ಅಟಲ್ ದೇಹಾರೋಗ್ಯ ಸ್ಥಿರ ; ಕಾನ್ಪುರದಲ್ಲಿ ಹೋಮ, ಹವನ
Team Udayavani, Jun 12, 2018, 11:17 AM IST
ಕಾನ್ಪುರ : ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ 93ರ ಹರೆಯದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೇಹಾರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ನಡುವೆ ಅವರು ಬೇಗನೆ ಗುಣಮುಖರಾಗಲೆಂದು ಹಾರೈಸಿ ಇಲ್ಲಿನ ಅನೇಕ ಬಿಜೆಪಿ ಕಾರ್ಯಕರ್ತರು ಇಂದು ಹೋಮ – ಹವನ ಮಾಡಿಸುತ್ತಿದ್ದಾರೆ.
ವಾಜಪೇಯಿ ಅವರು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದಾರೆ. ಸೋಂಕು ಸಂಪೂರ್ಣವಾಗಿ ಗುಣಮುಖವಾಗುವ ವರೆಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವುದಾಗಿ ವೈದ್ಯರು ತಿಳಿಸಿದ್ದಾರೆ.
ನಿನ್ನೆ ಸೋಮವಾರ ಅಟಲ್ ಅವರು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದೊಡನೆಯೇ ದೇಶಾದ್ಯಂತದಿಂದ ಅಪಾರ ಸಂಖ್ಯೆಯ ಜನರು ತ್ವರಿತ ಚೇತರಿಕೆಯನ್ನು ಹಾರೈಸಿ ಶುಭ ಕಾಮನೆಗಳನ್ನು ರವಾನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಎಲ್ ಕೆ ಆಡ್ವಾಣಿ, ಅಮಿತ್ ಶಾ, ರಾಜನಾಥ್ ಸಿಂಗ್, ಜೆ ಪಿ ನಡ್ಡಾ, ಹರ್ಷ ವರ್ಧನ್, ರಾಹುಲ್ ಗಾಂಧಿ ಸಹಿತ ಅನೇಕ ನಾಯಕರು ಆಸ್ಪತ್ರೆಗೆ ತೆರಳಿ ವಾಜಪೇಯಿ ಅವರನ್ನು ಭೇಟಿಯಾಗಿದ್ದಾರೆ. ಇನ್ನೂ ಅನೇಕ ಕಾಂಗ್ರೆಸ್ ನಾಯಕರು ಟ್ವಿಟರ್ ಮೂಲಕ ಅಟಲ್ ಅವರು ಬೇಗನೆ ಗುಣಮುಖವಾಗಲೆಂದು ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ