ಹೇಳಿಕೆ ಕುರಿತು ಸಿಎಂ ಜತೆ ಚರ್ಚೆ: ಪರಮೇಶ್ವರ್
Team Udayavani, Jun 14, 2018, 7:15 AM IST
ಬೆಂಗಳೂರು: ವಿಧಾನಸೌಧದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ
ಹೇಳಿಕೆಯನ್ನು ತಳ್ಳಿಹಾಕಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಆ ರೀತಿಯ ಭ್ರಷ್ಟಾಚಾರ ಏನೂ
ಇಲ್ಲ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ಆ ರೀತಿ ಏಕೆ ಹೇಳಿದರು ಎಂಬುದು ಗೊತ್ತಿಲ್ಲ. ಈ ಕುರಿತು ಅವರೊಂದಿಗೆ ಮಾತನಾಡುತ್ತೇನೆ. ಮೇಲಾಗಿ, ಭ್ರಷ್ಟಾಚಾರ ಕಂಡು ಬಂದಲ್ಲಿ ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅದನ್ನು ನಿಯಂತ್ರಿಸುವುದಕ್ಕಾಗಿಯೇ ಎಸಿಬಿ, ಲೋಕಾಯುಕ್ತದಂತಹ ಸಂಸ್ಥೆಗಳಿವೆ ಎಂದು ತಿಳಿಸಿದರು.