ಸಚಿವ ವೆಂಕಟರಾವ್‌ ನಾಡಗೌಡರಿಗೆ ಅದ್ಧೂರಿ ಸ್ವಾಗತ


Team Udayavani, Jun 13, 2018, 2:09 PM IST

rayachuru.jpg

ಸಿಂಧನೂರು: ಸಚಿವರಾದ ನಂತರ ಪ್ರಥಮ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಪಶು ಸಂಗೋಪನಾ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಅವರಿಗೆ ಕ್ಷೇತ್ರದ ಜನತೆ ತಾಲೂಕಿನ ದಡೇಸುಗೂರು ಹತ್ತಿರದ ತುಂಗಭದ್ರಾ ನದಿ ಬಳಿ ಅದ್ಧೂರಿಯಾಗಿ ಸ್ವಾಗತಿಸಿ ತೆರೆದ ವಾಹನದಲ್ಲಿ ಸಿಂಧನೂರುವರೆಗೆ ಮೆರವಣಿಗೆ ನಡೆಸಿದರು.

ಸಚಿವ ವೆಂಕಟರಾವ ನಾಡಗೌಡ ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ ದಡೇಸುಗೂರು ಗ್ರಾಮದ ದರ್ಗಾಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಸಿಂಧನೂರುವರೆಗೆ ಬರುವ ಎಲ್ಲ ಗ್ರಾಮ ಹಾಗೂ ಕ್ಯಾಂಪ್‌ ಗಳಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಹರಕೆ ತೀರಿಸಿದರು.

ಸಚಿವ ನಾಡಗೌಡ ತೆರೆದ ವಾಹನದಲ್ಲಿ ಬರುತ್ತಿದ್ದರೆ ಹಿಂದೆ ಹಿಂಬಾಲಕರ, ಕಾರ್ಯಕರ್ತರ ಸಾವಿರಾರು ವಾಹನ ಮೆರವಣಿಗೆಗೆ ಮೆರಗು ನೀಡಿದವು. ದಡೇಸುಗೂರು ಗ್ರಾಮಕ್ಕೆ 2 ಗಂಟೆ ಸುಮಾರಿಗೆ ಬಂದರೆ ಸಿಂಧನೂರು ತಲುಪುವ ವೇಳೆಗೆ ಸಂಜೆ 5:30 ಗಂಟೆ ಅಗಿತ್ತು. ಈ ಮಧ್ಯೆ ಶ್ರೀಪುರಂ ಜಂಕ್ಷನ್‌ನಲ್ಲಿರುವ ಮುಖಂಡ ಗುರ್ರಂ ಗುನ್ನೇಶ್ವರರಾವ್‌ ಅವರ ನಿವಾಸದಲ್ಲಿ ಸಚಿವರು ಮಧ್ಯಾಹ್ನ ಊಟ ಮಾಡಿದರು. 

ಮೆರವಣಿಗೆ ಸಿಂಧನೂರು ನಗರ ಪ್ರವೇಶಿಸುತ್ತಿದ್ದಂತೆ ಕಾರ್ಯಕರ್ತರು ಜೆಡಿಎಸ್‌ ಧ್ವಜಗಳನ್ನಿಡಿದುಕೊಂಡು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಜೊತೆಗೆ ಡೊಳ್ಳು ಕುಣಿತ, ಭಾಜಾ-ಭಜಂತ್ರಿಗಳು ಮೆರವಣಿಗೆಗೆ ಮೆರಗು ನೀಡಿದವು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ನಗರದ ಸತ್ಯಗಾರ್ಡನ್‌ಕ್ಕೆ ಆಗಮಿಸಿ ಸಮಾವೇಶ ನಡೆಸಲಾಯಿತು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಎಂ.ಲಿಂಗಪ್ಪ, ಜಿಪಂ ಸದಸ್ಯ ಎನ್‌. ಶಿವನಗೌಡ ಗೊರೇಬಾಳ, ಜೆಡಿಎಸ್‌ ಮುಖ್ಯ ಸಂಚಾಲಕ ಬಿ.ಹರ್ಷ, ವಕ್ತಾರ ಬಸವರಾಜ ನಾಡಗೌಡ, ಕಾರ್ಯಾಧ್ಯಕ್ಷ ಮಲ್ಲೇಶಗೌಡ, ನಾಗೇಶ ಹಂಚಿನಾಳ ಕ್ಯಾಂಪ್‌, ಡಿ.ಸತ್ಯನಾರಾಯಣ, ಜಿ.ಸತ್ಯನಾರಾಯಣ, ಎಸ್‌. ಕೃಷ್ಣಮೂರ್ತಿ, ಧರ್ಮನಗೌಡ ಮಲ್ಕಾಪುರ, ಅಶೋಕಗೌಡ ಗದ್ರಟಗಿ, ರಾಮನಗೌಡ ಮಲ್ಕಾಪುರ, ರಂಗಾರೆಡ್ಡಿ, ಚಂದ್ರಶೇಖರ ಮೈಲಾರ, ಕೆ.ಮರಿಯಪ್ಪ, ಸಾಯಿರಾಮಕೃಷ್ಣ, ನದೀಮುಲ್ಲಾ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟ್ರಾಫಿಕ್‌ ಜಾಮ್‌: ತಾಲೂಕಿನ ದಡೇಸುಗೂರು ಗ್ರಾಮದಿಂದಲೇ ಸಚಿವರನ್ನು ಮೆರವಣಿಗೆ ಮೂಲಕ ಸಿಂಧನೂರಿಗೆ ಬರಮಾಡಿಕೊಳ್ಳುವಾಗ ರಸ್ತೆಯುದ್ದಕ್ಕೂ ನೂರಾರು ವಾಹನಗಳು ನಿಂತು ಸಂಚಾರಕ್ಕೆ ಸಮಸ್ಯೆ ಆಯಿತು. ಟ್ರಾಕ್‌ ನಿಯಂತ್ರಣಕ್ಕೆ ಡಿವೈಎಸ್‌ಪಿ ಪ್ರದೀಪ ಕುಲ್ಕರ್ಣಿ, ಸಿಪಿಐ ನಾಗರಾಜ ಕಮ್ಮಾರ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಹರಸಾಹಸ ಪಟ್ಟರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.