ಮುಂಬಯಿಯಲ್ಲಿ ರಾಹುಲ್‌ ಚೊಚ್ಚಲ ಪತ್ರಿಕಾಗೋಷ್ಠಿ: ಕೇವಲ 2.45 ನಿಮಿಷ


Team Udayavani, Jun 13, 2018, 4:13 PM IST

rahul-mumbai-press-meet-700.jpg

ಮುಂಬಯಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಇಂದು ಬುಧವಾರ ಮುಂಬಯಿಯಲ್ಲಿ ತನ್ನ ಚೊಚ್ಚಲ ಪತ್ರಿಕಾ ಗೋಷ್ಠಿಯನ್ನು ನಡೆಸಿದರು. ಆದರೆ ಅದು ಕೇವಲ 2 ನಿಮಿಷ 45 ಸೆಕೆಂಡುಗಳಿಗೆ ಸೀಮಿತವಾಯಿತು. ಕುತೂಹಲದಿಂದ ನೆರದಿದ್ದ ನೂರಕ್ಕೂ ಅಧಿಕ ಪತ್ರಕರ್ತರಿಗೆ ತೀವ್ರ ನಿರಾಶೆ ಉಂಟಾಯಿತು.

ಬಾಂದ್ರಾದ ತಾಣವೊಂದರಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ನ ರಾಜ್ಯ ಮತ್ತು ನಗರ ಘಟಕದ ಪದಾಧಿಕಾರಿಗಳು ಮಾಧ್ಯಮ ಮಾಹಿತಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪತ್ರಕರ್ತರಿಗೆ ಅನೇಕ ಬಗೆಯ ನಿರ್ಬಂಧಗಳನ್ನು ವಿಧಿಸಲಾಯಿತು. 

ಅದಾಗಿ ಒಂದು ತಾಸಿನ ಬಳಿಕ ರಾಹುಲ್‌ ಗೋಷ್ಠಿಗೆ ಆಗಮಿಸಿದರು. ಆರಂಭಿಕ ಪರಿಚಯದ ಬಳಿಕ ಪತ್ರಕರ್ತರು ರಾಹುಲ್‌ಗೆ ಒಂದು ಪ್ರಶ್ನೆಯನ್ನು ಕೇಳಿದರು : 2019ರ ಲೋಕಸಭಾ ಚುನಾವಣೆಗಳಲ್ಲಿ ನೀವು ವಿರೋಧ ಪಕ್ಷಗಳ ಮೈತ್ರಿಕೂಟದ ನಾಯಕತ್ವವನ್ನು ವಹಿಸಲು ಬಯಸುತ್ತೀರಾ ?

ಈ ಪ್ರಶ್ನೆಗೆ ಉತ್ತರ ನೀಡುವ ಬದಲು ರಾಹುಲ್‌ ತಮ್ಮ ಎಂದಿನ ಶೈಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಜನತಾ ಪಾರ್ಟಿ ಮತ್ತು ಆರ್‌ಎಸ್‌ಎಸ್‌ ಬಗ್ಗೆ ಟೀಕಾ ಪ್ರಹಾರ ನಡೆಸಿದರು. ಇದು ಕೂಡ ಕೇವಲ ಎರಡು ನಿಮಿಷದಲ್ಲಿ ಮುಗಿದು ಹೋಯಿತು. ಅನಂತರ ರಾಹುಲ್‌ ದಿಢೀರನೆ ಎದ್ದು ನಿಂತು ಎಲ್ಲರಿಗೂ ಧನ್ಯವಾದ ಹೇಳಿ ತಮ್ಮ  ಚೊಚ್ಚಲ ಪತ್ರಿಕಾ ಗೋಷ್ಠಿಯನ್ನು ಇದ್ದಕ್ಕಿದ್ದಂತೆ ಮುಗಿಸಿದರು. 

ಅನೇಕ ಪತ್ರಕರ್ತರು ರಾಹುಲ್‌ ಪತ್ರಿಕಾಗೋಷ್ಠಿ ತಾಣವನ್ನು ನಿಗದಿತ ಸಮಯದೊಳಗೆ ತಲುಪಲು ಬೆಳಗ್ಗೆ 6 ಗಂಟೆಗೇ ತಮ್ಮ ಮನೆಯನ್ನು ಬಿಟ್ಟಿದ್ದರು. 

ಒಬ್ಬ ಕಾಂಗ್ರೆಸ್‌ ನಾಯಕ ಹೇಳಿದರು : “ರಾಹುಲ್‌ ಜೀ ಅವರಿಗೆ ನಾಗ್ಪುರ ಮತ್ತು ನಾಂದೇಡ್‌ಗೆ ಹೋಗುವುದಕ್ಕೆ ತಡವಾಗುತ್ತಿತ್ತು; ಅವರಿಗೆ ಇತರ ಕಾರ್ಯಕ್ರಮಗಳೂ ಇದ್ದವು’.

ಕಾಂಗ್ರೆಸ್‌ ನಾಯಕ ಸಂಜಯ್‌ ನಿರುಪಮ್‌ ಪತ್ರಕರ್ತರಲ್ಲಿ ಕ್ಷಮೆಕೋರಿ ಇದಕ್ಕೆ ಪಿಆರ್‌ ಟೀಮೇ ಕಾರಣ ಎಂದು ದೂರಿದರು. 

“ವಿದ್ಯುನ್ಮಾನ ಮಾಧ್ಯಮಕ್ಕೆ ರಾಹುಲ್‌ ಕೆಲವು ಬೈಟ್‌ಗಳನ್ನು ಮಾತ್ರವೇ ಕೊಡುತ್ತಾರೆ ಎಂದು ನಾವು ಮೊದಲೇ ತಿಳಿಸಿದ್ದೆವು; ರಾಹುಲ್‌ ಯಾವುದೇ ಪ್ರಶ್ನೆಗಳನ್ನು ಸ್ವೀಕರಿಸುವುದಿಲ್ಲ ಎಂದು ಮುದ್ರಣ ಮಾಧ್ಯಮದವರಿಗೆ ಸ್ಪಷ್ಟವಾಗಿ ಹೇಳಿದ್ದೆವು. ಕಾರ್ಯಕ್ರಮವು ವೇಳಾ ಪಟ್ಟಿಗೆ ಅನುಗುಣವಾಗಿ ನಡೆದಿದೆ’ ಎಂದು ನಿರುಪಮ್‌ ಮಾತು ಮುಗಿಸಿದರು. 

ಟಾಪ್ ನ್ಯೂಸ್

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

badminton

ಥಾಯ್ಲೆಂಡ್‌ ಓಪನ್‌ : ಪ್ರಶಸ್ತಿ ಸುತ್ತಿಗೆ ಚಿರಾಗ್‌-ಸಾತ್ವಿಕ್‌

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.