ಭಯ ಬೀಳಿಸುತ್ತೆ ಗ್ರಾಫಿಕ್‌ ಮಗು


Team Udayavani, Jun 12, 2018, 10:58 AM IST

kelavu-dinagala-nantara.jpg

ಗ್ರಾಫಿಕ್‌ನಲ್ಲಿ ಸಿನಿಮಾದವರು ಏನೇನನ್ನೋ ತೋರಿಸಿಬಿಡುತ್ತಾರೆ. “ಬಾಹುಬಲಿ’ ಎಂಬ ಸಿನಿಮಾ ಸಿಂಗಾರಗೊಂಡಿದ್ದೇ ಗ್ರಾಫಿಕ್‌ನಿಂದ. ಈಗಂತೂ ಗ್ರಾಫಿಕ್‌ ಸ್ಪರ್ಶವಿಲ್ಲದೇ ಸಿನಿಮಾ ಮುಗಿಯುವುದೇ ಇಲ್ಲ ಎಂಬಂತಾಗಿದೆ. ಈಗಾಗಲೇ ಗ್ರಾಫಿಕ್‌ನಲ್ಲಿ ಏನೇನ್ನನೋ ಸೃಷ್ಟಿಸಿದ್ದಾರೆ. ಈಗ ಇಲ್ಲೊಂದು ತಂಡ ಮಗುವನ್ನೇ ಸೃಷ್ಟಿಸಿದೆ. ಅದು “ಕೆಲವು ದಿನಗಳ ನಂತರ’ ಚಿತ್ರತಂಡ.

ಹೌದು, “ಕೆಲವು ದಿನಗಳ ನಂತರ’ ಎಂಬ ಸಿನಿಮಾವೊಂದು ತಯಾರಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇದೇ 22 ರಂದು ತೆರೆಕಾಣುತ್ತಿದೆ. ಇದು ಹಾರರ್‌ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಆರು ತಿಂಗಳ ಮಗುವಿನ ಪಾತ್ರ ಕೂಡಾ ಪ್ರಮುಖವಾಗಿದೆ. ಚಿತ್ರತಂಡ ಅದನ್ನು ಗ್ರಾಫಿಕ್‌ನಲ್ಲಿ ಮಾಡಿದ್ದು, ಟ್ರೇಲರ್‌ ನೋಡಿದವರು ಇಷ್ಟಪಟಿದ್ದಾರೆಂಬ ಖುಷಿಯಲ್ಲಿದೆ ಚಿತ್ರತಂಡ.

ಈ ಗ್ರಾಫಿಕ್‌ ಮಗು ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆಯಂತೆ. ನಿರ್ದೇಶಕ ಶ್ರೀನಿ ಹೇಳುವಂತೆ, ಕನ್ನಡ ಚಿತ್ರಗಳಲ್ಲಿ ಇದೇ ಮೊದಲ ಬಾರಿಗೆ ಗ್ರಾಫಿಕ್‌ನಲ್ಲಿ ಮಗು ಸೃಷ್ಟಿಸಲಾಗಿದೆ. ಇದಕ್ಕಾಗಿ ಗ್ರಾಫಿಕ್‌ ತಂಡ ಒಂದು ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡಿದೆಯಂತೆ. ಜೊತೆಗೆ ನಿರ್ಮಾಪಕರು ಸಾಕಷ್ಟು ಹಣವನ್ನು “ಗ್ರಾಫಿಕ್‌ ಮಗು’ವಿಗೆ ಖರ್ಚು ಮಾಡಿದ್ದಾರೆ. 

ಮೊದಲೇ ಹೇಳಿದಂತೆ “ಕೆಲವು ದಿನಗಳ ನಂತರ’ ಚಿತ್ರ ಹಾರರ್‌ ಸಿನಿಮಾವಾಗಿದ್ದು, ಪ್ರೇಕ್ಷಕರಿಗೆ ಭಯಾನಕವಾಗಿ ಹಾರರ್‌ ಫೀಲ್‌ ಕೊಡಲು ಸಾಕಷ್ಟು ತಾಂತ್ರಿಕ ಅಂಶಗಳನ್ನು ಬಳಸಿಕೊಳ್ಳಲಾಗಿದೆಯಂತೆ. ನಿರ್ದೇಶಕ ಶ್ರೀನಿ ಹೇಳುವಂತೆ, “ಕೆಲವು ದಿನಗಳ ನಂತರ’ ಕನ್ನಡ ಪ್ರೇಕ್ಷಕರಿಗೆ ಹೊಸ ಬಗೆಯ ಹಾರರ್‌ ಫೀಲ್‌ ನೀಡಲಿದೆ. ಒಂದು ಗುಂಪು ಕಾರಿನಲ್ಲಿ ಹೊರಗಡೆ ಹೋಗುವಾಗ ಎದುರಾಗುವ ಸನ್ನಿವೇಶಗಳನ್ನಿಟ್ಟುಕೊಂಡು ಈ ಸಿನಿಮಾದ ಕಥೆ ಸಾಗುತ್ತದೆಯಂತೆ.  

ಇತ್ತೀಚೆಗೆ ಚಿತ್ರತಂಡದ ನೂರಕ್ಕೂ ಹೆಚ್ಚು ಸದಸ್ಯರು ಚಿತ್ರದ ಆಡಿಯೋ ಬಿಡುಗಡೆ ದಿನ ನೇತ್ರದಾನ ಮಾಡಿ ಸುದ್ದಿಯಾಗಿದ್ದರು. ಇನ್ನು, ಚಿತ್ರದಲ್ಲಿ ಶುಭಾ ಪೂಂಜಾ ಪ್ರಮುಖ ಪಾತ್ರ ಮಾಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ಪವನ್‌, ಲೋಕೇಶ್‌ ನಟಿಸಿದ್ದಾರೆ.  ಚಿತ್ರಕ್ಕೆ ರಾಕಿ ಸೋನು ಸಂಗೀತವಿದೆ. ಚಿತ್ರವನ್ನು ಮುತ್ತುರಾಜ್‌, ವಸಂತ್‌ಕುಮಾರ್‌ ಹಾಗೂ ಚಂದ್ರಕುಮಾರ್‌ ಸೇರಿ ನಿರ್ಮಿಸಿದ್ದಾರೆ. 

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.