ಮಳೆಹಾನಿ ಪರಿಹಾರ ಶೀಘ್ರ ಕೊಡಿ
Team Udayavani, Jun 13, 2018, 12:28 PM IST
ಮೂಡಿಗೆರೆ: ಮಳೆಯಿಂದ ಹಾನಿಗೊಳಗಾದ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಶೀಘ್ರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.
ಕಳೆದ ಇಪ್ಪತ್ತು ವರ್ಷಗಳ ನಂತರ ಈ ಬಾರಿ ಮುಂಗಾರು ದಾಖಲೆ ಪ್ರಮಾಣದಲ್ಲಿ ಸುರಿಯುತ್ತಿದ್ದು, ಅತಿವೃಷ್ಟಿ
ಪೀಡಿತ ಪ್ರದೇಶಗಳಾದ ಹಂತೂರು, ಕಣಚೂರು, ಉಗ್ಗೇಹಳ್ಳಿ ದೇವವೃಂದ, ಗೌಡಹಳ್ಳಿ, ಭೈರಾಪುರ, ಬೆಟ್ಟದಮನೆ
ಮುಂತಾದ ಭಾಗಗಳಲ್ಲಿ ಪರಿಶೀಲನೆ ನಡೆಸಿ ಮಾತನಾಡಿದರು.
ಉಗ್ಗೇಹಳ್ಳಿ ತಡೆಗೋಡೆ ಸಮೀಪ ಮಳೆನೀರು ಬಂದಿದ್ದು, ಉಗ್ಗೇಹಳ್ಳಿ ಕಾಲೋನಿ ಮರು ವಸತಿ ಕಲ್ಪಿಸಿಕೊಡಲು ಶೀಘ್ರ ಕ್ರಮ ಕೈಗೊಳ್ಳಬೇಕಿದ್ದು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು. ಹೇಮಾವತಿ ನದಿ ಪಾತ್ರ ಉಕ್ಕಿ ಹರಿಯುತ್ತಿದ್ದು, ಭತ್ತ, ಕಾಫಿ, ಕಾಳುಮೆಣಸು, ಮತ್ತು ತರಕಾರಿ ನಾಶವಾಗಿವೆ.ಅಲ್ಲದೆ ಗ್ರಾಮದಲ್ಲಿ ವಿದ್ಯುತ್
ಸಂಪರ್ಕ ಸಂಪೂರ್ಣ ಕಡಿತಗೊಂಡಿವೆ, ರಸ್ತೆಗಳು ಚರಂಡಿಗಳಾಗಿವೆ. ಸರ್ಕಾರಕ್ಕೆ ಕೂಡಲೇ ಅತಿವೃಷ್ಟಿ ಪರಿಹಾರ ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ನಂತರ ಅಂಗಡಿ ದೇವಸ್ಥಾನಕ್ಕೆ ತೆರಳಿ ಮಳೆ ಹನಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹೋಬಳಿ ಅಧ್ಯಕ್ಷ ಸುನೀಲ್ ನಿಡಗೂಡು, ರಘು ಜನ್ನಾಪುರ, ವಿನೋದ್ ಕಣಚೂರು, ಸಂದರ್ಶ್, ಚಂದ್ರು ಉಲ್ಲೇಮನೆ ಮತ್ತಿತರರು ಇದ್ದರು.
ದಾಖಲೆ ಮಳೆ: ದೇವವೃಂದ, ಕಣಚೂರು, ಗೌಡಹಳ್ಳಿ, ಊರುಬಗೆಯಲ್ಲಿ ಕಳೆದ 24 ಗಂಟೆಯಲ್ಲಿ 22 ಇಂಚಿಗೂ
ಅಧಿಕ ಮಳೆಯಾಗಿದೆ. ಹೇಮಾವತಿ ಸೇರಿದಂತೆ ಈಚುವಳ್ಳಿ ಹಳ್ಳ, ಉಲಿಗೆ ಹಳ್ಳ ಸೇರಿದಂತೆ ಸಣ್ಣ ಪುಟ್ಟ ನದಿಗಳು ತುಂಬಿ ಹರಿಯುತ್ತಿದ್ದು, ಗದ್ದೆ ಬಯಲು ಪ್ರದೇಶಗಳನ್ನು ಆಕ್ರಮಿಸಿಕೊಂಡಿದೆ. ಮಳೆಯೊಂದಿಗೆ ಗುಡುಗು ಸಿಡಿಲು ಆರ್ಭಟಿಸಿದ್ದು ಇದರಿಂದ ನದಿ ಪಾತ್ರದ ಪಕ್ಕದ ಕೃಷಿ ಬೆಳೆಗಳು ಸೇರಿದಂತೆ ಮರಗಿಡಗಳನ್ನು ಕೊಚ್ಚಿಕೊಂಡು ಸಾಗುತ್ತಿದೆ. ಗುಡ್ಡ ಬೆಟ್ಟಗಳಿಂದ ಹರಿಯುವ ನೀರಿನ ರಭಸಕ್ಕೆ ಅಲ್ಲಲ್ಲಿ ಭೂ ಕುಸಿತ ಉಂಟಾಗಿದೆ.
ಗೌಡಹಳ್ಳಿ ಸಮೀಪದ ಹೆಮ್ಮದಿ ಗ್ರಾಮದಲ್ಲಿ ನಾರಾಯಣ ಗೌಡ ಎಂಬುವವರ ಮನೆಗೋಡೆ ಕುಸಿದಿದೆ. ಮಳೆ ಸಂಪೂರ್ಣ ನಿಂತ ಮೇಲೆ ಅಂದಾಜು ದೊರಕಲಿದ್ದು, ಒಟ್ಟಾರೆ 2 ದಶಕಗಳ ನಂತರ ಮಳೆ ತನ್ನ ವೈಭವವನ್ನು ಮೆರೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ