗಿದ್ದು, 9.08 ಎಂಎಲ್‌ಡಿ ಸಾಮರ್ಥ್ಯ ಇತ್ತು. ಗರಿಷ್ಠ ನೀರು ಸರಬರಾಜು ಪ್ರಮಾಣ 5-6 ಎಂಎಲ್‌ ಡಿ ಸಾಮರ್ಥ್ಯವಾಗಿದೆ.

ಹಿರಿಯೂರಿನಿಂದ ಚಿತ್ರದುರ್ಗದವರೆಗೆ 34 ಕಿಮೀ ಉದ್ದದ ಏರುಕೊಳವೆ ಮಾರ್ಗದಲ್ಲಿ ನೀರು ಪೂರೈಕೆ
ಮಾಡಲಾಗುತ್ತಿತ್ತು. 9 ಎಂಎಲ್‌ಡಿ ಸಾಮರ್ಥಯದ ಜಲಶುದ್ಧೀಕರಣ ಘಟಕಕ್ಕೆ ಕಾಯಕಲ್ಪ ನೀಡಲಾಗುತ್ತಿದೆ. ಮೂಲ ಜಲ ಶುದ್ಧೀಕರಣ ಘಟಕ ಮತ್ತು ಬುರುಜನರೊಪ್ಪ ಪಂಪ್‌ಹೌಸ್‌ ಗಳು ಮೇಲ್ದರ್ಜೆಗೇರಲಿವೆ. ಬುರುಜನರೊಪ್ಪ ಐಪಿಎಸ್‌ನಲ್ಲಿ ಹೊಸದಾಗಿ ಸಂಪ್‌ ಮತ್ತು ಪಂಪ್‌ಹೌಸ್‌ ನಿರ್ಮಾಣ, ಚಿತ್ರದುರ್ಗ ನಗರದ ನಾಮಕಲ್‌ ಗ್ಯಾರೇಜ್‌ ಹತ್ತತಿರದ ಗುಡ್ಡದ ಮೇಲೆ 5 ಲಕ್ಷ ಲೀಟರ್‌ ಸಾಮರ್ಥ್ಯದ ನೆಲಮಟ್ಟದ ಜಲ ಸಂಗ್ರಹಾಗಾರ ನಿರ್ಮಾಣ ಮಾಡಲು ಅರಣ್ಯ ಇಲಾಖೆಯಿಂದ 0.31 ಹೆಕ್ಟೇರ್‌ ಜಮೀನು ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ. 34.66 ಕಿಮೀ ಮಾರ್ಗದಲ್ಲಿ 400 ಮಿಮೀ ವ್ಯಾಸದ ಡಿಐ ಏರು ಕೊಳವೆ ಅಳವಡಿಕೆ ಕಾರ್ಯದಲ್ಲಿ 25 ಕಿಮೀಯಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.

ಚಿತ್ರದುರ್ಗ ನಗರದಲ್ಲಿನ ಹಾಲಿ 5 ಟ್ಯಾಂಕ್‌ ಮತ್ತು 2 ಹೊಸ ಟ್ಯಾಂಕ್‌ಗಳಿಗೆ 8.5 ಕಿಮೀ ಉದ್ದದ ಕೊಳವೆಗಳ ಪೈಕಿ 7.8 ಕಿಮೀ ಉದ್ದದ ಕೊಳವೆಗಳನ್ನು ಅಳವಡಿಸಲಾಗಿದೆ. ಫೀಡರ್‌ ಕೊಳವೆ ಮಾರ್ಗಗಳ ಬದಲಾವಣೆ ಮಾಡಿ 9.3 ಕಿಮೀ ಉದ್ದದ ಪೈಪ್‌ ಅಳವಡಿಕೆ ಮಾಡಲಾಗುತ್ತದೆ. ಆಯುರ್ವೇದಿಕ್ ಕಾಲೇಜು ಹತ್ತಿರದ ಆದಿಶಕ್ತಿ ನಗರದಲ್ಲಿ 10 ಲಕ್ಷ ಲೀಟರ್‌ ಸಾಮರ್ಥ್ಯದ ಎರಡು ಮೇಲ್ಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ.

ಯೋಜನೆಗೆ 47.65 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ 2.80 ಕೋಟಿ ರೂ. ವೆಚ್ಚದಲ್ಲಿ 320 ಎಚ್‌ಪಿ ಸಾಮರ್ಥ್ಯದ 2 ಸೆಂಟ್ರಿ ಪ್ಯೂಗಲ್‌ ಪಂಪ್‌ ಸೆಟ್‌, 2.83 ಕೋಟಿ ರೂ. ವೆಚ್ಚದಲ್ಲಿ 300 ಎಚ್‌ಪಿ ಸಾಮರ್ಥ್ಯದ ಸೆಂಟ್ರಿಪ್ಯೂಗಲ್‌ ಪಂಪ್‌ಸೆಟ್‌ ಬದಲಾವಣೆ ಮಾಡಲಾಗುತ್ತಿದೆ. 30.90 ಕೋಟಿ ರೂ. ವೆಚ್ಚದಲ್ಲಿ 400 ಮಿಮೀ ವ್ಯಾಸದ ಡಿಐ ಏರುಕೊಳವೆ ಮಾರ್ಗವನ್ನು 30 ಕಿಮೀ ತನಕ ಅಳವಡಿಕೆ ಮಾಡಲಾಗುತ್ತದೆ. 

61 ಲಕ್ಷ ರೂ. ವೆಚ್ಚದಲ್ಲಿ 9.08 ಎಂಎಲ್‌ ಡಿ ಸಾಮರ್ಥ್ಯದ ಜಲ ಶುದ್ಧೀಕರಣ ಘಟಕಕ್ಕೆ ಕಾಯಕಲ್ಪ ನೀಡಲಾಗುತ್ತಿದೆ. 4.40 ಕೋಟಿ ರೂ. ವೆಚ್ಚದಲ್ಲಿ 7 ಜಲಸಂಗ್ರಹಾಗಾರಗಳಿಗೆ 10 ಕಿಮೀ ಫೀಡರ್‌ ಕೊಳವೆಮಾರ್ಗಗಳ ಬದಲಾವಣೆ ಮಾಡಲಾಗುತ್ತಿದ್ದು, ಭೂಸ್ವಾ ಧೀನ ವೆಚ್ಚವೂ ಇದರಲ್ಲಿ ಸೇರಿದೆ.

10 ಲಕ್ಷ ಲೀಟರ್‌ ಸಾಮರ್ಥ್ಯದ ಎರಡು ಟ್ಯಾಂಕ್‌ ನಿರ್ಮಿಸಲು 2.78 ಕೋಟಿ ರೂ. ವ್ಯಯಿಸಲಾಗುತ್ತದೆ. 1.45 ಕೋಟಿ ರೂ.ಗಳಲ್ಲಿ ಕಾಮನಬಾವಿ ಮತ್ತು ಬುರುಜನಹಟ್ಟಿಯಲ್ಲಿ ನೆಲಮಟ್ಟದ ಜಲ ಸಂಗ್ರಹಾಗಾರದಲ್ಲಿನ ಟ್ಯಾಂಕ್‌ಗಳ ಪುನಶ್ಚೇತನ ಮಾಡಲಾಗುವುದು. 94 ಲಕ್ಷ ರೂ.ಗಳಲ್ಲಿ ವೆಚ್ಚದಲ್ಲಿ ಸರ್ಚ್‌ ಪ್ರೊಟೆಕ್ಷನ್‌ ಡಿವೈಸ್‌ ಅಳವಡಿಸಲಾಗುತ್ತದೆ.

ಅಟಲ್‌ ನಗರ ಪರಿವರ್ತನಾ ಪುನರುಜ್ಜೀವನ ಅಭಿಯಾನ (ಅಮೃತ್‌) ಯೋಜನೆಯಡಿ 47.65 ಕೋಟಿ ರೂ.
ಗಳ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಪೈಪ್‌ಲೈನ್‌ ಕಾಮಗಾರಿಯನ್ನು ಮೇಲ್ದರ್ಜೆಗೇರಿಸಲಾಗಿದೆ. ಈ
ಅನುದಾನದಲ್ಲಿ ಶೇ. 50ರಷ್ಟು ಕೇಂದ್ರ ಸರ್ಕಾರದ ಪಾಲು, ಶೇ. 20ರಷ್ಟು ರಾಜ್ಯ ಸರ್ಕಾರದ ಪಾಲು. ಇನ್ನುಳಿದ ಶೇ. 30ರಷ್ಟು ಪಾಲನ್ನು ನಗರಸಭೆ ಭರಿಸಬೇಕಿದೆ. ನೀರು ಸರಬರಾಜು ಮಾಡುವ ಪೈಪ್‌ ಲೈನ್‌ ಕಾಮಗಾರಿ ಮೇಲ್ದರ್ಜೆಗೇರಿಸಲಾಗಿದೆ. ಇದರಿಂದ ನೀರು ಪೂರೈಕೆ ಅಡೆತಡೆಗಳು ನಿವಾರಣೆಯಾಗಬಹುದು ಎಂಬ ನಿರೀಕ್ಷೆ ಹೊಂದಲಾಗಿದೆ

ಹಿರಿಯೂರು-ಚಿತ್ರದುರ್ಗ ಮಧ್ಯೆ ಪೈಪ್‌ಲೈನ್‌ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರದಲ್ಲೇ ಪೂರ್ಣಗೊಳಿಸಿ ನಿರಂತರವಾಗಿ ನೀರು ಪೂರೈಕೆ ಮಾಡಲಾಗುತ್ತದೆ.
 ಹನುಮಂತಪ್ಪ, ಇಇ, ಕ.ನ.ನೀ. ಸ ಮತ್ತು ಒಳ ಚರಂಡಿ ಮಂಡಳಿ ವಿಭಾಗ

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.