ಅಫ್ಘಾನ್‌ಗೆ ನಿಜವಾದ “ಟೆಸ್ಟ್‌


Team Udayavani, Jun 14, 2018, 6:00 AM IST

m-22.jpg

ಬೆಂಗಳೂರು: ಟೆಸ್ಟ್‌ ಕ್ರಿಕೆಟಿಗೆ ಮತ್ತೂಂದು ರಾಷ್ಟ್ರದ ಪ್ರವೇಶವಾಗುತ್ತಿದೆ. ಅದು “ಕಾಬೂಲ್‌ ಎಕ್ಸ್‌ಪ್ರೆಸ್‌’ ಖ್ಯಾತಿಯ ಅಫ್ಘಾನಿಸ್ಥಾನ. ಗುರುವಾರದಿಂದ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಭಾರತವನ್ನು ಎದುರಿಸುವ ಮೂಲಕ ಅಫ್ಘಾನ್‌ ಬಹುದಿನಗಳ ಕ್ರಿಕೆಟ್‌ ಪಂದ್ಯದಲ್ಲಿ ನಿಜವಾದ “ಟೆಸ್ಟ್‌’ ಎದುರಿಸಲಿದೆ.

ದೇಶದ ಬಹುತೇಕ ಕ್ರೀಡಾಭಿಮಾನಿಗಳು ರಶ್ಯದತ್ತ ಮುಖ ಮಾಡಿ ಮೆಸ್ಸಿ, ರೊನಾಲ್ಡೊ, ನೇಮರ್‌ ಮಂತ್ರ ಜಪಿಸುತ್ತಿರುವ ಸಂದರ್ಭದಲ್ಲೇ ಇತ್ತ ಕ್ರಿಕೆಟ್‌ ಅಭಿಮಾನಿಗಳು ರಶೀದ್‌ ಖಾನ್‌, ರಹಾನೆ, ಧವನ್‌ ಆಟವನ್ನು ಆಸ್ವಾದಿಸತೊಡಗಬೇಕಿದೆ. ಆದರೆ ಪಂದ್ಯಕ್ಕೆ ಮಳೆ ಭೀತಿ ತಪ್ಪಿದ್ದಲ್ಲ ಎಂಬುದು ಸದ್ಯದ ಸ್ಥಿತಿ.

“ನಿಂತು ಆಡುವ’ ಕಲೆಗಾರಿಕೆ
ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಈಗಾಗಲೇ ತನ್ನ ಛಾಪು ಮೂಡಿಸಿ ರುವ ಅಫ್ಘಾನಿಸ್ಥಾನಕ್ಕೆ 5 ದಿನಗಳ ಪಂದ್ಯಕ್ಕೆ ಹೊಂದಿಕೊಳ್ಳುವುದು ಆರಂಭದಲ್ಲಿ ಸಹಜವಾಗಿಯೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸ ಬಹುದು. ಬಾಂಗ್ಲಾದೇಶ ವಿರುದ್ಧ ಡೆಹ್ರಾ ಡೂನ್‌ನಲ್ಲಿ ನಡೆದ 3 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿರುವ ಅಫ್ಘಾನ್‌, ಚೊಚ್ಚಲ ಟೆಸ್ಟ್‌ ಪಂದ್ಯ ಕ್ಕಾಗಿ ಹೆಚ್ಚಿನ ಆತ್ಮವಿಶ್ವಾಸ ಗಳಿಸಿರು ವುದು ನಿಜ. ಆದರೆ “ನಿಂತು ಆಡುವ’ ಕಲೆಗಾರಿಕೆಯನ್ನು ಹಂತ ಹಂತವಾಗಿಯೇ ಕರಗತ ಮಾಡಿ ಕೊಳ್ಳ ಬೇಕಿದೆ. ಅಂಗಳಕ್ಕಿಳಿಯದ ಹೊರತು ಟೆಸ್ಟ್‌ ಅಂದರೇನೆಂಬುದು ಅರಿವಾಗದು ಎಂಬ ಅಫ್ಘಾನ್‌ ಕೋಚ್‌ ಫಿಲ್‌ ಸಿಮನ್ಸ್‌ ಹೇಳಿಕೆ ಹೆಚ್ಚು ಅರ್ಥಪೂರ್ಣ.

ಅಫ್ಘಾನ್‌ ಅತ್ಯುತ್ತಮ ಬೌಲಿಂಗ್‌ ಪಡೆಯನ್ನು ಹೊಂದಿರುವ ತಂಡ. ಅದರಲ್ಲೂ ಸ್ಪಿನ್‌ ವಿಭಾಗ ಹೆಚ್ಚು ಬಲಿಷ್ಠ. ರಶೀದ್‌ ಖಾನ್‌ ಈಗಾಗಲೇ ವಿಶ್ವ ಮಟ್ಟದ ಸ್ಪಿನ್ನರ್‌ ಆಗಿ ಗುರುತಿಸಿ ಕೊಂಡಾಗಿದೆ. ಇವರ ಟೆಸ್ಟ್‌ ಬೌಲಿಂಗ್‌ ಬಗ್ಗೆ ಕುತೂಹಲ ಸಹಜ. 

ಭಾರತ ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಸೇವೆಯಿಂದ ವಂಚಿತ ವಾಗಿದೆ. ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ. ಕೀಪಿಂಗ್‌ ಜಾಗಕ್ಕೆ ದಿನೇಶ್‌ ಕಾರ್ತಿಕ್‌ ಬಂದಿದ್ದಾರೆ. ಅಶ್ವಿ‌ನ್‌- ಜಡೇಜ ಜೋಡಿಯೊಂದಿಗೆ ಕುಲದೀಪ್‌ ಯಾದವ್‌ ಕೂಡ ಸ್ಪಿನ್‌ ವಿಭಾಗದಲ್ಲಿದ್ದಾರೆ. ಬ್ಯಾಟಿಂಗ್‌ ವಿಭಾಗದಲ್ಲಿ ಸ್ಥಳೀಯ ಆಟಗಾರ ಕೆ.ಎಲ್‌. ರಾಹುಲ್‌ ಅವಕಾಶ ಪಡೆಯಬಹುದೇ ಎಂಬುದೊಂದು ಕುತೂಹಲ.

ತಂಡಗಳು
ಭಾರತ: ಅಜಿಂಕ್ಯ ರಹಾನೆ (ನಾಯಕ), ಶಿಖರ್‌ ಧವನ್‌, ಮುರಳಿ ವಿಜಯ್‌, ಚೇತೇಶ್ವರ್‌ ಪೂಜಾರ, ಕೆ.ಎಲ್‌. ರಾಹುಲ್‌, ಕರುಣ್‌ ನಾಯರ್‌, ದಿನೇಶ್‌ ಕಾರ್ತಿಕ್‌ (ವಿ.ಕೀ.), ಹಾರ್ದಿಕ್‌ ಪಾಂಡ್ಯ, ಶಾದೂìಲ್‌ ಠಾಕೂರ್‌, ನವದೀಪ್‌ ಸೈನಿ, ಆರ್‌. ಅಶ್ವಿ‌ನ್‌, ರವೀಂದ್ರ ಜಡೇಜ, ಕುಲದೀಪ್‌ ಯಾದವ್‌, ಇಶಾಂತ್‌ ಶರ್ಮ, ಉಮೇಶ್‌ ಯಾದವ್‌.

ಅಫ್ಘಾನಿಸ್ಥಾನ: ಅಸ್ಕರ್‌ ಸ್ತಾನಿಕ್‌ಜಾಯ್‌ (ನಾಯಕ), ಮೊಹಮ್ಮದ್‌ ಶಾಜಾದ್‌, ಜಾವೇದ್‌ ಅಹ್ಮದಿ, ರೆಹಮಾನ್‌ ಶಾ, ಇಹಸಾನುಲ್ಲ ಜನತ್‌, ನಾಸಿರ್‌ ಜಮಾಲ್‌, ಹಶ್ಮತುಲ್ಲ ಶಾಹಿದಿ, ಅಫ್ಜರ್‌ ಜಜಾಯ್‌, ಮೊಹಮ್ಮದ್‌ ನಬಿ, ರಶೀದ್‌ ಖಾನ್‌, ಜಹೀರ್‌ ಖಾನ್‌, ಆಮಿರ್‌ ಹಮ್ಜ ಹೋಟಕ್‌, ಸಯ್ಯದ್‌ ಅಹ್ಮದ್‌ ಶಿರ್ಜಾದ್‌, ಯಾಮಿನ್‌ ಅಹ್ಮದ್‌ಜಾಯ್‌ ವಫಾದಾರ್‌, ಮುಜೀಬ್‌ ಉರ್‌ ರೆಹಮಾನ್‌.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.