ಬೀಚ್‌ ಕಾಯಲು ಗೃಹರಕ್ಷಕ ಸಿಬಂದಿ ಸಜ್ಜು


Team Udayavani, Jun 13, 2018, 2:15 AM IST

home-security-12-6.jpg

ವಿಶೇಷ ವರದಿ – ಉಳ್ಳಾಲ: ಬೇಸಗೆಯಲ್ಲಿ ಸಮುದ್ರ ಕಿನಾರೆಯಲ್ಲಿ ಪ್ರವಾಸಿಗರ ಸಂಖ್ಯೆ ಸಾಮಾನ್ಯ. ಆದರೆ ಮಳೆಗಾಲದಲ್ಲಿ ಸಮುದ್ರ ಬಿರುಸುಗೊಂಡು ತಟಕ್ಕೆ ದೊಡ್ಡ ದೊಡ್ಡ ಅಲೆಗಳು ಬರುತ್ತವೆ. ಇಂತಹ ಅಲೆಗಳನ್ನು ನೋಡಲು ಮತ್ತು ಅದರೊಂದಿಗೆ ಆಟವಾಡಲು ಬರುವ ಯುವಕರ ತಂಡವೇ ಇರುತ್ತದೆ. ಅದರಲ್ಲೂ ಉಳ್ಳಾಲ ದರ್ಗಾ ಸಹಿತ ಸ್ಥಳೀಯ ಪ್ರವಾಸಿ ತಾಣಗಳಿಗೆ ಬರುವ ಹೊರ ಜಿಲ್ಲೆಗಳ ಪ್ರವಾಸಿಗರಿಗೆ ಮಳೆಗಾಲದ ಸಮುದ್ರದ ಅಬ್ಬರದ ಅರಿವಿರುವುದಿಲ್ಲ. ಕಳೆದ ಬಾರಿಯಂತೆ ಈ ಬಾರಿಯೂ ಉಳ್ಳಾಲ ಸಮುದ್ರ ತೀರ ಸಹಿತ ಕರಾವಳಿಯ ಎಂಟು ಸಮುದ್ರ ಕಿನಾರೆಗಳಿಗೆ ಗೃಹರಕ್ಷಕ ಸಿಬಂದಿಯನ್ನು ನೇಮಿಸಲಾಗಿದೆ.

ಜೀವರಕ್ಷಕದಳ ಹಾಗೂ ಸ್ಥಳೀಯ ಮೀನುಗಾರರ ಮತ್ತು ಜೀವರಕ್ಷಕರ ಸಹಕಾರದೊಂದಿಗೆ ಗೃಹರಕ್ಷಕ ಸಿಬಂದಿ ಕಳೆದ ಮಳೆಗಾಲದ ಸಂದರ್ಭದಲ್ಲೂ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಜೀವರಕ್ಷಕ ಈಜುಗಾರರು ಪ್ರವಾಸಿಗರಿಗೆ ಎಚ್ಚರಿಕೆ ನೀಡಿದರೂ ಅವರ ಮಾತಿಗೆ ಬೆಲೆ ಕೊಡುವುದಿಲ್ಲ. ಆದರೆ ಗೃಹರಕ್ಷಕ ಸಿಬಂದಿ ಯೂನಿಫಾರ್ಮ್ ನಲ್ಲಿರುವ ಕಾರಣ ಇವರ ಮಾತಿಗೆ ಬೆಲೆ ಕೊಡುತ್ತಾರೆ ಎನ್ನುವ ನಿಟ್ಟಿನಲ್ಲಿ ತಲಾ ಮೂವರಂತೆ ಗೃಹರಕ್ಷಕ ಸಿಬಂದಿಯನ್ನು ನೇಮಕ ಮಾಡಿದ್ದು, ಸಮುದ್ರ ತಟದಲ್ಲಿ ಕಾರ್ಯಾರಂಭ ಮಾಡಿದ್ದಾರೆ.

ಎಚ್ಚರಿಕೆ ಬೋರ್ಡ್‌ನೊಂದಿಗೆ ಹ್ಯಾಂಡ್‌ ಮೈಕ್‌
ಸಮುದ್ರ ಕಿನಾರೆಯಲ್ಲಿ ಸಮುದ್ರದ ಬದಿಯಿಂದ 50 ಮೀ. ದೂರದಲ್ಲಿ ಅಪಾಯಕಾರಿ ವಲಯ ಎಂದು ಗುರುತಿಸಿ ನಾಮಫಲಕವನ್ನು ಅಳವಡಿಸಲಾಗಿದೆ. ಇದರೊಂದಿಗೆ ಹ್ಯಾಂಡ್‌ ಮೈಕ್‌ಗಳನ್ನು ನೀಡಿದ್ದು, ಜನರಿಗೆ ಎಚ್ಚರಿಕೆಯನ್ನು ಈ ಮೈಕ್‌ ಮೂಲಕ ನೀಡಲು ಅವಕಾಶವಿದೆ. ಮಳೆಗಾಲದಲ್ಲಿ ಉಳ್ಳಾಲ ಮೊಗವೀರಪಟ್ಣ ಬೀಚ್‌ ಅತ್ಯಂತ ಅಪಾಯಕಾರಿ. ಒಂದೆಡೆ ಕಡಲ್ಕೊರೆತಕ್ಕೆ ಹಾಕಿರುವ ಕಲ್ಲುಗಳ ರಾಶಿ, ಎತ್ತರದಲ್ಲಿ ಚಿಮ್ಮುವ ಸಮುದ್ರದ ಅಲೆಗಳು ಪ್ರವಾಸಿಗರನ್ನು ಸೆಳೆಯುತ್ತದೆ. ಆದರೆ ಕಲ್ಲುಗಳ ರಾಶಿ ಅತ್ಯಂತ ಅಪಾಯಕಾರಿಯಾಗಿದ್ದು, ಪ್ರತೀ ವರ್ಷ ಹೊರ ಜಿಲ್ಲೆಗಳಿಂದ ಬಂದ ಪ್ರವಾಸಿಗರು ಇಲ್ಲಿ ಸಮುದ್ರ ಪಾಲಾಗುತ್ತಿರುವುದು ಸಾಮಾನ್ಯವಾಗಿದೆ. ಪಕ್ಷುಬ್ಧ  ಸಮುದ್ರದಲ್ಲಿ ಜೀವ ರಕ್ಷಕ ಈಜುಗಾರರು ಸಮುದ್ರಕ್ಕೆ ಇಳಿಯುವ ಸಾಹಸಕ್ಕೆ ಕೈ ಹಾಕುವುದಿಲ್ಲ. ಈ ನಿಟ್ಟಿನಲ್ಲಿ ಸಮುದ್ರದಲ್ಲಿ ಆಟವಾಡುವ ಬದಲು ಎಚ್ಚರಿಕೆಯಿಂದ ದೂರದಲ್ಲೇ ನೋಡಬೇಕು.

ಎಲ್ಲೆಲ್ಲಿ ಗೃಹರಕ್ಷಕ ದಳ ?
ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಆದೇಶದಂತೆ ಜಿಲ್ಲೆಯ ಕರಾವಳಿಯ ಎಂಟು ಸಮುದ್ರ ಕಿನಾರೆಗಳಲ್ಲಿ 24 ಗೃಹರಕ್ಷಕ ಸಿಬಂದಿ ಬೀಚ್‌ ಗಾರ್ಡ್‌ಗಳಾಗಿ ಕಾರ್ಯಾಚರಿಸುತ್ತಿದ್ದಾರೆ. ಸೋಮೇಶ್ವರ, ಉಳ್ಳಾಲ, ತಣ್ಣೀರುಬಾವಿ 1, ತಣ್ಣೀರುಬಾವಿ 2, ಪಣಂಬೂರು, ಸಸಿಹಿತ್ಲು, ಸುರತ್ಕಲ್‌, ಮುಕ್ಕ ಭಾಗಗಳಲ್ಲಿ ತಲಾ ಮೂರರಂತೆ ಗೃಹರಕ್ಷಕ ಸಿಬಂದಿ ಇದ್ದಾರೆ. ಹೆಚ್ಚು ಪ್ರವಾಸಿಗರು ಬರುವ ಸ್ಥಳವನ್ನು ಗುರುತಿಸಿ ಅವರಿಗೆ ಎಚ್ಚರಿಕೆ ನೀಡುವ ಕೆಲಸವನ್ನು ಗಾರ್ಡ್‌ಗಳು ಮಾಡುತ್ತಿದ್ದಾರೆ.

ಸ್ಥಳೀಯ ಜೀವರಕ್ಷಕ ದಳದ ಸಹಾಯ
ಜೀವರಕ್ಷಕ ಹಾಗೂ ಗೃಹರಕ್ಷಕ ಸಿಬಂದಿ ಕೊಡು- ಕೊಳ್ಳುವಿಕೆ ರೀತಿಯಲ್ಲಿ ಕಾರ್ಯಾಚರಿಸುತ್ತಾರೆ. ಗಾರ್ಡ್‌ಗಳು ಎಲ್ಲ ತರಬೇತಿಯನ್ನು ಪಡೆದವರಾದರೂ, ರಭಸದಿಂದ ಕೂಡಿದ ಸಮುದ್ರದಲ್ಲಿ ಈಜುವುದು ಕಷ್ಟಕರ. ಅದಕ್ಕಾಗಿ ಸ್ಥಳೀಯ ಜೀವರಕ್ಷಕ ದಳದ ಸಹಾಯದ ಜತೆಗೆ ಕಾರ್ಯಾಚರಣೆ ನಡೆಯುತ್ತಿದೆ.
– ಡಾ| ಮುರಲೀ ಮೋಹನ್‌ ಚೂಂತಾರು, ಕಮಾಂಡೆಂಟ್‌, ಜಿಲ್ಲಾ ಗೃಹರಕ್ಷದಳ

ಸಿಬಂದಿಗಳಿದ್ದರೆ ಸಹಕಾರ
ಮೀನುಗಾರಿಕೆಗೆ ರಜೆಯಾಗಿರುವುದರಿಂದ ಹೆಚ್ಚಿನ ಸಮಯವನ್ನು ನಾವು ಉಳ್ಳಾಲ ಬೀಚ್‌ ನಲ್ಲಿ ಕಳೆಯುವುದರಿಂದ ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತೇವೆ. ಆದರೆ ಕೆಲವರು ನಮ್ಮ ಮೇಲೆ ರೇಗುತ್ತಾರೆ ಇಂತಹ ಸಂದರ್ಭದಲ್ಲಿ ಪೊಲೀಸರು ಮತ್ತು ಗೃಹರಕ್ಷಕದಳದ ಸಿಬಂದಿಗಳಿದ್ದರೆ ನಮಗೆ ಸಹಕಾರಿಯಾಗುತ್ತದೆ.
– ವಾಸು ಟಾಗೋರ್‌, ಶಿವಾಜಿ ಜೀವರಕ್ಷಕ ಈಜುಗಾರರ ಸಂಘದ ಸದಸ್ಯ

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.