ಅರ್ಪಣಾ ಮನೋಭಾವದಿಂದ ಉತ್ತಮ ಸೇವೆ: ಶಾಸಕ ಅಂಗಾರ


Team Udayavani, Jun 11, 2018, 3:40 PM IST

11-june-14.jpg

ಸುಬ್ರಹ್ಮಣ್ಯ: ಸಹಕಾರಿ ಸಂಘಗಳು ದೇಶದ ಆರ್ಥಿಕ ಪ್ರಗತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ರೈತರ ಹಿತ ಕಾಪಾಡುವಲ್ಲಿ ಸಂಘಗಳ ಪಾತ್ರ ಬಹಳಷ್ಟು ಇದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅಧಿಕಾರಿಗಳು ಸೇವೆ ಮತ್ತು ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸದಾಗ ಮತ್ತಷ್ಟೂ ಸೇವೆಗಳು ಸಿಗಲು ಸಹಕಾರಿಯಾಗುತ್ತವೆ ಎಂದು ಶಾಸಕ ಎಸ್‌. ಅಂಗಾರ ಹೇಳಿದರು.

ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅತ್ಯಾಧುನಿಕ ನೆಟ್‌ ಬ್ಯಾಂಕಿಂಗ್‌ ಮತ್ತು ನಿವೃತ್ತ ಕಾರ್ಯ ನಿರ್ವಹಣಾಧಿಕಾರಿ ಎ.ಎಸ್‌.ರಾಘವೇಂದ್ರ ಅವರಿಗೆ ಶುಕ್ರವಾರ ನಡೆದ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ, ಯೇನೆಕಲ್ಲು ಪ್ರಾ.ಕೃ.ಪ.ಸಹಕಾರ ಸಂಘದ ಅಧ್ಯಕ್ಷ
ಕೆ.ಎಸ್‌. ದೇವರಾಜ್‌ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಐಸಿಐಸಿ ಬ್ಯಾಂಕ್‌ನ ಸಹಯೋಗದಲ್ಲಿ ನೂತನವಾಗಿ ಸಂಘದಲ್ಲಿ ಆರಂಭಗೊಂಡ ನೆಟ್‌ಬ್ಯಾಂಕ್‌ ಸೇವೆ, ಸಂಘದ ನೂತನ ವ್ಯವಸ್ಥಿತ ಸಭಾಂಗಣವನ್ನು ಶಾಸಕ ಅಂಗಾರ ಉದ್ಘಾಟಿಸಿ ಬಳಿಕ ಬೀಳ್ಕೊಡುಗೆ ಹಾಗೂ ಸಮ್ಮಾನ ಸಮಾರಂಭವನ್ನು ಅವರು ಉದ್ಘಾಟಿಸಿದರು.

ಸಮ್ಮಾನ
ಬಳಿಕ ಸುಮಾರು 40 ವರ್ಷಗಳ ಕಾಲ ಸಂಘದಲ್ಲಿ ಸೇವೆ ಸಲ್ಲಿಸಿ ಸಂಘದ ಪ್ರಗತಿಗೆ ಕಾರಣರಾದ ನಿವೃತ್ತ ಕಾರ್ಯ ನಿರ್ವಹಣಾದಿಕಾರಿ ಎ.ಎಸ್‌.ರಾಘವೇಂದ್ರ ಹಾಗೂ ಲತಾ ದಂಪತಿಗಳನ್ನು ಸಹಾಯಕ ನಿಬಂಧಕ ಗೋಪಾಲಯ್ಯ ಸಮ್ಮಾನಿಸಿದರು. ಇವರಿಗೆ ಬಂಗಾರ ಉಂಗುರ, ಸನ್ಮಾನಪತ್ರ, ಫಲ ಪುಷ್ಪ ನೀಡಿ ಗೌರವಿಸಲಾಯಿತು.

ಪತ್ರಕರ್ತ ಹರೀಶ್‌ ಬಂಟ್ವಾಳ್‌ ಅಭಿನಂದನಾ ಭಾಷಣ ಮಾಡಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸುಶೀಲಾ ಎಚ್‌., ಪುತ್ತೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಗೋಪಾಲಯ್ಯ, ಐಸಿಐಸಿ ಬ್ಯಾಂಕ್‌ನ ರೀಜನಲ್‌ ಮ್ಯಾನೆಜರ್‌ ಸತೀಶ್‌ ಬಿ.ಆರ್‌. ನಿವೃತ್ತ ಇಒ ಎ.ಎಸ್‌.ರಾಘವೇಂದ್ರ, ಲತಾ ರಾಘವೇಂದ್ರ, ಜೇಸಿ ವಲಯ ಉಪಾಧ್ಯಕ್ಷ ರವಿಕಕ್ಕೆಪದವು, ಯೇನೆಕಲ್ಲು ಶ್ರೀ ಬಚ್ಚನಾಯಕ ಮತ್ತು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಬಾನಡ್ಕ ಮುಖ್ಯಅತಿಥಿಗಳಾಗಿದ್ದರು. ಸಂಘದ ಉಪಾಧ್ಯಕ್ಷ ಎನ್‌.ಕೆ. ಮನೋಹರ ನಾಳ, ನೂತನ ಕಾರ್ಯನಿರ್ವಹಣಾಧಿಕಾರಿ ಬಿ. ಶಿವರಾಮ್‌, ನಿರ್ದೇಶಕರಾದ ಲೀಲಾವತಿ ಉಪ್ಪಳಿಕೆ, ಕೆ.ವಿ. ವೆಂಕಟ್ರಮಣ ಕೆಂಬ್ರೋಳಿ,
ಅನಿತಾ ಪುಂಡಿಗದ್ದೆ, ದಯಾನಂದ ಕುಕ್ಕಪ್ಪನಮನೆ, ಪೂರ್ಣಚಂದ್ರ ತುಂಬತ್ತಾಜೆ, ಭಾಸ್ಕರ ಪೂಜಾರಿ ಉಜಿರ್‌ಕೋಡಿ, ಪೆರ್ನ ಪದ್ನಡ್ಕ, ಸಂಘದ ಮೇಲ್ವಿಚಾರಕ ಮನೋಜ್‌ ಮಾಣಿಬೈಲು ಉಪಸ್ಥಿತರಿದ್ದರು.

ಎನ್‌.ಕೆ. ಮನೋಹರ ನಾಳ ಸ್ವಾಗತಿಸಿದರು. ಸಂಘದ ಬಿ. ಶಿವರಾಮ್‌ ವಂದಿಸಿದರು. ಭರತ್‌ ನೆಕ್ರಾಜೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯರು, ಇತರ ಸಹಕಾರ ಸಂಘಗಳು ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗಳು, ಸದಸ್ಯರು, ರೈತರು ಮತ್ತು ಹಿರಿಯ ನಿರ್ದೇಶಕರು, ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.