ಪಂಚಭೂತಗಳಲ್ಲಿ ಬಿ.ಎಸ್‌.ಪಾಟೀಲ ಸಾಸನೂರ ಲೀನ


Team Udayavani, Jun 12, 2018, 11:02 AM IST

vij-1.jpg

ತಾಳಿಕೋಟೆ: ಹಿರಿಯ ಮುತ್ಸದ್ದಿ, ಮಾಜಿ ಸಚಿವ ಬಿ.ಎಸ್‌. ಪಾಟೀಲ (ಸಾಸನೂರ) ಅವರ ಅಂತ್ಯಕ್ರಿಯೆ ಹಿರೂರ ಗ್ರಾಮದ ಭೋಗೇಶ್ವರ ಪ್ರೌಢಶಾಲಾ ಆವರಣದಲ್ಲಿ ರಡ್ಡಿ ಸಮಾಜದ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನೆರವೇರಿತು.

ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಮಾತನಾಡಿ, ಜನ ಸೇವೆಯೇ ಜನಾರ್ಧನ ಸೇವೆ
ಎಂದು ಜನರ ಮಧ್ಯೆಯೇ ಜೀವನ ನಡೆಸುವುದರೊಂದಿಗೆ ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದ ಮಾಜಿ ಸಚಿವ ಬಿ.ಎಸ್‌. ಪಾಟೀಲ (ಸಾಸನೂರ) ಅವರ ಅಗಲಿಕೆ ಕೇವಲ ಅವರ ಕುಟುಂಬದವರಿಗೆ ನಷ್ಟವಲ್ಲ, ಇಡಿ ರಾಜ್ಯಕ್ಕೆ
ತುಂಬಲಾರದಂತಹ ನಷ್ಟ ಉಂಟಾಗಿದೆ ಎಂದರು.

ಮಾಜಿ ಸಚಿವ ಹಾಲಿ ಶಾಸಕ ಎಂ.ಬಿ. ಪಾಟೀಲ ಮಾತನಾಡಿ, ಬಿ.ಎಸ್‌. ಪಾಟೀಲ (ಸಾಸನೂರ) ಮತ್ತು ನಮ್ಮ ತಂದೆ ಬಿ.ಎಂ. ಪಾಟೀಲ ಅವರ ಸ್ನೇಹ ಸಂಬಂಧದೊಂದಿಗೆ ನಡೆದ ರಾಜಕಾರಣದ ಗರಡಿಯಲ್ಲಿ ಬೆಳೆದ ನಾನು ಸಾಸನೂರ ಅವರ ಕುಟುಂಬದ ಸದಸ್ಯರಲ್ಲೊಬ್ಬ. ಅವರ ಕುಟುಂಬದಲ್ಲಿ ಆಗು ಹೋಗುವ ಪ್ರತಿಯೊಂದರಲ್ಲಿಯೂ ಭಾಗಿಯಾಗಿ ಕಷ್ಟ ಸುಖಗಳೊಂದಿಗೆ ರಾಜಕಾರಣವೆಂಬುದನ್ನು ಹೇಗೆ ಮಾಡ ಬೇಕೆಂಬುದನ್ನು ಕಲಿತಿದ್ದೇನೆ. ನನ್ನ ರಾಜಕೀಯ ಜೀವನದ ಗುರುಗಳ ಸಾಲಿನಲ್ಲಿ ಬಿ.ಎಸ್‌. ಪಾಟೀಲ (ಸಾಸನೂರ) ಅವರು ಒಬ್ಬರಾಗಿದ್ದಾರೆಂದರು. 

ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಮಾತನಾಡಿ, ಹೂವಿನ ಹಿಪ್ಪರಗಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಎರಡು ಬಾರಿ 4 ಖಾತೆಗಳೊಂದಿಗೆ ಸಚಿವ ಸ್ಥಾನ ನಿಭಾಯಿಸಿದ ಧೀಮಂತ ರಾಜಕಾರಣಿ. ನೇರ ನಿಷ್ಟೂರ ರಾಜಕಾರಣಿ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದರು.

ಹಿರೂರ ಹಿರೇಮಠದ ಜಯಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ರಾಜ್ಯದ ರಾಜಕಾರಣದ ಇತಿಹಾಸದಲ್ಲಿಯೇ ಪರಿಭಾಷೆಯನ್ನು ಬರೆದಂತಹ ಸಾಸನೂರಿನ ನಂದಾದೀಪ ನಂದಿಹೋಗಿದ್ದು ಇದರಿಂದ ಜಿಲ್ಲೆಯಲ್ಲಿಯೇ ನಿಶಬ್ದ ವಾತಾವರಣ ನಿರ್ಮಾಣವಾಗಿದೆ. ಅವರು ಹಾಕಿಕೊಟ್ಟ ಪ್ರತಿಯೊಂದು ಮಾರ್ಗಗಳು ಎಲ್ಲರ ಜೀವನಕ್ಕೆ ದಾರಿ ದೀಪವಾಗಲಿವೆ. ಅವರ ದಾರಿಯಲ್ಲಿ ಎಲ್ಲರೂ ನಡೆಯಬೇಕೆಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ, ಅರುಣ ಶಹಾಪುರ, ಮಾಜಿ ಶಾಸಕ ಸಿ.ಎಸ್‌. ನಾಡಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಳಗಿ ಮಾಜಿ ಶಾಸಕ ಜಿ.ಟಿ. ಪಾಟೀಲ, ವಿಜುಗೌಡ ಪಾಟೀಲ, ಗುಂಡಕನಾಳಶ್ರೀ, ಮನಗೂಳಿಶ್ರೀ,
ಬ.ಬಾಗೇವಾಡಿಶ್ರೀ, ವಡವಡಗಿಶ್ರೀ, ಕುಂಟೋಜಿಶ್ರೀ, ಖಾಸತ ಮಠದಶ್ರೀ, ಅಂಕಲಗಿ ಶ್ರೀಗಳು ಒಳಗೊಂಡು ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.